ವಕ್ಫ್ ಕಾಯ್ದೆ ಮುಸ್ಲಿಮರ ಆಸ್ತಿಗಳನ್ನು ದೋಚುವ ಗುರಿ ಹೊಂದಿದೆ, ಮುಂದಿನ ಗುರಿ ಸಿಖ್ಖರು: ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ

Date:

Advertisements

ಕೇಂದ್ರದ ಬಿಜೆಪಿ ಸರ್ಕಾರವು ವಕ್ಫ್ ಕಾಯ್ದೆಯನ್ನು ತರುವ ಮೂಲಕ 44 ಲಕ್ಷ ಎಕರೆ ಮುಸ್ಲಿಮರ ಭೂಮಿಯನ್ನು ವಶಪಡಿಸಿಕೊಳ್ಳಲು ಪ್ರಮುಖ ಪಿತೂರಿ ನಡೆಸಿದೆ. ಅವರ ಮುಂದಿನ ಗುರಿ ಸಿಖ್ಖರು ಎಂದು ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಮತ್ತು ಲುಧಿಯಾನದ ಸಂಸತ್ ಸದಸ್ಯ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಭಾನುವಾರ ಆರೋಪಿಸಿದ್ದಾರೆ.

ಮಲೇರ್ಕೋಟ್ಲಾದಲ್ಲಿ ನಡೆದ ‘ಸಂವಿಧಾನ್ ಬಚಾವೊ ಸಭೆ’ಯನ್ನು ಉದ್ದೇಶಿಸಿ ಮಾತನಾಡಿದ ವಾರಿಂಗ್, “ಮುಸ್ಲಿಮರನ್ನು ಗುರಿಯಾಗಿಸಿಕೊಂಡ ನಂತರ ಬಿಜೆಪಿಯ ಮುಂದಿನ ಗುರಿ ಸಿಖ್ ಸಮುದಾಯ ಆಗಿರಬಹುದು. ಶಿರೋಮಣಿ ಗುರುದ್ವಾರ ಪ್ರಬಂಧಕ್ ಸಮಿತಿಯ (ಎಸ್‌ಜಿಪಿಸಿ) ಆಸ್ತಿಗಳ ವಿರುದ್ಧವೂ ಇದೇ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಬಹುದು” ಎಂದರು.

ಇದನ್ನು ಓದಿದ್ದೀರಾ? ಕಲಬುರಗಿ | ನಾಳೆ ದಾವಣಗೆರೆಯಲ್ಲಿ ಸಂವಿಧಾನ ಸಂರಕ್ಷಕರ ಸಮಾವೇಶ

Advertisements

“ಬಿಜೆಪಿ ದೇಶಾದ್ಯಂತ ಮುಸ್ಲಿಮರಲ್ಲಿ ಭಯದ ವಾತಾವರಣ ಸೃಷ್ಟಿಸಿದೆ. ಬಿಜೆಪಿ ಮುಸ್ಲಿಮರ ವಿರುದ್ಧವಾಗಿದೆ. ಲೋಕಸಭೆಯಲ್ಲಿ ಬಿಜೆಪಿ ಹೊಂದಿರುವ 240 ಸಂಸದರಲ್ಲಿ ಒಬ್ಬರೂ ಮುಸ್ಲಿಮರಿಲ್ಲ” ಎಂದು ಟೀಕಿಸಿದರು.

“ಜನರು ಸಾಮರಸ್ಯದಿಂದ ವಾಸಿಸುವ ರಾಜ್ಯವಾದ ಪಂಜಾಬ್‌ನಲ್ಲಿ ಬಿಜೆಪಿ ಮತ್ತು ಆರ್‌ಎಸ್‌ಎಸ್ ಕೋಮು ದ್ವೇಷ ಬಿತ್ತುವಲ್ಲಿ ಯಶಸ್ವಿಯಾಗಲು ಬಿಡುವುದಿಲ್ಲ. ಪಂಜಾಬ್‌ನಲ್ಲಿ ಸಿಖ್ ಸಮುದಾಯವು ಮುಸ್ಲಿಂ ಸಹೋದರರಿಗೆ ಮಸೀದಿಗಳು ಮತ್ತು ಸ್ಮಶಾನಗಳಿಗೆ ಭೂಮಿಯನ್ನು ಒದಗಿಸಿರುವ ಸ್ಥಳಗಳಿವೆ” ಎಂದರು.

“ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಮತ್ತು ರಾಜ್ಯದ ಎಎಪಿ ಸರ್ಕಾರವು ವಿರೋಧ ಪಕ್ಷದ ಧ್ವನಿಯನ್ನು ಅಡಗಿಸುವ ಮೂಲಕ ಸಂವಿಧಾನವನ್ನು ದುರ್ಬಲಗೊಳಿಸುತ್ತಿವೆ. ರಾಜಕೀಯ ವಿರೋಧಿಗಳ ವಿರುದ್ಧ ಬಿಜೆಪಿ ಇಡಿ, ಸಿಬಿಐ ಮತ್ತು ಆದಾಯ ತೆರಿಗೆ ಇಲಾಖೆಯಂತಹ ಕೇಂದ್ರ ತನಿಖಾ ಸಂಸ್ಥೆಗಳನ್ನು ಬಳಸುತ್ತಿದೆ” ಎಂದು ಆರೋಪಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X