ದಕ್ಷಿಣ ಕನ್ನಡ | ಭಾರೀ ಮಳೆ; ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ

Date:

Advertisements

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯ ಅಬ್ಬರ ಮುಂದುವರಿದಿದ್ದು, ವಿವಿಧ ಭಾಗಗಳಲ್ಲಿ ಹಾನಿಗಳು ವರದಿಯಾಗಿವೆ. ಜಿಲ್ಲೆಯೆಲ್ಲೆಡೆ ಸುರಿಯುತ್ತಿರುವ ಮಳೆಯ ಹಿನ್ನೆಲೆ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ.

ಮುಂದಿನ 3 ಗಂಟೆಗಳಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಬಲವಾದ ಗಾಳಿ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಅದರಲ್ಲೂ ಬಂಟ್ವಾಳ ತಾಲೂಕಿನಾದ್ಯಂತ ಮಳೆ ತೀವ್ರವಾಗಿರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

WhatsApp Image 2025 05 26 at 11.39.46 AM

ಕಾಡಬೆಟ್ಟು ಗ್ರಾಮದ ವಗ್ಗ ಎಂಬಲ್ಲಿ ವಾಸ್ತವ್ಯ ಇಲ್ಲ ಮನೆಯೊಂದರ ತಡೆಗೋಡೆ ಕುಸಿದಿದೆ. ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ಉಕ್ಕುಡ ದರ್ಬೆಯಲ್ಲಿ ಶಿಥಿಲಗೊಂಡ ಛಾವಣಿಗೆ ಟಾರ್ಪಲ್ ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ. ಪುದು ಗ್ರಾಮದಲ್ಲಿ ಮನೆ ಗೋಡೆ ಹಾಗೂ ಹೆಂಚಿಗೆ ಹಾನಿಯಾಗಿದೆ.

Advertisements

ಬಡಗ ಬೆಳ್ಳೂರು ಗ್ರಾಮದ ನಿವಾಸಿ ಮಮತಾರ ಮನೆಯ ಬದಿ ತಡೆಗೋಡೆ ಬಿದ್ದು ಮನೆಗೆ ಹಾನಿಯಾಗಿದೆ. ನೆಟ್ಲಮುಡ್ನೂರು ಗ್ರಾಮದ ಪರ್ಲೊಟ್ಟು ಬಳಿ ಮರ ಬಿದ್ದು ಹಾನಿಯಾಗಿದೆ. ಸಜಿಪಮುನ್ನೂರು ಗ್ರಾಮದಲ್ಲಿ ಕೆಲ ಮನೆಗಳಿಗೆ ತುಂಬಿ ಹರಿಯುತ್ತಿದ್ದ ಚರಂಡಿ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿದೆ.

WhatsApp Image 2025 05 26 at 11.39.45 AM

ಇದನ್ನೂ ಓದಿ: ಮಂಗಳೂರು | ಮಳೆ ಅವಾಂತರ; ಮೂರು ಲಕ್ಷ ಮೌಲ್ಯದ ದಿನಸಿ ನೀರುಪಾಲು

ಅಧಿಕಾರಿಗಳು ಸ್ಥಳೀಯ ಮಟ್ಟದಲ್ಲಿ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದಾರೆ. ಅನಿವಾರ್ಯ ಕೆಲಸವಿಲ್ಲದಿದ್ದರೆ ಜನಸಾಮಾನ್ಯರು ಸುರಕ್ಷಿತವಾಗಿ ಮನೆಯಲ್ಲಿ ಉಳಿಯುವಂತೆ ಜಿಲ್ಲಾಡಳಿತ ವಿನಂತಿಸಿದೆ ಎಂದು ವರದಿಯಾಗಿದೆ.

WhatsApp Image 2025 05 26 at 11.39.47 AM 1
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X