ಪಾಕಿಸ್ತಾನದಿಂದ ಶೆಲ್ ದಾಳಿ: ಜಮ್ಮು ಕಾಶ್ಮೀರದ 31 ಶಾಲೆಗಳಿಗೆ ಹಾನಿ

Date:

Advertisements

ಆಪರೇಷನ್ ಸಿಂಧೂರ ಆರಂಭವಾದ ಬಳಿಕ ಜಮ್ಮು ಕಾಶ್ಮೀರದ ಪೂಂಚ್ ಮತ್ತು ರಾಜೌರಿ ಗಡಿ ಜಿಲ್ಲೆಗಳ ಮೇಲೆ ಪಾಕಿಸ್ತಾನ ನಡೆಸಿದ ಶೆಲ್ ದಾಳಿಗಳಿಂದಾಗಿ ಕನಿಷ್ಠ 31 ಶಾಲೆಗಳು ಹಾನಿಗೊಳಗಾಗಿವೆ ಎಂದು ವರದಿಯಾಗಿದೆ.

ಆಪರೇಷನ್ ಸಿಂಧೂರದ ಬಳಿಕ ಪಾಕಿಸ್ತಾನ ಮತ್ತು ಭಾರತ ನಡುವೆ ನಡೆದ ದಾಳಿ-ಪ್ರತಿ ದಾಳಿ ವೇಳೆ ಪೂಂಚ್ ಮತ್ತು ರಾಜೌರಿ ಜಿಲ್ಲೆಗಳು ಅಧಿಕ ಹಾನಿಗೊಳಗಾಗಿವೆ. ಪೂಂಚ್‌ನಲ್ಲಿ 13 ಮತ್ತು ರಾಜೌರಿಯಲ್ಲಿ 3 ಜನರು ಸೇರಿದಂತೆ ಕನಿಷ್ಠ 16 ಮಂದಿ ಸಾವನ್ನಪ್ಪಿದ್ದಾರೆ. ಮನೆಗಳು, ಶಿಕ್ಷಣ ಸಂಸ್ಥೆಗಳು ಸೇರಿದಂತೆ ನೂರಾರು ಕಟ್ಟಡಗಳು ಹಾನಿಗೊಂಡಿವೆ.

ಇದನ್ನು ಓದಿದ್ದೀರಾ? ಜಮ್ಮು ಮತ್ತು ಕಾಶ್ಮೀರ | ಪಾಕಿಸ್ತಾನ ಗಡಿಯಲ್ಲಿ ಒಳ ನುಸುಳುಕೋರನ ಹತ್ಯೆ

Advertisements

ಈ ಬಗ್ಗೆ ಮಾಧ್ಯಮಕ್ಕೆ ಪೂಂಚ್‌ನ ಮುಖ್ಯ ಶಿಕ್ಷಣ ಅಧಿಕಾರಿ(ಸಿಇಒ) ಇಫ್ತಿಕರ್ ಹುಸೇನ್ ಶಾ ಮಾಹಿತಿ ನೀಡಿದ್ದು, “ಜಿಲ್ಲೆಯ 23 ಶಾಲೆಗಳು ಶೆಲ್ ದಾಳಿಯಿಂದ ಹಾನಿಯಾಗಿವೆ. ಒಂದು ಪ್ರೌಢಶಾಲೆ ಮತ್ತು ಒಂದು ಕಿರಿಯ ಪ್ರಾಥಮಿಕ ಶಾಲೆ ಸಂಪೂರ್ಣವಾಗಿ ಹಾನಿಗೊಳಗಾಗಿವೆ” ಎಂದು ತಿಳಿಸಿದ್ದಾರೆ.

ಮತ್ತೆ ಶಾಲೆಗೆ ಬರದ ಮಕ್ಕಳು

ಸದ್ಯ ಉಭಯ ದೇಶಗಳ ನಡುವೆ ಕದನ ವಿರಾಮ ಒಪ್ಪಂದ ನಡೆದು ದಾಳಿ-ಪ್ರತಿದಾಳಿ ನಡೆಯುತ್ತಿಲ್ಲ. ಆದರೆ ಮತ್ತೆ ಶೆಲ್ ದಾಳಿ ನಡೆದರೆ ಎಂಬ ಭಯದಿಂದಲೇ ಅನೇಕ ಪೋಷಕರು ತಮ್ಮ ಮಕ್ಕಳನ್ನು ಶಾಲೆಗಳಿಗೆ ಕಳುಹಿಸುತ್ತಿಲ್ಲ. “ಸುಮಾರು ಶೇಕಡ 30ರಷ್ಟು ವಿದ್ಯಾರ್ಥಿಗಳು ಶಾಲೆಗೆ ಬರುತ್ತಿಲ್ಲ. ಗಡಿ ಪ್ರದೇಶಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಇನ್ನೂ ಕಡಿಮೆಯಾಗಿದೆ” ಎಂದು ಪೂಂಚ್‌ನ ಮುಖ್ಯ ಶಿಕ್ಷಣ ಅಧಿಕಾರಿ ಹೇಳಿದ್ದಾರೆ.

“ನಾವು ವಿದ್ಯಾರ್ಥಿಗಳನ್ನು ಸಂಪರ್ಕಿಸುತ್ತಿದ್ದೇವೆ, ಮತ್ತೆ ಶಾಲೆಗೆ ಬರುವಂತೆ ಒತ್ತಾಯಿಸುತ್ತಿದ್ದೇವೆ. ಆದರೆ ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುವ ಧೈರ್ಯವನ್ನು ಪೋಷಕರು ಮಾಡುತ್ತಿಲ್ಲ. ಸಹಜ ಸ್ಥಿತಿ ಮರಳುತ್ತಿದ್ದಂತೆ ಹಾಜರಾತಿ ಹೆಚ್ಚಾಗಬಹುದು” ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿದ್ದೀರಾ? ಯುದ್ಧ ಸ್ಥಿತಿ | ಭಾರತದ ಮೇಲೆ ಎಂಟು ಕ್ಷಿಪಣಿ ಹಾರಿಸಿದ ಪಾಕಿಸ್ತಾನ; ತಡೆದು ನಿಲ್ಲಿಸಿದ ಭಾರತ

ಶೆಲ್ ದಾಳಿಯಿಂದಾಗಿ ಒಟ್ಟು ಏಳು ಶಾಲೆಗಳು ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗೆ ಹಾನಿಯಾಗಿದೆ ಎಂದು ರಾಜೌರಿ ಸಿಇಒ ಚೌಧರಿ ಇಕ್ಬಾಲ್ ಹುಸೇನ್ ಹೇಳಿದ್ದಾರೆ. “ವಿದ್ಯಾರ್ಥಿಗಳು ಸದ್ಯ ತರಗತಿಗಳಿಗೆ ಹಾಜರಾಗುತ್ತಿದ್ದಾರೆ. ದಿನ ಕಳೆದಂತೆ ಹಾಜರಾತಿ ಹೆಚ್ಚಾಗುತ್ತಿದೆ. ಹಾನಿಗೊಳಗಾದ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲಾಗಿಲ್ಲ” ಎಂದು ಹೇಳಿದ್ದಾರೆ.

ಸುಮಾರು 26 ಪ್ರವಾಸಿಗರನ್ನು ಬಲಿ ತೆಗೆದುಕೊಂಡ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತಿ ಕಾಶ್ಮೀರದ ಒಂಬತ್ತು ಭಯೋತ್ಪಾದಕ ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇದಾದ ಬಳಿಕ ಉಭಯ ದೇಶಗಳ ನಡುವೆ ಉದ್ವಿಗ್ನತೆ ಅಧಿಕವಾಗಿದೆ. ಸದ್ಯ ಕದನ ವಿರಾಮ ಘೋಷಿಸಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X