ಹೆದ್ದಾರಿಯಲ್ಲೇ ನಿಂತು ಮಹಿಳೆಯೊಂದಿಗೆ ಕಾಮಕೃತ್ಯ: ವಿಡಿಯೋ ವೈರಲ್ ಬೆನ್ನಲ್ಲೇ ಮಧ್ಯಪ್ರದೇಶ ಬಿಜೆಪಿ ಮುಖಂಡನ ಬಂಧನ

Date:

Advertisements

ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಮಹಿಳೆಯೊಬ್ಬರ ಜೊತೆ ಮಧ್ಯಪ್ರದೇಶ ಬಿಜೆಪಿ ಮುಖಂಡರೊಬ್ಬರು ಲೈಂಗಿಕ ಕ್ರಿಯೆ ನಡೆಸಿದ ಸಿಸಿಟಿವಿ ವಿಡಿಯೋ ವೈರಲ್ ಆಗಿದೆ. ಇದಾದ ಬೆನ್ನಲ್ಲೇ ಮನೋಹರ್ ಲಾಲ್ ಧಕಾಡ್ ಅವರನ್ನು ಭಾನುವಾರ ಬಂಧಿಸಲಾಗಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಭಾನ್ಪುರ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.

ಮನೋಹರ್ ಲಾಲ್ ಧಕಾಡ್ ಮಧ್ಯಪ್ರದೇಶದ ಮಂದ್ಸೌ‌ರ್ ಬಿಜೆಪಿಯಲ್ಲಿ ಸಕ್ರಿಯನಾಗಿದ್ದು, ಬಿಜೆಪಿಯ ರಾಷ್ಟ್ರೀಯ ಯುವಮೋರ್ಚಾ ಘಟಕದಲ್ಲೂ ಜವಾಬ್ದಾರಿ ಹೊಂದಿದ್ದ ಎನ್ನಲಾಗಿದೆ.

ಇದನ್ನು ಓದಿದ್ದೀರಾ? ಹೆದ್ದಾರಿಯಲ್ಲೇ ನಿಂತು ಮಹಿಳೆಯೊಂದಿಗೆ ಕಾಮಕೃತ್ಯ ನಡೆಸಿದ ಬಿಜೆಪಿ ಮುಖಂಡ: ಸಿಸಿಟಿವಿ ದೃಶ್ಯ ವೈರಲ್; ಎಫ್‌ಐಆರ್

Advertisements

ಆದರೆ ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಮನೋಹರ್ ಪ್ರಾಥಮಿಕ ಸದಸ್ಯನೂ ಆಗಿರಲಿಲ್ಲ ಎಂದು ಹೇಳಿಕೊಂಡಿದೆ. ಮೊಬೈಲ್ ಸಂಖ್ಯೆಗೆ ‘ಮಿಸ್ಡ್ ಕಾಲ್’ ನೀಡುವ ಮೂಲಕ ಯಾರಾದರೂ ಸದ್ಯಸರಾಗಬಹುದು ಎಂದು ಬಿಜೆಪಿ ವಕ್ತಾರ ಮತ್ತು ಮಂದಸೌರ್‌ನ ಮಾಜಿ ಶಾಸಕ ಯಶ್‌ಪಾಲ್ ಸಿಂಗ್ ಸಿಸೋಡಿಯಾ ಹೇಳಿದ್ದಾರೆ. ಆದರೆ ಮನೋಹರ್ ಲಾಲ್ ಬಿಜೆಪಿಯಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದ ಹಲವು ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.

ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಭಾನ್ಪುರ ಪೊಲೀಸ್ ಠಾಣೆಯ ಉಸ್ತುವಾರಿ ಮತ್ತು ತನಿಖಾಧಿಕಾರಿ ಆರ್.ಸಿ. ಡಾಂಗಿ, “ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 296, 285 ಮತ್ತು 3(5)ರ ಅಡಿಯಲ್ಲಿ ಅವರನ್ನು ಬಂಧಿಸಲಾಗಿದೆ. ಈ ವಿಡಿಯೋ ವೈರಲ್ ಮಾಡಿದವರು ಯಾರು ಮತ್ತು ಅದರ ಹಿಂದಿನ ಉದ್ದೇಶವೇನು ಎಂದು ತಿಳಿಯಬೇಕಾಗಿರುವುದರಿಂದ ತನಿಖೆ ಮುಂದುವರೆದಿದೆ” ಎಂದು ಹೇಳಿದ್ದಾರೆ.

“ಇಂತಹ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದರೂ ಸಹ, ಅದನ್ನು ಹೊಂದಿರುವವರು ಪೊಲೀಸರಿಗೆ ಹಸ್ತಾಂತರಿಸಬೇಕು. ಹಾಗಾಗಿ ಇತರ ವ್ಯಕ್ತಿಗಳು ಈ ಅಪರಾಧದಲ್ಲಿ ಭಾಗಿಯಾಗಿದ್ದಾರೆಯೇ ಎಂದು ನಾವು ಖಚಿತಪಡಿಸಿಕೊಳ್ಳಬೇಕು” ಎಂದು ತಿಳಿಸಿದ್ದಾರೆ.

ಇನ್ನು ಮಹಿಳೆಯನ್ನು ಬಂಧಿಸಿಲ್ಲ. “ಆಕೆಯ ವಿರುದ್ಧ ಯಾವ ಕಾನೂನು ಕ್ರಮ ಕೈಗೊಳ್ಳಬಹುದು ಎಂಬುದನ್ನು ನಿರ್ಧರಿಸುವ ಮೊದಲು ನಾವು ಸಂಪೂರ್ಣ ತನಿಖೆ ನಡೆಸಬೇಕಾಗಿದೆ” ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X