ಬೆಳಗಾವಿ | ಅತ್ಯಾಚಾರ ಆರೋಪ: ಮೇಖಳಿಯ ಲೋಕೇಶ್ವರ ಸ್ವಾಮೀಜಿ ವಿರುದ್ಧ ಪೋಕ್ಸೋ, ಬಂಧನ

Date:

Advertisements

17 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಆರೋಪದ ಹಿನ್ನಲೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮೇಖಳಿಯ ರಾಮಮಂದಿರದ ಲೋಕೇಶ್ವರ ಮಹಾರಾಜ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ.

ಈ ಕುರಿತು ಬಾಗಲಕೋಟೆಯ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಹಿಳಾ ಠಾಣೆ ಪೊಲೀಸರು ಮೂಡಲಗಿ ಠಾಣೆಗೆ ಪ್ರಕರಣವನ್ನು ವರ್ಗಾಯಿಸಿದ್ದರು. ಸದ್ಯ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿ ​ಜೈಲಿಗಟ್ಟಿದ್ದಾರೆ.

ಮೇ 13ರಂದು ಮನೆಗೆ ಬಿಡುವುದಾಗಿ ಬಾಲಕಿಯನ್ನು ಸ್ವಾಮೀಜಿ ರಾಯಚೂರಿಗೆ ಕರೆದೊಯ್ದಿದ್ದರು. ಮೇ 13, 14ರಂದು ರಾಯಚೂರಿನಲ್ಲಿ ಎರಡು ದಿನ ಇದ್ದರು. ಬಳಿಕ 15ರ ರಾತ್ರಿ ಬಾಗಲಕೋಟೆಯಲ್ಲಿ ವಾಸ್ತವ್ಯ ಹೂಡಿದ್ದರು. ಎರಡೂ ಕಡೆ ವಾಸ್ತವ್ಯ ಇದ್ದಾಗಲೂ ಅತ್ಯಾಚಾರ ಎಸಗಿದ್ದಾರೆ. ಅಲ್ಲದೆ ಯಾರ ಬಳಿಯಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿರುವುದಾಗಿಯೂ ಕೇಳಿಬಂದಿದೆ.

Advertisements

ಮೇ 16ರಂದು ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಬಸ್ ನಿಲ್ದಾಣದಲ್ಲಿ ಸ್ವಾಮೀಜಿ ಬಾಲಕಿಯನ್ನು ಬಿಟ್ಟು ಹೋಗಿದ್ದರು. ಈ ಬಗ್ಗೆ ಮೇ 17ರಂದು ಬಾಗಲಕೋಟೆ ಮಹಿಳಾ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಬಳಿಕ ಮಹಿಳಾ ಠಾಣೆ ಪೊಲೀಸರು ಪ್ರಕರಣವನ್ನು ಮೂಡಲಗಿ ಠಾಣೆಗೆ ವರ್ಗಾಯಿಸಿದ್ದರು.

ದೂರು ದಾಖಲಾಗುತ್ತಿದ್ದಂತೆ ಲೋಕೇಶ್ವರ ಸ್ವಾಮೀಜಿಯ ರಾಮಮಂದಿರ ಮಠಕ್ಕೆ ತೆರಳಿದ ಪೊಲೀಸರು ಮಠದಲ್ಲಿ ಶೋಧಕಾರ್ಯ ನಡೆಸಿದ್ದರು. ಕಳ್ಳ ಸ್ವಾಮೀಜಿಯ ಮಠದಲ್ಲಿ ಮಾರಕಾಸ್ತ್ರಗಳು ಪತ್ತೆಯಾಗಿರುವುದು ತಿಳಿದುಬಂದಿದೆ. ಹೀನಕೃತ್ಯವೆಸಗಿದ ಸ್ವಾಮೀಜಿಯನ್ನು ಬಂಧಿಸಿದ ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಆರಾಮ ಇಲ್ಲದೇ ಇದ್ದಾಗ ಬಾಲಕಿಯ ತಂದೆ-ತಾಯಿಯೇ ಬಾಲಕಿಯನ್ನು ವಾರಗಟ್ಟಲೆ ಮಠದಲ್ಲೇ ಬಿಟ್ಟು ಹೋಗುತ್ತಿದ್ದರು. ಅದನ್ನೇ ಸ್ವಾಮೀಜಿ ದುರುಪಯೋಗ ಪಡಿಸಿಕೊಂಡಿದ್ದಾರೆ. ಮಠದಲ್ಲಿ ಸಾಕಷ್ಟು ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸುತ್ತಿದ್ದರೆಂಬ ಆರೋಪವೂ ಇದೆ.

ಇದನ್ನೂ ಓದಿದ್ದೀರಾ? ದಾವಣಗೆರೆ | ಪರಿಶಿಷ್ಟ ಜಾತಿ ಗಣತಿ ಶೇ.100ರಷ್ಟು ‌ಸಾಧನೆಯ ಹೆಗ್ಗಳಿಕೆ; ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.

2021ರಲ್ಲಿ ಸ್ವಾಮೀಜಿಗೆ ಧರ್ಮದೇಟು ನೀಡಿ ಗ್ರಾಮಸ್ಥರು ಬುದ್ಧಿವಾದ ಹೇಳಿದ್ದರು. ಇದೀಗ 17 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿರುವ ಆರೋಪದ ಹಿನ್ನಲೆ ಪೊಲೀಸರು ಬಂಧಿಸಿದ್ದಾರೆ. ಇದೇ ವೇಳೆ ಸ್ವಾಮೀಜಿಯನ್ನು ಯಾವುದೇ ಕಾರಣಕ್ಕೂ ಬಿಡದಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಘಟನೆ ಸಂಬಂಧ ಮಾಹಿತಿಗಾಗಿ ಈ ದಿನ.ಕಾಮ್‌ ರಾಯಬಾಗ ಪೊಲೀಸ್‌ ಠಾಣೆಯನ್ನು ಸಂಪರ್ಕಿಸಿದೆಯಾದರೂ ಕರೆಗೆ ಯಾರೂ ಲಭ್ಯವಾಗಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಮಹಾರಾಷ್ಟ್ರದಲ್ಲಿ ಮಳೆ – ಬೆಳಗಾವಿ ಜಿಲ್ಲೆಯ ನದಿ ತೀರದ ಗ್ರಾಮಗಳಲ್ಲಿ ಪ್ರವಾಹದ ಆತಂಕ

ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿ ಇರುವ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

Download Eedina App Android / iOS

X