ಶಾಂತಿ, ಸುವ್ಯವಸ್ಥೆ ನೆಲೆಗೊಳಿಸಲು ಕಾನೂನಿನ ಕೈಗಳಿಗೆ ಇನ್ನಷ್ಟು ಬಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

Advertisements

ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ನೆಲೆಗೊಳಿಸುವುದು ನಮ್ಮ ಮೊದಲ ಆದ್ಯತೆ. ಇದಕ್ಕಾಗಿ ಕಾನೂನಿನ ಕೈಗಳಿಗೆ ಇನ್ನಷ್ಟು ಬಲ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ರಾಜ್ಯದಲ್ಲಿ ಆಡಳಿತ ಸಂಪೂರ್ಣ ಹಳಿ ತಪ್ಪಿ, ಅರಾಜಕತೆ ತಾಂಡವವಾಡುತ್ತಿದೆ ಎಂದು ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಸಿಎಂ, “ದುಡ್ಡಿನ ವ್ಯವಹಾರದ ಕಾರಣಕ್ಕಾಗಿ ನಡೆದಿದೆ ಎನ್ನಲಾದ ಜೈನಮುನಿ ಕಾಮಕುಮಾರ ನಂದಿ ಮಹರಾಜರ ಹತ್ಯೆಯ ಆರೋಪಿಗಳನ್ನು ಕೊಲೆ ನಡೆದ 6 ಗಂಟೆಗಳ ಒಳಗೆ ಬಂಧಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಅದೇ ರೀತಿ ವೈಯಕ್ತಿಕ ದ್ವೇಷದ ಕಾರಣಕ್ಕಾಗಿ ತಿ ನರಸೀಪುರದ ವೇಣುಗೋಪಾಲ್ ಅವರನ್ನು ಹತ್ಯೆಗೈದ ಆರೋಪಿಗಳನ್ನು ಕೊಲೆ ನಡೆದ 24 ಗಂಟೆಯೊಳಗೆ ಬಂಧಿಸಲಾಗಿದೆ. ಬೆಂಗಳೂರಿನ ಏರೋನಿಕ್ಸ್ ಸಂಸ್ಥೆಯ ಎಂ.ಡಿ ಮತ್ತು ಸಿ.ಇ.ಒ ಹತ್ಯೆಯ ಆರೋಪಿಗಳನ್ನು ಕೊಲೆ ನಡೆದ 24 ಗಂಟೆಗಳೊಳಗೆ ಬಂಧಿಸಲಾಗಿದೆ” ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ.

Advertisements

“ಈ ಎಲ್ಲ ಪ್ರಕರಣಗಳನ್ನು ಕೂಲಂಕಷವಾಗಿ ತನಿಖೆ ನಡೆಸಿ, ಅಪರಾಧಿಗಳಿಗೆ ಗರಿಷ್ಠ ಶಿಕ್ಷೆ ಆಗುವಂತೆ ಕ್ರಮವಹಿಸಲು ರಾಜ್ಯದ ಪೊಲೀಸ್ ಇಲಾಖೆ ಸಮರ್ಥವಾಗಿದೆ. ಈ ಬಗ್ಗೆ ಯಾವ ಸಂದೇಹವೂ ಬೇಡ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಜ್ಯದಲ್ಲಿ ಆಡಳಿತ ಸಂಪೂರ್ಣ ಹಳಿ ತಪ್ಪಿ, ಅರಾಜಕತೆ ತಾಂಡವವಾಡುತ್ತಿದೆ: ಬಿಜೆಪಿ ವಾಗ್ದಾಳಿ

“ಹತ್ಯೆ, ಅಪಹರಣ ಮುಂತಾದ ಅಪರಾಧ ಕೃತ್ಯಗಳು ದುರದೃಷ್ಟಕರ. ಆದರೆ, ಒಂದು ಸರ್ಕಾರವಾಗಿ ಇಂಥ ಕಾನೂನು ವಿರೋಧಿ ಕೃತ್ಯಗಳು ನಡೆಯದಂತೆ ತಡೆಯಲು ನಾವು ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದೇವೆ” ಎಂದು ಭರವಸೆ ನೀಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X