ಗುಬ್ಬಿ | ಜಮೀನು ವಿವಾದ : ದೊಡ್ಡಪ್ಪನನ್ನೇ ಚಾಕುವಿನಿಂದ ಇರಿದು ಕೊಂದ ಪಾಪಿ

Date:

Advertisements

ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ದೊಡ್ಡಪ್ಪ ಮತ್ತು ತಾಯಿ ನಡುವೆ ಜಗಳ ನಡೆದು ಜಗಳ ತಾರಕಕ್ಕೇರಿದ ಸಮಯದಲ್ಲಿ ಕುಪಿತಗೊಂಡ ಮಗ ಸ್ವಂತ ತಂದೆಯ ಅಣ್ಣ ದೊಡ್ಡಪ್ಪನಿಗೆ ಚಾಕು ಇರಿದು ಕೊಲೆಗೈದ ಧಾರುಣ ಘಟನೆ ಶನಿವಾರ ನಡೆದಿದೆ.

ಗುಬ್ಬಿ ತಾಲ್ಲೂಕಿನ ಸಿ.ಎಸ್.ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಅಂಕಳಕೊಪ್ಪ ಗ್ರಾಮದಲ್ಲಿ ಯುವಕ ಆಫ್ರೀದ್ (25) ತನ್ನ ತಂದೆಯ ಅಣ್ಣ ದೊಡ್ಡಪ್ಪ ಕರಿಂಸಾಬ್ (60) ಅವರನ್ನು ಧಾರುಣವಾಗಿ ಕೊಲೆಗೈದ ಘಟನೆ ಇಡೀ ಗ್ರಾಮವನ್ನೇ ತಲ್ಲಣ ಗೊಳಿಸಿದೆ.

ಆಫ್ರಿದ್ ತಾಯಿ ಬೇಬಿ ಜಾನ್ ಎಂಬುವರು ಕೊಲೆಯಾದ ಕರೀಮ್ ಸಾಬ್ ವ್ಯಕ್ತಿಗೆ ಸೇರಿದ ಜಮೀನಿನಲ್ಲಿ ಮೇಕೆ ಮೇಯಿಸುತ್ತಿದ್ದ ವೇಳೆ ಈ ಜಮೀನು ನನಗೆ ಸೇರಿದ್ದು ಯಾಕೆ ಇಲ್ಲಿ ಮೇಕೆ ಮೇಯಿಸುತ್ತಿದ್ದೀಯಾ ಎಂದು ಕೇಳಲಾಗಿ ಬೇಬಿ ಜಾನ್ ಮತ್ತು ಮೃತ ವ್ಯಕ್ತಿಯ ನಡುವೆ ಜಗಳ ನಡೆದಿದ್ದು ಈ ವಿಚಾರವನ್ನು ಬೇಬಿ ಜಾನ್ ಮಗ ಅಫ್ರಿದ್ ಗೆ ಫೋನ್ ಮಾಡಿ ತಿಳಿಸಿದ ವೇಳೆ ಆಕ್ರೋಶಗೊಂಡ ಆಫ್ರಿದ್ ರಸ್ತೆಯಲ್ಲಿ ಬರುತ್ತಿದ್ದ ದೊಡ್ಡಪ್ಪ ಕರೀಂಸಾಬ್ ಅವರನ್ನು ಅಡ್ಡಗಟ್ಟಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisements

ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ವೆಂಕಟ್, ಶಿರಾ ಡಿವೈಎಸ್ಪಿ ಶೇಖರ್, ಗುಬ್ಬಿ ವೃತ್ತ ನಿರೀಕ್ಷಕ ರಾಘವೇಂದ್ರ ರವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಿ.ಎಸ್.ಪುರ ಪೊಲೀಸ್ ಠಾಣೆಯಲ್ಲಿ ಆರೋಪಿಗಳಾದ ಅಫ್ರಿದ್, ಅಶ್ವಕ್, ಗೌಸ್ ಪೀರ್, ಬೇಬಿ ಜಾನ್ ಎಂಬುವರ ನಾಲ್ಕು ಜನರ ಮೇಲೆ ಕೊಲೆ ಪ್ರಕರಣ ದಾಖಲು ಮಾಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

Download Eedina App Android / iOS

X