ವಿಜಯಪುರ | ಆಲಮಟ್ಟಿ ಜಲಾಶಯದ ಮಟ್ಟ ಹೆಚ್ಚಿಸುವಂತೆ ರೈತ ಮುಖಂಡರ ಆಗ್ರಹ

Date:

Advertisements

ಮಹಾರಾಷ್ಟ್ರ ಸರ್ಕಾರ ಹಾಗೂ ಆ ಭಾಗದ ಜನಸಾಮಾನ್ಯರ ಹೋರಾಟಕ್ಕೆ ಕರ್ನಾಟಕ ಸರ್ಕಾರ ಮಣಿಯದೆ ಆಲಮಟ್ಟಿ ಜಲಾಶಯದ ಮಟ್ಟವನ್ನು 524.256ಕ್ಕೆ ಹೆಚ್ಚಿಸಲು ಶೀಘ್ರ ಕ್ರಮ ಕೈಗೊಳ್ಳವಂತೆ ಆಗ್ರಹಿಸಿ ರೈತ ಸಂಘಟನೆ ಮುಖಂಡರು ವಿಜಯಪುರ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ರೈತ ಮುಖಂಡ ಅರವಿಂದ ಕುಲಕರ್ಣಿ ಮಾತನಾಡಿ, “ಆಲಮಟ್ಟಿ ಡ್ಯಾಂ ನೀರಿನ ಮಟ್ಟವನ್ನು 524.256ಕ್ಕೆ ಹೆಚ್ಚಿಸಿ ನೀರು ನಿಲ್ಲಿಸಲು ಗೇಟ್ ಅಳವಡಿಸದಂತೆ ಇತ್ತೀಚಿಗೆ ಮಹಾರಾಷ್ಟ್ರದ ರೈತರು ಕರ್ನಾಟಕ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. 524.256ಕ್ಕೆ ನೀರು ಎತ್ತರಿಸಿದರೆ ಮಹಾರಾಷ್ಟ್ರದ ಕೆಲವು ಜಿಲ್ಲೆಗಳಲ್ಲಿ ಹಿನ್ನೀರಿನಿಂದ ಪ್ರವಾಹ ಪರಿಸ್ಥಿತಿ ಎದುರಾಗುತ್ತದೆಂದಬ ತಪ್ಪು ತಿಳುವಳಿಕೆಯಿಂದ ಹೋರಾಟಮಾಡುತ್ತಿದ್ದಾರೆ” ಎಂದು ಹೇಳಿದರು.

“ಕಳೆದ 2019ರಲ್ಲಿಯೇ ಪ್ರವಾಹ ಬಂದಾಗ ಆಲಮಟ್ಟಿಯ ಡ್ಯಾಂ ಮೇಲೆ ಗೂಬೆ ಕೂರಿಸಿದ್ದರು. 519.60 ಮೀ.ಗೆ ನೀರು ನಿಲ್ಲಿಸಿದ್ದರಿಂದಲೇ ಮಹಾರಾಷ್ಟ್ರದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆಯೆಂದು ಕ್ಯಾತೆ ತೆಗೆದಿದ್ದರು. ಆಗ ಮಹಾರಾಷ್ಟ್ರ ಸರ್ಕಾರ ಒಡ್ನರ ನೇತೃತ್ವದ ತಂಡವನ್ನು ಆಲಮಟ್ಟಿಗೆ ಕಳುಹಿಸಿತ್ತು. ಆ ತಂಡ ಪರಿಸ್ಥಿತಿ ಅವಲೋಕಿಸಿ ಆಲಮಟ್ಟಿ ನೀರಿನಿಂದ ಪ್ರವಾಹ ಉಂಟಾಗಿಲ್ಲವೆಂದು ಸ್ಪಷ್ಟ ವರದಿ ನೀಡಿತ್ತು” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ವಿಜಯಪುರ ಅಭಿವೃದ್ಧಿಯಲ್ಲಿ ಶಿವಾನಂದ ಪಾಟೀಲರ ಪಾತ್ರ ಎಳ್ಳಷ್ಟೂ ಇಲ್ಲ: ಮಾಜಿ ಸಚಿವ ಎಸ್‌ ಕೆ ಬೆಳ್ಳುಬ್ಬಿ

ರೈತ ಮುಖಂಡ ವಿಜಯ ಪೂಜಾರ್ಹಿ ಮಾತನಾಡಿ, “ಕರ್ನಾಟಕ ಸರ್ಕಾರವಾಗಲಿ ಅಥವಾ ಕೇಂದ್ರ ಸರ್ಕಾರವಾಗಲಿ ಮಹಾರಾಷ್ಟ್ರ ಸರ್ಕಾರದ ಒತ್ತಡಕ್ಕೆ ಮಣಿಯದೆ ಆಲಮಟ್ಟಿ ಡ್ಯಾಂ ನೀರಿನ ಮಟ್ಟವನ್ನು 524.256ಕ್ಕೆ ನಿಲ್ಲಿಸಲು ಕೂಡಲೇ ಗೇಟ್ ಅಳವಡಿಸಬೇಕು. ನೀರು ನಿಲ್ಲಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ತೀವ್ರ ಹೋರಾಟ ನಡೆಸಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.

ರೈತ ಮುಖಂಡರಾದ ವಿಠಲ ಬಿರಾದಾರ, ರಾಜೇಸಾಬ ವಾಲಿಕಾರ, ದಾವಲಸಾಬ ನದಾಫ, ಗುರುಲಿಂಗಪ್ಪ ಪಡಸಲಗಿ, ನಾಗಪ್ಪ ಬೂದಗೊಳಿ, ಶ್ರೀಶೈಲಕೂರಿನದ ಮಲ್ಲಪ್ಪಪಡಿಸಲಿಗೆ ಲಾಲಸಾಬ ಹಾಗರ, ಜವರೇಗೌಡ ಪೋಲೇಶಿ, ಮಲಿಗೆಪ್ಪ ಸಾಸನೂರ, ಸಿದ್ದಿಂಗಪ್ಪ ಬಿರಾದಾರ, ಶಾರದಾ- ಕಾಳನ್ನವರ, ಸುಜಾತಾ ವಡ್ಡರ, ಗುರುಬಸಮ್ಮ ಡವಳಗಿ, ರೇವತಿ ಬಡಿಗೇರ, ಈ ಚೇತನ ಗೌಡರ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Download Eedina App Android / iOS

X