ಬೆಳಗಾವಿ | ಮಲತಂದೆ ಮತ್ತು ಸ್ನೇಹಿತರಿಂದ ಬಾಲಕನ ಅಮಾನುಷ್ಯ ಹತ್ಯೆ

Date:

Advertisements

ಮಲತಂದೆ ಮತ್ತು ಆತನ ಸ್ನೇಹಿತರು ಸೇರಿ ಮೂರು ವರ್ಷದ ಬಾಲಕನ್ನು ಅಮಾನುಷ್ಯವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಾರೂಗೊಪ್ಪ ಗ್ರಾಮದ ಬಳಿ ನಡೆದಿದೆ.

ಬಿಹಾರ ಮೂಲದ ಕಾರ್ತಿಕ್ ಮುಖೇಶ್ ಮಾಂಜಿ(3) ಕೊಲೆಯಾದ ಬಾಲಕ. ಆತನ ಮಲತಂದೆ ಮಹೇಶ್ವರ ಮಾಂಜಿ ಕೊಲೆ ಮಾಡಿದ ಆರೋಪಿಯಾಗಿದ್ದು ಘಟನಾ ಸ್ಥಳಕ್ಕೆ ಡಿವೈಎಸ್ಪಿ ಡಾ.ವೀರಯ್ಯ ಹಿರೇಮಠ, ಮುರಗೋಡ ಸಿಪಿಐ ಸೇರಿ ಹಿರಿಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲಿಸಿದ್ದಾರೆ.

ಮೊದಲ ಗಂಡನನ್ನು ಬಿಟ್ಟಿದ್ದ ರಂಗೀಲಾ ಆರೋಪಿ ಮಹೇಶ್ ಮಾಂಜಿ ಜೊತೆಗೆ ಎರಡನೇ ಮದುವೆ ಆಗಿದ್ದಳು. ಬಿಹಾರ ಮೂಲದ ಕಾರ್ಮಿಕರು ಹಾರೂಗೊಪ್ಪ ಬಳಿ ಇರುವ ಜಿನ್ನಿಂಗ್ ಮಿಲ್‌ನಲ್ಲಿ ಕೆಲಸ ಮಾಡುತ್ತಿದ್ದರು. ಇವರು ಮಿಲ್ ಸಮೀಪದ ಶೆಡ್‌ನಲ್ಲೇ ಇದ್ದರು. ಹೀಗೆ ಇರುವಾಗ ನಿನ್ನೆ ರಂಗೀಲಾ ಜೊತೆಗೆ ಮಹೇಶ್ವ‌ರ್ ಜಗಳ ತೆಗೆದಿದ್ದಾನೆ. ಆ ಬಾಲಕನನ್ನು ನೀನು ಯಾಕೆ ಕರೆದುಕೊಂಡು ಬಂದೆ ಎಂದು ಹಲ್ಲೆ ಮಾಡಲು ಯತ್ನಿಸಿದ್ದಾನೆ” ಎಂದು ತಿಳಿಸಿದರು.

Advertisements

“ಅದೇ ಸಮಯದಲ್ಲಿ ಆತನ ಮೂವರು ಸ್ನೇಹಿತರು ಬಂದಿದ್ದಾರೆ. ಆ ಬಾಲಕನನ್ನು ಕರೆದುಕೊಂಡು ಬರಬೇಡ ಅಂತಾ ಹೇಳಿದರೂ ಕರೆದುಕೊಂಡು ಬಂದಿದ್ದಾಳೆ. ಹಾಗಾಗಿ, ಈಕೆಗೆ ಪಾಠ ಕಲಿಸಬೇಕು ಅಂತಾ ಮಹೇಶ್ ಆತನ ಸ್ನೇಹಿತರಿಗೆ ಹೇಳಿದ್ದಾನೆ. ಬಳಿಕ ಎಲ್ಲರೂ ಕೂಡಿಕೊಂಡು ಆಕೆಯ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ. ಆಗ ಭಯದಿಂದ ರಂಗೀಲಾ ಅಲ್ಲಿಂದ ಓಡಿ ಹೋಗಿದ್ದಾಳೆ. ಆದರೆ, ಆ ಬಾಲಕ ಅಲ್ಲಿಯೇ ಇದ್ದ. ಆ ವೇಳೆ ಬಾಲಕನ ತಲೆಗೆ ಕಟ್ಟಿಗೆಯಿಂದ ಅವರೆಲ್ಲಾ ಹೊಡೆದಿದ್ದಾರೆ” ಎಂದು ವಿವರಿಸಿದರು.

ಈ ಕುರಿತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಭೀಮಾಶಂಕರ್ ಗುಳೇದ ಅವರು ಮಾತನಾಡಿ, “ಇದು ಹೃದಯ ವಿದ್ರಾವಕ ಘಟನೆ. ಮೂರು ವರ್ಷದ ಬಾಲಕನನ್ನು ಮಲ ತಂದೆ ಮತ್ತು ಆತನ ಸಂಗಡಿಗರು ಅಮಾನುಷವಾಗಿ ಕೊಲೆ ಮಾಡಿದ್ದಾರೆ. ಬಾಲಕನ ತಾಯಿ ರಂಗೀಲಾ ದೂರು ಕೊಟ್ಟಿದ್ದಾರೆ. ಪ್ರಕರಣ ದಾಖಲಿಸಿಕೊಂಡು, ಕೊಲೆಯಾದ ಬಾಲಕನ ಮಲತಂದೆ ಮಹೇಶ್ವರ ಮಾಂಜಿ ಮತ್ತು ಆತನ ಸ್ನೇಹಿತರಾದ ರಾಕೇಶ ಮಾಂಜಿ, ಶಿವನಾಥ ಮಾಂಜಿ, ಮಹೇಶ ಮಾಂಜಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದೇವೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೈಕ್ ಮತ್ತು ಬಸ್ ನಡುವೆ ಅಪಘಾತ ಗರ್ಭಿಣಿ ಸಾವು

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ನವಿಪೇಠ ರಸ್ತೆಯಲ್ಲಿ ಬಸ್ ಮತ್ತು ಬೈಕ್...

ಬೆಳಗಾವಿ : ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಬುಧವಾರ ರಜೆ

ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನಾಳೆ ಬುಧವಾರ...

ಬೆಳಗಾವಿ : ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳಗಾವಿಯ ಬಿಮ್ಸ್ ಆವರಣದಲ್ಲಿರುವ ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...

ಸಂಪೂರ್ಣ ನೆಲಕಚ್ಚಿದ ಸೋಯಾಬೀನ್‌ ಬೆಳೆ: ಪರಿಹಾರದ ನಿರೀಕ್ಷೆಯಲ್ಲಿ ರೈತರು

ಬೈಲಹೊಂಗಲ, ಸವದತ್ತಿ, ಕಿತ್ತೂರು ಸೇರಿದಂತೆ ಬೆಳಗಾವಿ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಅತಿ...

Download Eedina App Android / iOS

X