‘ಕರ್ನಲ್ ಸೋಫಿಯಾ ವಿರುದ್ಧ ನಾಲಿಗೆ ಹರಿಬಿಟ್ಟಿದ್ದ ಬಿಜೆಪಿ ಸಚಿವ ನಾಪತ್ತೆ’

Date:

Advertisements

ಕರ್ನಲ್‌ ಸೋಫಿಯಾ ಖುರೇಷಿ ಅವರ ವಿರುದ್ಧ ನಾಲಿಗೆ ಹರಿಬಿಟ್ಟಿದ್ದ ಮಧ್ಯಪ್ರದೇಶ ಬಿಜೆಪಿ ಸಚಿವ ವಿಜಯ್ ಶಾ ನಾಪತ್ತೆಯಾಗಿದ್ದಾರೆ ಎಂದು ಕಾಂಗ್ರೆಸ್‌ ಆರೋಪಿಸಿದೆ. ವಿಜಯ್ ಶಾ ನಾಪತ್ತೆ ಬಗ್ಗೆ ಪೋಸ್ಟರ್ ಬಿಡುಗಡೆ ಮಾಡಿದೆ.

ಪಾಕಿಸ್ತಾನದ ಭಯೋತ್ಪಾದಕ ನೆಲೆಗಳ ಮೇಲೆ ನಡೆದಿದ್ದ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ಬಗ್ಗೆ ದೇಶದ ಜನರಿಗೆ ಕರ್ನಲ್‌ ಸೋಫಿಯಾ ಖುರೇಷಿ ವಿವರಿಸಿದ್ದರು. ಆದರೆ, ಅವರನ್ನು ಬಿಜೆಪಿ ಸಚಿವ ವಿಜಯ್ ಶಾ ‘ಭಯೋತ್ಪಾದಕರ ಸಹೋದರಿ’ ಎಂದು ಕರೆದಿದ್ದರು. ಅವರ ವಿರುದ್ಧ ದೇಶಾದ್ಯಂತ ವ್ಯಾಪಕ ಆಕ್ರೊಶ ವ್ಯಕ್ತವಾಗಿತ್ತು. ವಿಜಯ್ ಶಾ ವಿರುದ್ಧ ಮಧ್ಯಪ್ರದೇಶ ಹೈಕೋರ್ಟ್‌ ಎಫ್‌ಐಆರ್ ದಾಖಲಿಸಿಲು ಪೊಲೀಸರಿಗೆ ಸೂಚಿಸಿತ್ತು. ಅಂತೆಯೇ, ಅವರ ವಿರುದ್ದ ತನಿಖೆಗೆ ಸುಪ್ರೀಂ ಕೋರ್ಟ್‌ ಎಸ್‌ಐಟಿ ರಚನೆ ಮಾಡಿತ್ತು.

ಆದಾಗ್ಯೂ, ವಿಜಯ್ ಶಾ ಅವರನ್ನು ಎಸ್‌ಐಟಿ ಪೊಲೀಸರು ಬಂಧಿಸಿಲ್ಲ. ವಿಚಾರಣೆಗೂ ಒಳಪಡಿಸಿಲ್ಲ. ವಿಜಯ್ ಶಾ ಪ್ರಕರಣದಲ್ಲಿ ಪೊಲೀಸರು ಮತ್ತು ಸರ್ಕಾರದ ನಡೆಯನ್ನು ಕಾಂಗ್ರೆಸ್‌ ತೀವ್ರವಾಗಿ ಖಂಡಿಸಿದೆ. “ಕರ್ನಲ್ ಸೋಫಿಯಾ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಸಚಿವ ‘ಕಾಣೆಯಾಗಿದ್ದಾರೆ’. ಹುಡುಕಿಕೊಡಿ” ಎಂದು ಪೋಸ್ಟರ್ ಬಿಡುಗಡೆ ಮಾಡಿದೆ.

Advertisements
ಕರ್ನಲ್ ಸೋಫಿಯಾ, ವಿಜಯ್ ಶಾ, ಬಿಜೆಪಿ ಸಚಿವ, ಮಧ್ಯಪ್ರದೇಶ, ಬಿಜೆಪಿ, ಕಾಂಗ್ರೆಸ್‌, Colonel Sophia, Vijay Shah, BJP Minister, Madhya Pradesh, BJP, Congress,

ಮಧ್ಯಪ್ರದೇಶದ ಇಂದೋರ್ ಜಿಲ್ಲೆಯ ಕಾಂಗ್ರೆಸ್ ಸೇವಾ ದಳದ ಅಧ್ಯಕ್ಷ ವಿವೇಕ್ ಖಂಡೇಲ್ವಾಲ್ ಅವರು ‘ಗುಮ್ಶುದಾ ಕಿ ತಲಾಶ್’ (ಕಾಣೆಯಾದ ವ್ಯಕ್ತಿಗಾಗಿ ಹುಡುಕಾಟ) ಎಂಬ ಶೀರ್ಷಿಕೆಯೊಂದಿಗೆ ಪೋಸ್ಟರ್‌ಗಳನ್ನು ವಿವೇಕ್ ಹಂಚಿಕೊಂಡಿದ್ದಾರೆ. ಬುಡಕಟ್ಟು ವ್ಯವಹಾರಗಳ ಸಚಿವ ವಿಜಯ್ ಶಾ ಅವರ ಬಗ್ಗೆ ‘ಮಾಹಿತಿ’ ನೀಡಿದವರಿಗೆ 11,000 ರೂ.ಗಳನ್ನು ನೀಡುವುದಾಗಿ ಘೋಷಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಪಹಲ್ಗಾಮ್‌ ದಾಳಿಗೆ ಒಂದು ತಿಂಗಳು; ಸಿಂಧೂರ ಅಳಿಸಿದ ಹಂತಕರನ್ನು ಹಿಡಿದರೇ ಮೋದಿ?

“ಸಚಿವ ವಿಜಯ್ ಶಾ ಎಲ್ಲಿಯೂ ಕಾಣುತ್ತಿಲ್ಲ. ಸಂಪುಟ ಸಭೆಗಳಲ್ಲಿಯೂ ಕಾಣಿಸದ ಕಾರಣ ನಾವು ಈ ಪೋಸ್ಟರ್‌ಗಳನ್ನು ಹಾಕಿದ್ದೇವೆ” ಎಂದು ಅವರು ಶನಿವಾರ ಹೇಳಿದ್ದಾರೆ. ಅವರು ರಾಜೀನಾಮೆ ನೀಡುವವರೆಗೂ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ” ಎಂದು ವಿವೇಕ್ ಖಂಡೇಲ್ವಾಲ್ ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X