ಬಿಜೆಪಿಯನ್ನು ಬಯಲು ಮಾಡಿ, ಆದರೆ ಬಲೆಗೆ ಬೀಳದಿರಿ: ಕಾಂಗ್ರೆಸ್ ವಕ್ತಾರರಿಗೆ ರಾಹುಲ್ ಗಾಂಧಿ ಕಿವಿಮಾತು

Date:

Advertisements

ನಮ್ಮ ಪಕ್ಷದ ಅಭಿಪ್ರಾಯಗಳನ್ನು ಮಂಡಿಸುವಾಗ ಅಥವಾ ಬಿಜೆಪಿಯನ್ನು ಬಯಲು ಮಾಡುವಾಗ ಆಕ್ರಮಣಕಾರಿಯಾಗಿ ಮಾತನಾಡಿ. ಆದರೆ ಬಿಜೆಪಿಯ ಬಲೆಗೆ ಬೀಳಬೇಡಿ ಎಂದು ರಾಹುಲ್ ಗಾಂಧಿ ಕಾಂಗ್ರೆಸ್ ವಕ್ತಾರರಿಗೆ ಕಿವಿಮಾತು ಹೇಳಿದ್ದಾರೆ.

ನವದೆಹಲಿಯ ಇಂದಿರಾ ಭವನದಲ್ಲಿ ಕಾಂಗ್ರೆಸ್ ವಕ್ತಾರರಿಗೆ ತರಬೇತಿ ನೀಡಿದ ರಾಹುಲ್ ಗಾಂಧಿ, “ನರೇಂದ್ರ ಮೋದಿ ಸರ್ಕಾರವು ಒತ್ತಡದಿಂದ ಘೋಷಿಸಿದ ಜಾತಿ ಜನಗಣತಿಯ ಶ್ರೇಯಸ್ಸು ಕಾಂಗ್ರೆಸ್‌ಗೆ ಸಿಗುವಂತೆ ನೋಡಿಕೊಳ್ಳಬೇಕು” ಎಂದು ತಿಳಿಸಿದರು.

ಇದನ್ನು ಓದಿದಿದ್ದೀರಾ? ಶೇ.50 ಮಹಿಳಾ ಮುಖ್ಯಮಂತ್ರಿಗಳು ಕಾಂಗ್ರೆಸ್ ಗುರಿ: ರಾಹುಲ್ ಗಾಂಧಿ

Advertisements

ಜವಾಹರಲಾಲ್ ನೆಹರು ಮತ್ತು ಇಂದಿರಾ ಗಾಂಧಿ ಜಾತಿ ಜನಗಣತಿಯನ್ನು ಒಪ್ಪದ ಬಗ್ಗೆಯೂ ರಾಹುಲ್ ಗಾಂಧಿ ಮಾತನಾಡಿದ್ದಾರೆ. “ಹಿಂದಿನ ಕಾಂಗ್ರೆಸ್ ಸರ್ಕಾರಗಳು ಮಂಡಲ್ ಯುಗಕ್ಕೆ ಬಹಳ ಹಿಂದೆಯೇ ಒಬಿಸಿ ಕೋಟಾವನ್ನು ಒದಗಿಸಿವೆ. ಭಾರತದಲ್ಲಿ ಜಾತಿ ಒಂದು ವಾಸ್ತವ. ಹಾಗಾಗಿ ಈ ಹಿಂದೆ ನಮ್ಮ ನಾಯಕರು ಅನುಸರಿಸಿದ ಮಾರ್ಗವನ್ನು ನಾವು ಯಾಕೆ ಅಳವಡಿಸಿಕೊಳ್ಳಬೇಕು” ಎಂದು ರಾಹುಲ್ ಪ್ರಶ್ನಿಸಿದ್ದಾರೆ.

“ಸದ್ಯ ಮಾಧ್ಯಮಗಳು ನಮ್ಮ ವಕ್ತಾರರಿಗೆ ಪರವಾದ ವಾತಾವರಣವನ್ನು ಹೊಂದಿಲ್ಲ. ಆದರೆ ನಾವು ನಮ್ಮ ಗುರಿಯನ್ನು ತಪ್ಪಬಾರದು. ಬಿಜೆಪಿಗೆ ಸಹಾಯ ಮಾಡುವಂತೆ ಟಿವಿ ಚರ್ಚೆಗಳನ್ನು ನಡೆಸಲಾಗುತ್ತದೆ. ಆದರೆ ನೀವು ಈ ವಾತಾವರಣದಲ್ಲಿಯೂ ಚೆನ್ನಾಗಿ ಕೆಲಸ ಮಾಡುತ್ತಿದ್ದೀರಿ ಎಂದು ನನಗೆ ತಿಳಿದಿದೆ” ಎಂದು ವಕ್ತಾರರನ್ನು ರಾಹುಲ್ ಗಾಂಧಿ ಶ್ಲಾಘಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X