ಭಾರತೀಯರನ್ನು ಕೊಂದರೆ ಬೆಲೆ ತೆರಬೇಕಾಗುತ್ತದೆ: ಪಾಕಿಸ್ತಾನಕ್ಕೆ ಶಶಿ ತರೂರ್ ಎಚ್ಚರಿಕೆ

Date:

Advertisements

ಪಾಕಿಸ್ತಾನದಲ್ಲಿ ಕುಳಿತು ಗಡಿಯುದ್ದಕ್ಕೂ ಭಾರತೀಯ ನಾಗರಿಕರನ್ನು ನಿರ್ಭಯದಿಂದ ಕೊಲ್ಲಬಹುದು ಎಂಬ ಕಲ್ಪನೆ ಬರಲು ನಾವು ಬಿಡಲಾರೆವು. ಏಕೆಂದರೆ ಭಾರತೀಯರನ್ನು ಕೊಂದರೆ ಅದಕ್ಕೆ ಬೆಲೆ ತೆರಬೇಕಾಗುತ್ತದೆ ಎಂದು ನಾವು ಈಗಾಗಲೇ ತೋರಿಸಿಕೊಟ್ಟಿದ್ದೇವೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದಾರೆ.

ಭಯೋತ್ಪಾದನೆಯ ವಿರುದ್ಧ ಭಾರತದ ದೃಢಸಂಕಲ್ಪವವನ್ನು ತಿಳಿಸಲು ಮತ್ತು ಭಯೋತ್ಪಾದನೆಯೊಂದಿಗೆ ಪಾಕಿಸ್ತಾನದ ಸಂಪರ್ಕವನ್ನು ವಿಶ್ವಕ್ಕೆ ಒತ್ತಿ ಹೇಳುವ ನಿರ್ಧಾರವನ್ನು ಭಾರತ ಕೈಗೊಂಡಿದೆ. ಈ ನಿಟ್ಟಿನಲ್ಲಿ ರಚಿಸಲಾದ ಭಾರತೀಯ ಸಂಸದರ ನಿಯೋಗವನ್ನು ತರೂರ್ ಮುನ್ನಡೆಸುತ್ತಿದ್ದಾರೆ. ಈ ನಿಯೋಗ ಗಯಾನಾ, ಪನಾಮ, ಕೊಲಂಬಿಯಾ, ಬ್ರೆಜಿಲ್ ಮತ್ತು ಯುಎಸ್‌ಗೆ ಭೇಟಿ ನೀಡಲಿದೆ.

ಇದನ್ನು ಓದಿದ್ದೀರಾ? ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಅಭಿಯಾನ; ಶಶಿ ತರೂರ್ ನೇತೃತ್ವದ ಸರ್ವಪಕ್ಷ ನಿಯೋಗ ರಚನೆ

Advertisements

ವಿವಿಧ ದೇಶಗಳಿಗೆ ಭೇಟಿ ನೀಡುವ ಈ ಸರ್ವಪಕ್ಷ ನಿಯೋಗವು ಪಾಕಿಸ್ತಾನದೊಂದಿಗಿನ ಇತ್ತೀಚೆಗೆ ನಡೆದ ಸಂಘರ್ಷವು ಆಪರೇಷನ್ ಸಿಂಧೂರದಿಂದ ಆರಂಭವಾಗಿರುವುದಲ್ಲ. ಬದಲಾಗಿ 26 ಪ್ರವಾಸಿಗರನ್ನು ಕೊಂದ ಭಯೋತ್ಪಾದಕ ದಾಳಿಯಿಂದಾಗಿ ಪ್ರಾರಂಭವಾಗಿರುವುದು ಎಂದು ಈ ನಿಯೋಗಗಳು ಒತ್ತಿ ಹೇಳುತ್ತವೆ.

ಭಾರತೀಯ-ಅಮೆರಿಕನ್ ಸಮುದಾಯದ ಆಯ್ದ ಪ್ರಮುಖ ಸದಸ್ಯರು, ಪ್ರಮುಖ ಮಾಧ್ಯಮ ಮತ್ತು ಚಿಂತಕರೊಂದಿಗೆ ಶಶಿ ತರೂರ್ ಶನಿವಾರ ಸಂವಾದವನ್ನು ನಡೆಸಿದ್ದಾರೆ. “ನಾವು ಏನನ್ನೂ ನಾವಾಗಿಯೇ ಪ್ರಾರಂಭಿಸಲು ಬಯಸಿರಲಿಲ್ಲ. ಇದು ಪಾಕಿಸ್ತಾನಕ್ಕೆ ಭಾರತದ ಸ್ಪಷ್ಟ ಸಂದೇಶ” ಎಂದು ಹೇಳಿದ್ದಾರೆ.

“ನಾವು ಭಯೋತ್ಪಾದಕರಿಗೆ ಸಂದೇಶವನ್ನು ಕಳುಹಿಸುತ್ತಿದ್ದೆವು. ನೀವು ಪ್ರಾರಂಭಿಸಿದ್ದೀರಿ, ನಾವು ಉತ್ತರಿಸಿದ್ದೇವೆ. ನೀವು ನಿಲ್ಲಿಸಿದರೆ, ನಾವು ನಿಲ್ಲಿಸುತ್ತೇವೆ. ಈಗ ನೀವು ನಿಲ್ಲಿಸಿದ್ದೀರಿ. 88 ಗಂಟೆಗಳ ಕಾಲ ಯುದ್ಧ ನಡೆದಿದೆ. ನಾವು ಈ ಬಗ್ಗೆ ಹತಾಶೆ ಹೊಂದಿದ್ದೇವೆ. ಯಾಕೆಂದರೆ ಯುದ್ಧ ನಡೆಯಬಾರದು. ಹಲವು ಸಾವುನೋವು ಸಂಭವಿಸಿದೆ. ಆದರೆ ನಾವು ಇವೆಲ್ಲವನ್ನೂ ನಾವು ದೃಢ ಮತ್ತು ದೃಢನಿಶ್ಚಯದಿಂದ ಹಿಂದಿರುಗಿ ನೋಡುತ್ತೇವೆ” ಎಂದು ತಿಳಿಸಿದ್ದಾರೆ.

ಇದನ್ನು ಒದಿದ್ದೀರಾ? ಆಪರೇಷನ್ ಸಿಂಧೂರ | ಕಾಂಗ್ರೆಸ್‌ – ತರೂರ್ ನಡುವೆ ವಾಗ್ಯುದ್ಧ; ಬೇಳೆ ಬೇಯಿಸಿಕೊಳ್ಳುತ್ತಿದೆ ಬಿಜೆಪಿ

“ಪಾಕಿಸ್ತಾನದಲ್ಲಿ ಕುಳಿತಿರುವ ಯಾರೂ ಗಡಿಯನ್ನು ದಾಟಿ ಬಂದು ನಮ್ಮ ನಾಗರಿಕರನ್ನು ಸುಲಭವಾಗಿ ಕೊಲ್ಲಬಹುದು ಎಂದು ನಂಬಲು ನಾವು ಬಿಡಲಾರೆವು. ಭಾರತೀಯರನ್ನು ಕೊಂದರೆ ಬೆಲೆ ತೆರಬೇಕಾಗುತ್ತದೆ. ನಾವು ಕೆಲವು ವರ್ಷಗಳಿಂದ ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಮುಕ್ತ ಮಾರುಕಟ್ಟೆ ಪ್ರಜಾಪ್ರಭುತ್ವವಾಗುವುದರ ಮೇಲೆ ಗಮನ ಇರಿಸಿದ್ದೇವೆ. ನಮ್ಮ ಆರ್ಥಿಕತೆಯ ಅಭಿವೃದ್ಧಿಯ ಮೇಲೆ ಕೇಂದ್ರೀಕರಿಸಲು ಪ್ರಯತ್ನಿಸುತ್ತಿದ್ದೇವೆ. ತಂತ್ರಜ್ಞಾನ ಮತ್ತು ತಾಂತ್ರಿಕ ಬೆಳವಣಿಗೆಯ ಮೇಲೆ ಹೆಚ್ಚಿನ ಒತ್ತು ನೀಡುತ್ತಿದ್ದೇವೆ” ಎಂದರು.

ತರೂರ್ ನೇತೃತ್ವದ ನಿಯೋಗದಲ್ಲಿ ಸರ್ಫರಾಜ್ ಅಹ್ಮದ್(ಜೆಎಂಎಂ), ಗಂಟಿ ಹರೀಶ್ ಮಧುರ್ ಬಾಲಯೋಗಿ(ಟಿಡಿಪಿ), ಶಶಾಂಕ್ ಮಣಿ ತ್ರಿಪಾಠಿ(ಬಿಜೆಪಿ), ಭುವನೇಶ್ವರ ಕಲಿತಾ(ಬಿಜೆಪಿ), ಮಿಲಿಂದ್ ದಿಯೋರಾ(ಶಿವಸೇನೆ), ತೇಜಸ್ವಿ ಸೂರ್ಯ(ಬಿಜೆಪಿ), ಮತ್ತು ಅಮೆರಿಕದ ಮಾಜಿ ರಾಯಭಾರಿ ತರಂಜಿತ್ ಸಂಧು ಇದ್ದಾರೆ. ನಿಯೋಗ ಶನಿವಾರ ನ್ಯೂಯಾರ್ಕ್ ತಲುಪಿದ್ದು ಗಯಾನಾಗೆ ಪ್ರಯಾಣಿಸಲಿದೆ. ಜೂನ್ 3ರಂದು ಅಮೆರಿಕಕ್ಕೆ ಹಿಂತಿರುಗಲಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X