ಎಸ್‌.ಎಸ್‌.ಎಲ್‌.ಸಿ. ಉತ್ತೀರ್ಣರಾದ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

Date:

Advertisements

ಸರೋಜಿನಿ ದಾಮೋದರನ್ ಫೌಂಡೇಶನ್ (ಎಸ್‌ಡಿಎಫ್)ನಿಂದ 2025ರಲ್ಲಿ ಎಸ್‌.ಎಸ್‌.ಎಲ್‌.ಸಿ. ಪರೀಕ್ಷೆಯಲ್ಲಿ ಉತ್ತೀರ್ಣರಾದ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಿದೆ.

ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು 2025ರಲ್ಲಿ ಕರ್ನಾಟಕ ರಾಜ್ಯದಿಂದ ಎಸ್‌.ಎಸ್‌.ಎಲ್‌.ಸಿ. ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಶೇಕಡಾ 90ರಷ್ಟು ಅಂಕ ಅಥವಾ ಎಲ್ಲಾ ವಿಷಯಗಳಲ್ಲಿ A+ ಗ್ರೇಡ್ ಪಡೆದಿರಬೇಕು. ವಿದ್ಯಾರ್ಥಿ ಅಂಗವೈಕಲ್ಯ ಹೊಂದಿದ್ದರೆ ಶೇಕಡಾ 75ರಷ್ಟು ಅಂಕ ಪಡೆದಿರಬೇಕು. ಕುಟುಂಬದ ವಾರ್ಷಿಕ ಆದಾಯ ರೂ. 2 ಲಕ್ಷಕ್ಕಿಂತ ಕಡಿಮೆ ಹೊಂದಿರಬೇಕು.

ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಅವರ ಪಿಯುಸಿ ಅಧ್ಯಯನದ ಅವಧಿಯಲ್ಲಿ ವರ್ಷಕ್ಕೆ 10,000 ರೂ. ವಿದ್ಯಾರ್ಥಿ ವೇತನ ನೀಡಲಾಗುತ್ತದೆ. ಬಳಿಕ ಅವರ ಪದವಿಯನ್ನು ಮುಂದುವರಿಸಲು ಪದವಿಗೆ ಅನುಗುಣವಾಗಿ ವರ್ಷಕ್ಕೆ 15,000 ರೂಪಾಯಿಯಿಂದ 75.000 ರೂಪಾಯಿವರೆಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ.

Advertisements

ಆಸಕ್ತ ವಿದ್ಯಾರ್ಥಿಗಳು www.vidyadhan.org ಗೆ ಭೇಟಿ ನೀಡುವ ಮೂಲಕ ಅಥವಾ ಗೂಗಲ್ ಪ್ಲೇ ಸ್ಟೋರ್‌ನಲ್ಲಿ ‘SDF Vidya’ ಆಪ್‌ ಬಳಸುವ ಮೂಲಕ  ಅರ್ಜಿ ಸಲ್ಲಿಸಬಹುದು. 2025 ಮೇ 19ರಿಂದ ಆರಂಭವಾಗಿರುವ ಕರ್ನಾಟಕ ವಿದ್ಯಾರ್ಥಿ ವೇತನದ ಅರ್ಜಿಗಳು 2025 ಜುಲೈ 8ರವರೆಗೆ ಲಭ್ಯವಿದೆ. ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ಮೊಬೈಲ್‌ ಸಂಖ್ಯೆ +91 8068 33 3500 ಸಹಾಯವಾಣಿಯನ್ನು ಸಂಪಕರ್ಕಿಸಬಹುದಾಗಿದೆ.

ಈ ಬಗ್ಗೆ ಬೆಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ಶನಿವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸರೋಜಿನಿ ದಾಮೋದರನ್ ಫೌಂಡೇಶನ್ ಇದರ ಸಂಯೋಜಕರು, ರಾಜ್ಯದ ಎಲ್ಲಾ ಜಾತಿ, ಧರ್ಮಗಳ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಆನ್‌ಲೈನ್‌ನಲ್ಲಿ ಅರ್ಹತಾ ಪರೀಕ್ಷೆ, ವೈಯಕ್ತಿಕ ಸಂದರ್ಶನ ಹಾಗೂ ಅವರ ಮನೆಗೆ ಭೇಟಿ ನೀಡಿ ಮಾಹಿತಿ ಪಡೆಯುವ ಮೂಲಕ ಅರ್ಹರಾದ ವಿದ್ಯಾರ್ಥಿಗಳನ್ನು ವಿದ್ಯಾರ್ಥಿ ವೇತನಕ್ಕೆ ಆಯ್ಕೆ ಮಾಡಲಾಗುವುದು ಎಂದು ತಿಳಿಸಿದರು.

ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಆದಾಯ ಪ್ರಮಾಣ ಪತ್ರ, ಎಸ್‌.ಎಸ್‌.ಎಲ್‌.ಸಿ. ಅಂಕಪಟ್ಟಿ, ಭಾವಚಿತ್ರ, ಅಂಗವೈಕಲ್ಯತೆ ಇದ್ದರೆ ಅಂಗವೈಕಲ್ಯ ಪ್ರಮಾಣಪತ್ರ, ವಿದ್ಯಾರ್ಥಿಯ ಹೆಸರಿನ ಇ-ಮೇಲ್‌ ಐಡಿಯನ್ನು ಒದಗಿಸಬೇಕು. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರಥಮ ಮತ್ತು ದ್ವಿತೀಯ ಪಿಯುಸಿ ಹಾಗೂ ದ್ವಿತೀಯ ಪಿಯುಸಿ ಅಂಕದ ಆಧಾರದ ಮೇಲೆ ಪದವಿ ಶಿಕ್ಷಣಕ್ಕೂ ವಿದ್ಯಾರ್ಥಿ ವೇತನವನ್ನು ಮುಂದುರಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಸುಜಾತಾ, ಕಲ್ಪನಾ, ಪವಿತ್ರಾ, ಜೆಸ್ವಿನ್‌ ಉಪಸ್ಥಿತರಿದ್ದರು.

WhatsApp Image 2025 05 08 at 16.45.05 70e5a46e
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

21 COMMENTS

  1. Your foundation giving Social justice ⚖️ to Poor and economically imbalanced talent students God bless your society empowerment work Hatsup to Vidyadan

  2. Hi
    This is Shivakumar. M. From Mysuru. I am a child of a single parent. {Mother}
    I have scored 86% in sslc exam in this year. Now, i have joined to science stream for 1st pu. Can i get any scholarship for my studies
    My family income is 40,000/A

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X