ಅಘೋಷಿತ ತುರ್ತು ಪರಿಸ್ಥಿತಿ ಆರಂಭವಾಗಿ 11 ವರ್ಷ: ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

Date:

Advertisements

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಹನ್ನೊಂದು ವರ್ಷಗಳಾಗಿದ್ದು, “ಅಘೋಷಿತ ತುರ್ತು ಪರಿಸ್ಥಿತಿ ಆರಂಭವಾಗಿ 11 ವರ್ಷ” ಆಗಿದೆ ಎಂದು ಕಾಂಗ್ರೆಸ್ ಹೇಳಿದೆ. ಈ ಹನ್ನೊಂದು ವರ್ಷಗಳಲ್ಲಿ ‘ಅಚ್ಛೇ ದಿನ’ ಎಂಬ ಭರವಸೆಯು ದುಃಸ್ವಪ್ನವಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಈ ಬಗ್ಗೆ ಎಕ್ಸ್‌ನಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಪೋಸ್ಟ್ ಮಾಡಿದ್ದಾರೆ. “2014 ಮಾರ್ಚ್ 24. ಈ ಹನ್ನೊಂದು ವರ್ಷಗಳಲ್ಲಿ ಬೃಹತ್ ಭರವಸೆಗಳನ್ನು ನೀಡಿದರು. ಆದರೆ ಎಲ್ಲವೂ ಪೊಳ್ಳಾಯಿತು. ‘ಅಚ್ಛೇ ದಿನ’ ಎಂಬುದು ಈಗ ದುಃಸ್ವಪ್ನ ಎಂಬುದು ಈ ಹನ್ನೊಂದು ವರ್ಷದಲ್ಲಿ ಸಾಬೀತಾಗಿದೆ” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಅಘೋಷಿತ ತುರ್ತು ಪರಿಸ್ಥಿತಿ | ಅಂಬೇಡ್ಕರ್ ರಚಿತ ಸಂವಿಧಾನ ನಾಶಕ್ಕೆ ಬಿಜೆಪಿ ಪಿತೂರಿ: ಶರದ್ ಪವಾರ್

Advertisements

ಹಾಗೆಯೇ ಯುವಕರಿಗೆ, ರೈತರಿಗೆ, ಮಹಿಳೆಯರಿಗೆ, ಹಿಂದುಳಿದ ವರ್ಗ, ಅರ್ಥವ್ಯವಸ್ಥೆ, ವಿದೇಶಾಂಗ ನೀತಿ, ಪ್ರಜಾಪ್ರಭುತ್ವದ ಸ್ಥಿತಿ ಹೇಗಿದೆ ಎಂಬುದನ್ನೂ ಖರ್ಗೆ ಅವರು ಒಂದೊಂದೇ ವಾಕ್ಯದಲ್ಲಿ ವಿವರಿಸಿದ್ದಾರೆ.

“ಯುವಜನರಿಗೆ ವರ್ಷಕ್ಕೆ ಎರಡು ಕೋಟಿ ಉದ್ಯೋಗಗಳ ಭರವಸೆ ನೀಡಲಾಗಿತ್ತು. ಆದರೆ ವಾಸ್ತವದಲ್ಲಿ ಕೋಟ್ಯಾಂತರ ಉದ್ಯೋಗಿಗಳು ಕಡಿಮೆಯಾಗಿದೆ. ರೈತರ ಆದಾಯ ದ್ವಿಗುಣಗೊಳ್ಳಲಿಲ್ಲ. ಜೊತೆಗೆ ರೈತರು ಕೇಂದ್ರದ ದಾಳಿಗೆ ಗುರಿಯಾಗಬೇಕಾಗಿದೆ” ಹೇಳಿದರು.

“ಮಹಿಳೆಯರಿಗೆ ಹೆಸರಿಗೆ ನೀಡುವ ಮೀಸಲಾತಿಗೂ ಷರತ್ತುಗಳು ವಿಧಿಸಲಾಗುತ್ತದೆ. ಮಹಿಳೆಯರಿಗೆ ಭದ್ರತೆಯೂ ಇಲ್ಲ. ದುರ್ಬಲ ವರ್ಗಗಳಾದ ಎಸ್‌ಸಿ/ಎಸ್‌ಟಿ/ಒಬಿಸಿ/ಅಲ್ಪಸಂಖ್ಯಾತರು ಭೀಕರ ದೌರ್ಜನ್ಯಗಳಿಗೆ ಒಳಗಾಗುತ್ತಿದ್ದಾರೆ” ಎಂದು ಕಾಂಗ್ರೆಸ್ ನಾಯಕ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

“ಆರ್ಥಿಕತೆ ವಿಚಾರಕ್ಕೆ ಬಂದಾಗ ಈ ಹನ್ನೊಂದು ವರ್ಷಗಳಲ್ಲಿ ಹಣದುಬ್ಬರ ಉತ್ತುಂಗಕ್ಕೆ ಏರಿದೆ. ನಿರುದ್ಯೋಗ ಏರಿಕೆಯಾಗಿದೆ. ಅನುಬೋಗ ಸ್ಥಗಿತವಾಗಿದೆ. ಮೇಕ್ ಇನ್ ಇಂಡಿಯಾ ವಿಫಲವಾಗಿದೆ. ಅಸಮಾನತೆ ಉತ್ತುಂಗಕ್ಕೇರಿದೆ” ಎಂದು ದೂರಿದ್ದಾರೆ.

ಇದನ್ನು ಓದಿದ್ದೀರಾ? ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಜಾರಿಯಲ್ಲಿದೆ: ಮಾಜಿ ಸಚಿವ ಬಿ.ಸಿ ನಾಗೇಶ್‌

“ವಿಶ್ವಗುರು ಆಗುವ ಭರವಸೆಯನ್ನು ಕೇಂದ್ರದ ಮೋದಿ ಸರ್ಕಾರ ನೀಡಿದೆ. ಆದರೆ ಎಲ್ಲಾ ದೇಶಗಳೊಂದಿಗಿನ ಸಂಬಂಧವನ್ನು ಹಾಳು ಮಾಡಿಕೊಂಡಿದೆ. ಪ್ರಜಾಪ್ರಭುತ್ವದ ಪ್ರತಿಯೊಂದು ಸ್ತಂಭದ ಮೇಲೆ ಆರ್‌ಎಸ್‌ಎಸ್‌ ದಾಳಿ ನಡೆಸುತ್ತಿದೆ. ಇಡಿ/ಸಿಬಿಐ ದುರುಪಯೋಗ ಪಡಿಸಿಕೊಳ್ಳುತ್ತಿದೆ. ಸಂಸ್ಥೆಗಳ ಸ್ವಾಯತ್ತತೆ ನಾಶವಾಗಿದೆ” ಎಂದು ಆರೋಪಿಸಿದ್ದಾರೆ.

“140 ಕೋಟಿ ಜನಸಂಖ್ಯೆಯ ಪ್ರತಿಯೊಂದು ವರ್ಗವೂ ತೊಂದರೆಗೀಡಾಗಿದೆ. 11 ವರ್ಷಗಳಲ್ಲಿ ಕಮಲದ ಚಿಹ್ನೆ ಈ ರೀತಿಯಾಗಿದೆ” ಎಂದು ಹನ್ನೊಂದು ವರ್ಷಗಳ ಅವಧಿಯನ್ನು ಕಾಂಗ್ರೆಸ್ ವಿವರಿಸಿದೆ.

ಇನ್ನು ಈ ಬಗ್ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರೂ ಪೋಸ್ಟ್ ಮಾಡಿದ್ದಾರೆ. “ಇಂದು 2025ರ ಮೇ 26.ಅಘೋಷಿತ ತುರ್ತು ಪರಿಸ್ಥಿತಿ ಆರಂಭವಾಗಿ 11 ವರ್ಷ” ಎಂದು ಹೇಳಿದ್ದಾರೆ.

2014ರ ಮೇ 26ರಂದು ನರೇಂದ್ರ ಮೋದಿ ಅವರು ಮೊದಲ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಅದಾದ ಬಳಿಕ ಕಳೆದ ವರ್ಷ ಜೂನ್ 9ರಂದು ಮೂರನೇ ಬಾರಿಗೆ ಪ್ರಧಾನಿಯಾಗಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X