ಬೀದರ್‌ | ಸಂಘಟಿತರಾಗಿ ಅಸಮಾನತೆ ವಿರುದ್ಧ ಹೋರಾಡಿ : ಸಚಿವ ಈಶ್ವರ ಖಂಡ್ರೆ

Date:

Advertisements

ದೇಶದಲ್ಲಿ ಶೋಷಣೆ, ಅಸಮಾನತೆ, ಧರ್ಮಾಂಧತೆ ಮಿತಿಮೀರುತ್ತಿದ್ದು, ಸಂಘಟಿತರಾಗಿ ಮನುವಾದಿಗಳ ವಿರುದ್ಧ ಹೋರಾಡುವ ಅಗತ್ಯವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ತಿಳಿಸಿದರು.

ಬೀದರ್ ನಗರದ ಡಾ.ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಬೀದರ್‌ ಜಿಲ್ಲಾ ಶಾಖೆಯಿಂದ ಶನಿವಾರ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ 892ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ʼಕೋಮುವಾದಿ, ಬಂಡವಾಳಶಾಹಿ‌ ಶಕ್ತಿಗಳ ಆರ್ಭಟ ಹೆಚ್ಚುತ್ತಿದೆ. ನಮ್ಮೊಳಗಿನ ಭಿನ್ನತೆಗಳು ಬಿಟ್ಟು ವಿಶಾಲ ದೃಷ್ಟಿಕೋನದಿಂದ ಒಂದೇ ವೇದಿಕೆಗೆ ಬಂದು ಸಂಘಟಿತರಾಗಿ ಹೋರಾಡಬೇಕಿದೆʼ ಎಂದರು.

Advertisements

ʼಅನುಭವ ಮಂಟಪ ಆಗಬೇಕೆನ್ನುವುದು ಚನ್ನಬಸವ ಪಟ್ಟದ್ದೇವರು, ನಮ್ಮ ತಂದೆ ಮಾಜಿ ಸಚಿವ ಭೀಮಣ್ಣ ಖಂಡ್ರೆ ಸೇರಿದಂತೆ ‌‌ಹಲವರ ಆಸೆಯಾಗಿತ್ತು. ಹಿರಿಯರ ಕನಸ್ಸಿನಂತೆ ನಮ್ಮ ಸರ್ಕಾರ ಆ ಕೆಲಸ ಮಾಡುತ್ತಿದೆ. ಈಗಾಗಲೇ ₹350 ಕೋಟಿ ಖರ್ಚಾಗಿದೆ. 750 ಕಂಬಗಳ ಮೇಲೆ ವಿವಿಧ ವೃತ್ತಿಗಳ ಶರಣರ ವಚನಗಳನ್ನು ಕೆತ್ತನೆ ಮಾಡಲಾಗುವುದು. ಎಲ್ಲ ಶರಣರ ಪರಿಚಯಿಸಲು ಶರಣ ಗ್ರಾಮ ಕೂಡ ಅಲ್ಲಿ ನಿರ್ಮಾಣವಾಗಲಿದೆʼ ಎಂದು ಹೇಳಿದರು.

ʼಯುವಕರಿಗೆ ಉತ್ತಮ ಸಂಸ್ಕಾರ ಕೊಟ್ಟು ದಾರ್ಶನಿಕರ ವಿಚಾರಗಳನ್ನು ಬಿತ್ತಬೇಕು. ಈ ದೃಷ್ಟಿಯಿಂದ ಅನುಭವ ಮಂಟಪದಲ್ಲಿ ಐಐಎಸ್‌ಸಿ ಸಂಶೋಧಕರ ನೆರವಿನೊಂದಿಗೆ ವೈಜ್ಞಾನಿಕವಾಗಿ ಇಷ್ಟಲಿಂಗ ಪೂಜೆಗೆ ತರಬೇತಿ ಕೊಡುವ ಕೇಂದ್ರ ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ. ಯುವಕರಲ್ಲಿ ಏಕಾಗ್ರತೆ ಮೂಡಿಸಲು ಯೋಜನೆ ರೂಪಿಸಲಾಗಿದೆ. ಯುವಕರಿಗೆ ಸಂಸ್ಕಾರ ಕೊಟ್ಟು, ಪ್ರೀತಿ, ಸಹೋದರತೆ ಬಿತ್ತುವ ಕೆಲಸ ಮಾಡಲಾಗುವುದುʼ ಎಂದು ತಿಳಿಸಿದರು.

ಉಪನ್ಯಾಸ ನೀಡಿದ ಸಾಹಿತಿ ಕಾವ್ಯಶ್ರೀ ಮಹಾಗಾಂವಕರ ವಿಶೇಷ ಉಪನ್ಯಾಸ ನೀಡಿದರು. ಬಸವ ಸೇವಾ ಪ್ರತಿಷ್ಠಾನದ ಅಧ್ಯಕ್ಷೆ ಗಂಗಾಂಬಿಕಾ ಅಕ್ಕ ಮಾತನಾಡಿದರು.

ಹರಳಯ್ಯ ಸಮಾಜದ ಪ್ರಧಾನ ಕಾರ್ಯದರ್ಶಿ ರಾಜಕುಮಾರ ಟಿಳೇಕರ ಹಲಬರ್ಗಾ ಅಧ್ಯಕ್ಷತೆ ವಹಿಸಿದ್ದರು. ಗ್ಯಾರಂಟಿ ಯೋಜನೆಯಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಅಮೃತರಾವ್‌ ಚಿಮಕೋಡೆ, ಬುಡಾ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಗುರುನಾನಕ ಶಿಕ್ಷಣ ಸಂಸ್ಥೆ ಅಧ್ಯಕ್ಷ ಬಲಬೀರ್‌ ಸಿಂಗ್‌, ಬಸವ ಕೇಂದ್ರದ ಅಧ್ಯಕ್ಷ ಶರಣಪ್ಪ ಮಿಠಾರೆ, ಮರಾಠ ಸಮಾಜದ ಅಶೋಕ ಸೋನಜಿ, ಲಿಂಗಾಯತ ಸಮಾಜ ಯುವ ಒಕ್ಕೂಟದ ಅಧ್ಯಕ್ಷ ಆನಂದ ದೇವಪ್ಪ, ಮುಖಂಡರಾದ ಬಸವಕುಮಾರ ಪಾಟೀಲ, ಅನಿಲಕುಮಾರ ಬೆಲ್ದಾರ, ರಮೇಶ ಡಾಕುಳಗಿ, ದೇವಿದಾಸ ತುಮಕುಂಟೆ, ದಿಗಂಬರ ಮಡಿವಾಳ, ಜಗನ್ನಾಥ ತಡಪಳ್ಳಿ, ತುಕಾರಾಮ ಚಿಮಕೋಡೆ, ಡಾ.ರಾಜಶೇಖರ ಸೇಡಂಕರ, ಶಾಮರಾವ್‌ ಮೋರ್ಗಿಕರ್‌, ತಾನಾಜಿ ಸಗರ, ಸಂಗಯ್ಯ ಸುಲ್ತಾನಪೂರೆ, ಓಂರೆಡ್ಡಿ ಸೇರಿದಂತೆ ವಿವಿಧ ಸಮುದಾಯಗಳ ಅಧ್ಯಕ್ಷರು, ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಇದನ್ನೂ ಓದಿ : ಬೀದರ್‌ | ಪತ್ರಿಕೋದ್ಯಮ ಅಧ್ಯಯನದಿಂದ ಸಾಮಾಜಿಕ ಹೊಣೆಗಾರಿಕೆ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X