ಬಳ್ಳಾರಿ | 23ನೇ ವಯಸ್ಸಿಗೇ ಮೇಯರ್ ಪಟ್ಟ ಅಲಂಕರಿಸಿದ ತ್ರಿವೇಣಿ

Date:

Advertisements
  • ಬಳ್ಳಾರಿಯ 4ನೇ ವಾರ್ಡ್‌ನ ಕಾಂಗ್ರೆಸ್ ಸದಸ್ಯೆ
  • ರಾಜ್ಯದಲ್ಲಿಯೇ ಅತೀ ಕಡಿಮೆ ವಯಸ್ಸಿನ ಮೇಯರ್

ರಾಜ್ಯದಲ್ಲಿ ವಿಧಾನಸಭಾ ಚುನಾವಣಾ ಕಾವು ರಂಗೇರಿದ್ದ ಹೊತ್ತಲ್ಲಿ, ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪಮೇಯರ್ ಚುನಾವಣೆಯೂ ಮತ್ತಷ್ಟು ಕಾವು ಹೆಚ್ಚಿಸಿತ್ತು. ಇದೀಗ ರಾಜ್ಯದಲ್ಲಿಯೇ ಅತೀ ಕಿರಿಯ ವಯಸ್ಸಿನ ಮೇಯರ್‌ ಆಯ್ಕೆಯಾಗುವುದರ ಮೂಲಕ ಕೂತೂಹಲಕ್ಕೆ ತೆರೆ ಬಿದ್ದಿದೆ.

ತಮ್ಮ ತಂದೆ ಹಾಗೂ ತಾಯಿಯ ಪ್ರಭಾವದಿಂದ 21ನೇ ವಯಸ್ಸಿಗೆ 4ನೇ ವಾರ್ಡ್‌ನ ಕಾಂಗ್ರೆಸ್ ಪಾಲಿಕೆ ಸದಸ್ಯರಾಗಿ ಆಯ್ಕೆಯಾಗಿದ್ದರು. ಹೆಲ್ತ್ ಇನ್ಸ್ಪೆಕ್ಟರ್ ಕೋರ್ಸ್ ಪೂರೈಸಿದ್ದ ಇವರು ಕೇವಲ 23 ವರ್ಷಕ್ಕೆ ಮೇಯರ್‌ ಆಗಿ ಆಯ್ಕೆಯಾಗಿದ್ದಾರೆ.

ಕಾಂಗ್ರೆಸ್ ಮುಖಂಡ ಡಿ ಸೂರಿ ಎಂಬುವವರು ಪುತ್ರಿಯಾಗಿರುವ ಕು. ತ್ರಿವೇಣಿ ಅವರ ಮೇಯರ್‌ ಆಗಿ ಆಯ್ಕೆ ಆಗುವುದರೊಂದಿಗೆ ಇಬ್ಬರು ಮೇಯರ್ ಗಳನ್ನು ಬಳ್ಳಾರಿ ನಗರಕ್ಕೆ ನೀಡಿದ ಕುಟುಂಬ ಎಂಬ ಹೆಸರಿಗೆ ಖ್ಯಾತಿ ಪಡೆದಿದೆ. ತ್ರಿವೇಣಿ ಅವರ ತಾಯಿ 2019ರಲ್ಲಿ ಮೇಯರ್ ಆಗಿ ಕಾರ್ಯ ನಿರ್ವಹಿಸಿದ್ದರು.

Advertisements
ಈ ಸುದ್ದಿ ಓದಿದ್ದೀರಾ? : ಕಾಂಗ್ರೆಸ್ ಕಟ್ಟಿಹಾಕಲು ಚುನಾವಣಾ ಕಾರ್ಯಕ್ಕೆ ಐಟಿ ಅಧಿಕಾರಿಗಳ ನೇಮಕ: ಸಿದ್ದರಾಮಯ್ಯ ಆರೋಪ

ಕಾಂಗ್ರೆಸ್‌ನಿಂದ ಉಮಾದೇವಿ, ಕುಬೇರ ಮತ್ತು ತ್ರಿವೇಣಿ ನಾಮಪತ್ರ ಸಲ್ಲಿಸಿದ್ದರು. ರಾಜ್ಯಸಭೆ‌ ಕಾಂಗ್ರೆಸ್‌ ಸದಸ್ಯ ಸಯ್ಯದ್ ನಾಸಿರ್‌ ಹುಸೇನ್ ಉಮಾದೇವಿ ಹಾಗೂ ಕುಬೇರ ಅವರಿಗೆ ನಾಮಪತ್ರ ಹಿಂಪಡೆಯಲು ಸೂಚಿಸಿದ್ದರು. ಇವರಿಬ್ಬರು ನಾಮ ಪತ್ರ ಪಡೆದಿದ್ದರಿಂದ ಡಿ. ತ್ರಿವೇಣಿ ಮತ್ತು ನಾಗರತ್ನ ಅವರ ನಡುವೆ ಸ್ಪರ್ಧೆ ಏರ್ಪಟ್ಟಿತ್ತು.

ಚುನಾವಣೆಯಲ್ಲಿ ಸದಸ್ಯರು, ಸಂಸದರು, ಶಾಸಕರು ಸೇರಿದಂತೆ ಒಟ್ಟು 44 ಜನ ಪಾಲ್ಗೊಂಡರು. ಇದರಲ್ಲಿ ಕಾಂಗ್ರೆಸ್ನ ತ್ರಿವೇಣಿಗೆ 28 ಮತ ಬಂದರೆ, ನಾಗರತ್ನ ಅವರಿಗೆ 16 ಮತಗಳಷ್ಟೇ ಬಂದವು. 33ನೇ ವಾರ್ಡ್ ನ ಜಾನಕಮ್ಮ ಉಪಮೇಯರ್‌ ಆಗಿ ಆಯ್ಕೆಯಾದರು.

2041e0a02b181b7e004154defbdc4ce9?s=150&d=mp&r=g
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ಯಾದಗಿರಿ | ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ನೀಡುವಂತೆ ಒತ್ತಾಯ

ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಕಲ್ಯಾಣ...

ರಾಯಚೂರು | ಸಾಗುವಳಿ ರೈತರಿಗೆ ಭೂಮಿಯನ್ನು ಮಂಜೂರು ಮಾಡಬೇಕು : ಮಾರೆಪ್ಪ ಹರವಿ

ಸಾಗುವಳಿ ಮಾಡುತ್ತಿರುವ ರೈತರಿಗೆ ಭೂ ಮಂಜೂರಾತಿ ನೀಡಬೇಕೆಂದು ಭೂಮಿ ಮತ್ತು ವಸತಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X