ಛತ್ತೀಸ್‌ಘಢ: ಶಿಕ್ಷಣ ಸಚಿವ ಪ್ರೇಮಸಾಯಿ ಸಿಂಗ್ ಟೇಕಮ್ ರಾಜೀನಾಮೆ

Date:

Advertisements

ಛತ್ತೀಸ್‌ಘಢದ ಶಿಕ್ಷಣ ಸಚಿವ ಪ್ರೇಮಸಾಯಿ ಸಿಂಗ್ ಟೇಕಮ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ನಿರ್ದೇಶನದಂತೆ ತಾವು ರಾಜೀನಾಮೆ ಸಲ್ಲಿಸಿರುವುದಾಗಿ ಅವರು ತಿಳಿಸಿದ್ದಾರೆ.

ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ಸಂಪುಟ ಪುನರ್ ರಚನೆ ಮಾಡಲಿದ್ದಾರೆ ಎಂದು ಕಳೆದ ಕೆಲವು ದಿನಗಳಿಂದ ಸುದ್ದಿ ಹಬ್ಬಿದೆ. ಇದರ ನಡುವೆಯೇ ಪ್ರೇಮಸಾಯಿ ಸಿಂಗ್ ಟೇಕಮ್ ಅವರ ರಾಜೀನಾಮೆ ನೀಡಿದ್ದಾರೆ. ಪ್ರತಾಪ್‌ಪುರ್‌ನ ಶಾಸಕರಾಗಿದ್ದ ಪ್ರೇಮಸಾಯಿ ಸಿಂಗ್, ಶಿಕ್ಷಣದ ಜೊತೆಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಅಲ್ಪಸಂಖ್ಯಾತರ ಅಭಿವೃದ್ಧಿ ಹಾಗೂ ಸಹಕಾರ ಖಾತೆಗಳನ್ನೂ ಹೊಂದಿದ್ದರು.

‘ಸಂಪುಟದಲ್ಲಿ ಯಾರನ್ನು ಇಟ್ಟುಕೊಳ್ಳಬೇಕು, ಯಾರನ್ನು ತೆಗೆಯಬೇಕು ಎನ್ನುವುದು ಮುಖ್ಯಮಂತ್ರಿಯ ವಿವೇಚನೆಗೆ ಬಿಟ್ಟ ವಿಚಾರ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ನನ್ನ ಪದವಿಗೆ ರಾಜೀನಾಮೆ ನೀಡಿದ್ದೇನೆ’ ಎಂದು ಪ್ರೇಮಸಾಯಿ ಸಿಂಗ್ ಪ್ರತಿಕ್ರಿಯಿಸಿದ್ದಾರೆ. ಸಂಪುಟ ಪುನರ್ ರಚನೆ ಎಂಬುದು ಒಂದು ಸಹಜ ಪ್ರಕ್ರಿಯೆ ಎಂದೂ ಅವರು ಹೇಳಿದ್ದಾರೆ. ತಾವು ಇದೇ ವರ್ಷದ ಕೊನೆಗೆ ನಡೆಯಲಿರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಯ ಕೆಲಸವನ್ನು ನಿರ್ವಹಿಸುವುದಾಗಿ ಅವರು ತಿಳಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ: ಅಧಿವೇಶನ | ಮೋದಿ ಮಾತು ಕೇಳಿದ್ದರೆ ಐದು ವರ್ಷ ಸಿಎಂ ಆಗಿರುತ್ತಿದ್ದೆ: ಎಚ್‌ ಡಿ ಕುಮಾರಸ್ವಾಮಿ

ಈ ಬಗ್ಗೆ ಪ್ರಕಟಣೆ ನೀಡಿರುವ ಮುಖ್ಯಮಂತ್ರಿ ಭೂಪೇಶ್ ಬಘೇಲ್, ತಾವು ಪ್ರೇಮಸಾಯಿ ಸಿಂಗ್ ಟೇಕಮ್ ಅವರ ರಾಜೀನಾಮೆಯನ್ನು ರಾಜ್ಯಪಾಲರಿಗೆ ರವಾನಿಸಿರುವುದಾಗಿ ತಿಳಿಸಿದ್ದಾರೆ.

ನಿನ್ನೆಯಷ್ಟೇ ಛತ್ತೀಸ್‌ಘಢ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿದ್ದ ಮೋಹನ್ ಮಾರ್ಕಮ್ ಅವರನ್ನು ತೆಗೆದು ಅವರ ಜಾಗದಲ್ಲಿ ಸಂಸದ ದೀಪಕ್ ಬೈಜ್ ಅವರನ್ನು ಕೂರಿಸಲಾಗಿತ್ತು. ಮೋಹನ್ ಮಾರ್ಕಮ್ ಅವರಿಗೆ ಸಚಿವ ಪದವಿ ನೀಡಲಾಗುತ್ತದೆ ಎನ್ನುವ ಸುದ್ದಿಗಳಿವೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X