SSLC | ಪತ್ರಿಕೆ ಮರು ಮೌಲ್ಯಮಾಪನ: ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ

Date:

Advertisements

ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶದಿಂದ ಅಸಮಾಧಾನಗೊಂಡಿದ್ದ ವಿದ್ಯಾರ್ಥಿ ತನ್ನ ಉತ್ತರ ಪತ್ರಿಕೆಯನ್ನು ಮರು ಮೌಲ್ಯಮಾಪನಕ್ಕೆ ಅರ್ಜಿ ಹಾಕಿದ್ದರು. ಇದೀಗ, ಮರು ಮೌಲ್ಯಮಾಪನದ ಫಲಿತಾಂಶ ಬಂದಿದ್ದು, ಪರಿಷ್ಕೃತ ಫಲಿತಾಂಶದೊಂದಿಗೆ ಆತ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ್ದಾರೆ.

ಇತ್ತೀಚೆಗಷ್ಟೇ ಎಸ್‌ಎಸ್‌ಎಸ್‌ಸಿ ಫಲಿತಾಂಶ ಪ್ರಕಟವಾಗಿತ್ತು. 24 ಮಂದಿ 625 ಅಂಕಗಳಲ್ಲಿ 625 ಅಂಕಗಳನ್ನೂ ಗಳಿಸಿದ್ದರು. ಇದೀಗ, ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದ ವಿದ್ಯಾರ್ಥಿಯ ಅಂಕಗಳೂ 625ಕ್ಕೆ ಏರಿಕೆಯಾಗಿವೆ. ಈ ಬಾರಿಯ ಪರೀಕ್ಷೆಯಲ್ಲಿ ‘ಔಟ್‌ ಆಫ್‌ ಔಟ್‌’ ಅಂಕ ಗಳಿಸಿದ ವಿದ್ಯಾರ್ಥಿಗಳ ಸಂಖ್ಯೆ 25ಕ್ಕೆ ಏರಿದೆ.

ಮೈಸೂರಿನ ‘ಶ್ರೀ ರಾಮಕೃಷ್ಣ ವಿದ್ಯಾಲಯ’ದಲ್ಲಿ ವ್ಯಾಸಂಗ ಮಾಡುತ್ತಿದ್ದ ಮಡಿಕೇರಿಯ ತನ್ಮಯಿ ಎಂ.ಎನ್‌ ಎಂಬ ವಿದ್ಯಾರ್ಥಿ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದರು. ಅವರು ಮೂಲ ಫಲಿತಾಂಶದಲ್ಲಿ 622 ಅಂಕಗಳನ್ನು ಗಳಿಸಿದ್ದರು. ಆದರೆ, ಆ ಅಂಕಗಳಿಂದ ಅಸಮಾಧಾನಗೊಂಡಿದ್ದ ತನ್ಮಯಿ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದರು.

Advertisements

ಇದೀಗ, ಅವರ ಮರು ಮೌಲ್ಯಮಾಪನದ ಫಲಿತಾಂಶ ಪ್ರಕಟವಾಗಿದೆ. ಅವರ ಅಂಕ 625ಕ್ಕೆ 625 ಬಂದಿದೆ. ಆ ಮೂಲಕ, ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದ 24 ವಿದ್ಯಾರ್ಥಿಗಳೊಂದಿಗೆ ತನ್ಮಯಿ ಕೂಡ ಸೇರಿಕೊಂಡಿದ್ದಾರೆ.

ಈ ಲೇಖನ ಓದಿದ್ದೀರಾ?: ಪಹಲ್ಗಾಮ್‌ ದಾಳಿಗೆ ಒಂದು ತಿಂಗಳು; ಸಿಂಧೂರ ಅಳಿಸಿದ ಹಂತಕರನ್ನು ಹಿಡಿದರೇ ಮೋದಿ?

ಇನ್ನು, ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಒಟ್ಟು 8,42,173 ವಿದ್ಯಾರ್ಥಿಗಳು ಬರೆದಿದ್ದರು. ಅವರಲ್ಲಿ, 5,24,984 (64%) ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಪೈಕಿ ಶೇ.74ರಷ್ಟು ಬಾಲಕಿಯರು ಉತ್ತೀರ್ಣರಾಗಿದ್ದು, ಫಲಿತಾಂಶದಲ್ಲಿ ಮೇಲುಗೈ ಸಾಧಿಸಿದ್ದಾರೆ.

ಮುಖ್ಯವಾಗಿ, ಮೇ 26ರಿಂದ ಜೂನ್ 2ರವರೆಗೆ ಎಸ್​ಎಸ್​ಎಲ್​​ಸಿ ಎರಡನೇ ಪರೀಕ್ಷೆ ನಡೆಯಲಿದೆ. ಒಂದು ವೇಳೆ ಅದರಲ್ಲೂ ಅನುತ್ತೀರ್ಣರಾದವರು ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶವಿದ್ದು, ಮೂರನೇ ಪರೀಕ್ಷೆಯು ಜೂನ್ 23ರಿಂದ 30ರವರೆಗೆ ನಡೆಯಲಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮುಚ್ಚುವಿಕೆ ವಿರೋಧಿಸಿ ಎಐಡಿಎಸ್‍ಒ 50 ಲಕ್ಷ ಸಹಿ ಸಂಗ್ರಹ; ಮುಖ್ಯಮಂತ್ರಿಗಳಿಗೆ ಸಲ್ಲಿಕೆ

ಕರ್ನಾಟಕ ರಾಜ್ಯ ಸರ್ಕಾರವು 6,200 ಸರ್ಕಾರಿ ಶಾಲೆಗಳನ್ನು "ವಿಲೀನ"ಗೊಳಿಸುವ ಹೆಸರಿನಲ್ಲಿ ಮುಚ್ಚಲು...

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ದಾವಣಗೆರೆ | ಭಾರತದ ಗ್ರಂಥಾಲಯ ಪಿತಾಮಹ ರಂಗನಾಥ್ ಜನ್ಮದಿನ; ವಿವಿಯಲ್ಲಿ ಗ್ರಂಥಾಲಯ ಕಾರ್ಯಾಗಾರ

ಭಾರತದ ಗ್ರಂಥಾಲಯ ಪಿತಾಮಹ ಡಾ.ಎಸ್.ಆರ್. ರಂಗನಾಥನ್ ಅವರ 133ನೇ ಜನ್ಮದಿನದ ಅಂಗವಾಗಿ...

ರಾಜ್ಯ ಶಿಕ್ಷಣ ನೀತಿ ಆಯೋಗದಿಂದ ವರದಿ ಸಲ್ಲಿಕೆ, ದ್ವಿಭಾಷಾ ನೀತಿ ಅನುಷ್ಠಾನ ಸೇರಿ ಹಲವು ಶಿಫಾರಸು

ರಾಜ್ಯ ಶಿಕ್ಷಣ ನೀತಿ ಆಯೋಗವು ಶುಕ್ರವಾರ ರಾಜ್ಯ ಸರ್ಕಾರಕ್ಕೆ ತನ್ನ ಅಂತಿಮ...

Download Eedina App Android / iOS

X