ನೀವು 19 ಸಾವಿರ ಮಕ್ಕಳು, 53 ಸಾವಿರ ನಾಗರಿಕರನ್ನು ಕೊಂದಿದ್ದೀರಿ: ಸಂಸತ್ತಿನಲ್ಲಿ ಇಸ್ರೇಲ್ ಸಂಸದನ ವಾಗ್ದಾಳಿ

Date:

Advertisements

ಗಾಜಾದಲ್ಲಿ ಇಸ್ರೇಲ್ ನಡೆಸುತ್ತಿರುವ ಯುದ್ಧವನ್ನು ಖಂಡಿಸಿದ ಇಸ್ರೇಲ್ ಸಂಸದ ಅಯ್ಮಾನ್ ಒಡೆಹ್ ಅವರನ್ನು ಬಲವಂತವಾಗಿ ಸಂಸತ್ತಿನ ವೇದಿಕೆಯಿಂದ ಹೊರಹಾಕಿದ ಘಟನೆ ವರದಿಯಾಗಿದೆ.

`ಸುಮಾರು ಒಂದೂವರೆ ವರ್ಷದ ಬಳಿಕ ನೀವು 19,ಸಾವಿರ ಮಕ್ಕಳನ್ನು, 53 ಸಾವಿರ ನಾಗರಿಕರನ್ನು ಕೊಂದಿದ್ದೀರಿ. ಎಲ್ಲ ವಿಶ್ವವಿದ್ಯಾಲಯಗಳು, ಆಸ್ಪತ್ರೆಗಳನ್ನು ನಾಶಗೊಳಿಸಿದ್ದೀರಿ. ರಾಜಕೀಯ ಗೆಲುವು ಇಲ್ಲ ಎಂದು ನೀವು ಭಾವಿಸಿದ್ದೀರಿ. ಆದ್ದರಿಂದಲೇ ಹುಚ್ಚರಂತೆ ವರ್ತಿಸುತ್ತಿದ್ದೀರಿ’ ಎಂದು ಸಂಸತ್ತಿನ ವೇದಿಕೆಯಲ್ಲಿ ಒಡೆಹ್ ನೀಡಿದ ಹೇಳಿಕೆ ಸಂಸತ್ತಿನಲ್ಲಿ ಗದ್ದಲ, ಗೊಂದಲಕ್ಕೆ ಕಾರಣವಾಯಿತು.

ತಕ್ಷಣ ಅವರನ್ನು ಬಲವಂತವಾಗಿ ಹೊರಗೆ ಹಾಕಲಾಗಿದೆ. ಹೊರಗೆ ಕರೆದೊಯ್ಯುವಾಗಲೂ ಅವರು ಸರ್ಕಾರದ ವಿರುದ್ಧದ ವಾಗ್ದಾಳಿ ಮುಂದುವರಿಸುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

Advertisements

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕೊಲೆ ಕೃತ್ಯಗಳಲ್ಲಿ ಮಕ್ಕಳ ಭಾಗವಹಿಸುವಿಕೆ ಗಂಭೀರ ಮತ್ತು ಆಘಾತಕಾರಿ!

ಏತನ್ಮಧ್ಯೆ, ಕಳೆದ 24 ಗಂಟೆಗಳ ಅವಧಿಯಲ್ಲಿ ಗಾಜಾದಾದ್ಯಂತ ಇಸ್ರೇಲಿ ಪಡೆ ನಟೆಸಿದ ದಾಳಿಗಳಲ್ಲಿ ಕನಿಷ್ಠ 60 ಜನರು ಸಾವನ್ನಪ್ಪಿದ್ದಾರೆ ಎಂದು ಗಾಜಾದ ಆರೋಗ್ಯ ಸಚಿವಾಲಯ ತಿಳಿಸಿದೆ.

ಮೃತರಲ್ಲಿ ದಕ್ಷಿಣ ನಗರ ಖಾನ್ ಯೂನಿಸ್‌ನಲ್ಲಿ 10 ಜನರು, ಮಧ್ಯ ಪಟ್ಟಣವಾದ ದೇರ್ ಅಲ್-ಬಲಾದಲ್ಲಿ ನಾಲ್ವರು ಮತ್ತು ಉತ್ತರದ ಜಬಾಲಿಯಾ ನಿರಾಶ್ರಿತರ ಶಿಬಿರದಲ್ಲಿ 9 ಜನರು ಸೇರಿದ್ದಾರೆ.

ಇಸ್ರೇಲ್ ಸುಮಾರು ಮೂರು ತಿಂಗಳಿನಿಂದ ಗಾಜಾಗೆ ಮಾನವೀಯ ನೆರವು ನೀಡುವುದನ್ನು ನಿರ್ಬಂಧಿಸಿದೆ. ಇದು ಅಂತಾರಾಷ್ಟ್ರೀಯ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ. ಗಾಜಾದ ಜನಸಂಖ್ಯೆಯ ಬಹುಪಾಲು 20 ಲಕ್ಷಕ್ಕಿಂತಲೂ ಹೆಚ್ಚು ಜನರು ಈಗ ಕ್ಷಾಮದ ಅಪಾಯದಲ್ಲಿದ್ದಾರೆ ಎಂದು ತಜ್ಞರು ಎಚ್ಚರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಝಾದಲ್ಲಿ ನರಮೇಧ: ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಮತ್ತು ಇಸ್ರೇಲ್ ರಾಯಭಾರಿ ನಡುವೆ ವಾಕ್ಸಮರ

ಗಾಝಾದಲ್ಲಿ 'ಅಲ್‌ಝಝೀರಾ' ಸಂಸ್ಥೆಯ ಪತ್ರಕರ್ತನನ್ನು ಇಸ್ರೇಲ್ ಹತ್ಯೆಗೈದಿದೆ. ಈ ಹತ್ಯೆಯನ್ನು ಕಾಂಗ್ರೆಸ್‌...

ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

ರಷ್ಯಾ ಜೊತೆ ಸಂಘರ್ಷದಲ್ಲಿರುವ ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಧಾನಿ...

ಗಾಝಾದಲ್ಲಿ ಹತ್ಯೆಯಾದ ಯುವ ಪತ್ರಕರ್ತರೊಬ್ಬರ ಭಿನ್ನ ಉಯಿಲು !

ನಾನು ಸಾಯುವುದಾದರೆ, ನನ್ನ ಸಿದ್ಧಾಂತಗಳ ಮೇಲೆ ದೃಢವಾಗಿರುವೆ. ದೇವರ ಮುಂದೆ ನಾನು...

ಗಾಝಾದಲ್ಲಿ ಇಸ್ರೇಲ್ ದಾಳಿ: ಐವರು ಅಲ್‌ಜಝೀರಾ ಪತ್ರಕರ್ತರು ಹತ

ಭಾನುವಾರ ಗಾಝಾ ನಗರದಲ್ಲಿ ಅಲ್‌ಜಝೀರಾ ಟೆಂಟ್ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ...

Download Eedina App Android / iOS

X