ಚಿಕ್ಕನಾಯಕನಹಳ್ಳಿ | ವಿದ್ಯುತ್‌ ಅವಘಡದಲ್ಲಿ ಹದಿಮೂರರ ಬಾಲಕ ಬಲಿ

Date:

Advertisements

ಚಿಕ್ಕನಾಯಕನಹಳ್ಳಿ  ಪಟ್ಟಣದ ಅರಣ್ಯ ಇಲಾಖೆ ಎದುರಿನ ಆರ್ ವಿ ಎಲೆಕ್ಟ್ರಿಕ್ ಅಂಡ್ ಎಲೆಕ್ಟ್ರಾನಿಕ್ಸ್ ಅಂಗಡಿ ಮಳಿಗೆಯಿರುವ ಕಟ್ಟಡದಲ್ಲಿ ವಿದ್ಯುತ್ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 13 ವರ್ಷದ ಬಾಲಕ ಅಚ್ಚುತಕುಮಾರ್ ಅಸುನೀಗಿದ್ದಾನೆ. 

ಬೆಸ್ಕಾಂ ಹಿರಿಯ ಅಧಿಕಾರಿಗಳು‌ ಮಳೆ-ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ‌ ಮೇಲಿನಿಂದ ಸೂಚನೆಗಳು ಕೊಡುತ್ತಿದ್ದರೂ ಸಹಾ, ಕೆಳಹಂತದ ಅಧಿಕಾರಿಗಳು ಅದನ್ನು ಸರಿಯಾಗಿ ಪಾಲಿಸದೇ ನಿರ್ಲಕ್ಷ್ಯ ತೋರುತ್ತಾ ಹೊಣೆಗೇಡಿತನ ಪ್ರದರ್ಶಿಸುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ. ಈ ಆರೋಪಗಳಿಗೆ ತಾಜಾ ಉದಾಹರಣೆ ಎಂಬಂತೆ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಈ ಒಂದು ತಿಂಗಳ ಕಾಲಾವಧಿಯ ಒಳಗೇ ಸಂಭವಿಸಿರುವ ವಿದ್ಯುತ್ ಅಪಘಾತದಲ್ಲಿ ಇಬ್ಬರು ಬಾಲಕರು ಸಾವನೊಪ್ಪಿದ್ದಾರೆ.

ಈ ಹಿಂದೆ ತಾಲೂಕಿನ ಸೋಮನಹಳ್ಳಿ ಗ್ರಾಮದಲ್ಲಿ ಕೆಳಗೆ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ 9 ವರ್ಷದ ಬಾಲಕ ಕುಶಾಲ್ ಸಾವನ್ನಪ್ಪಿದ್ದ ಘಟನೆ ಮಾಸುವ ಮೊದಲೇ ಇದೀಗ ತಾಲ್ಲೂಕು ಕೇಂದ್ರದಲ್ಲಿ ಮತ್ತೊಬ್ಬ ಬಾಲಕ ವಿದ್ಯುತ್ ಅಪಘಾತಕ್ಕೆ ಬಲಿಯಾಗಿರುವುದು ಖೇದಕರ. 

Advertisements
1001494601

ಅಚ್ಚುತಕುಮಾರ್‌ ಎಂದಿನಂತೆ‌ ತನ್ನ ಮನೆಯ ಬಳಿ ಆಟವಾಡಿಕೊಂಡಿದ್ದ ಸಮಯದಲ್ಲಿ ಮನೆ-ಪಕ್ಕದಲ್ಲೇ ಇದ್ದ ಕಂಬದಿಂದ ಆತನಿಗೆ ವಿದ್ಯುತ್ ಸ್ಪರ್ಶವಾಗಿದೆ. ಅದೇ ಕಂಬದಿಂದ ಮನೆಗೆ ವಿದ್ಯುತ್‌ ಸಂಪರ್ಕ ಕಲ್ಪಿಸಿಕೊಳ್ಳಲಾಗಿತ್ತು. ಮಳೆಯಿಂದಾಗಿ ವಿದ್ಯುತ್‌ ವೈಯರ್‌ ಮನೆಗೆ ಹೊಂದಿಕೊಂಡೇ ಇದ್ದ ಅಂಗಡಿ ಮಳಿಗೆಯ ಶೀಟ್-ಛಾವಣಿಯ ಮೇಲೆ ಬಿದ್ದಿದೆ. ದಿನವಿಡೀ ಬಿಟ್ಟೂಬಿಡದೆ ಬೀಸುತ್ತಿದ್ದ ರಭಸದ ಗಾಳಿಯಿಂದಾಗಿ ಅಂಗಡಿಯ ಪಿಲ್ಲರ್ರಿಗೆ ವೈಯರ್‌ ಸ್ಪರ್ಶಿಸಿದೆ. ಆಟವಾಡುತ್ತಿದ್ದ ಬಾಲಕನಿಗೆ ಅದು ತಿಳಿದಿಲ್ಲದೆ ಅದೇ ಸಮಯದಲ್ಲಿ ಆತ ಅಂಗಡಿಯ ಪಿಲ್ಲರ್ರನ್ನು ಸ್ಪರ್ಶಿಸಿಬಿಟ್ಟಿದ್ದಾನೆ. ಕ್ಷಣದಲ್ಲೇ ಬಾಲಕನಲ್ಲಿ ವಿದ್ಯುತ್‌ ಪ್ರವಹಿಸಿ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಶೀಘ್ರದಲ್ಲೇ ಬಾಲಕನನ್ನು ಆಸ್ಪತ್ರೆಗೆ ಒಯ್ಯಲಾಗಿದೆಯಾದರೂ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಬಾಲಕನ ಸಾವನ್ನು ದೃಢಪಡಿಸಲಾಗಿದೆ. 

ಬೆಳೆಯುತ್ತಿದ್ದ ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಜಿಲ್ಲೆಯಾದ್ಯಂತ ಕಳೆದೆರಡು ವಾರದಿಂದ ಬಿಟ್ಟೂಬಿಡದೆ ಮಳೆಯಾಗುತ್ತಿದ್ದು, ಸೋನೆ ಮಳೆಯಂತೂ ದಿನವಿಡೀ ಸುರಿಯುತ್ತಲೇ ಇದೆ. ಹಿರಿಯ ಅಧಿಕಾರಿಗಳು ತುರ್ತಾಗಿ ಇದರತ್ತ ಗಮನಹರಿಸಬೇಕಿದೆ. ಮಳೆ ಹೆಚ್ಚಾಗಿರುವ ಕಾಲದಲ್ಲಿ ಮನೆಗಳಿಗೆ ಸಂಪರ್ಕ ಕಲ್ಲಿಸಿ ಹಾಕಲಾಗಿರುವ ಹಳೆಯ ತಂತಿ ಮತ್ತು ವೈಯರ್‌ಗಳನ್ನು ಬದಲಾಯಿಸಿಕೊಳ್ಳುವಂತೆ ಸಾರ್ವಜನಿಕರಲ್ಲಿ ಜವಾಬ್ದಾರಿ ಮೂಡಿಸಬೇಕು ಎಂದು ಪ್ರಜ್ಞಾವಂತ-ನಾಗರಿಕರು ಒತ್ತಾಯಿಸುತ್ತಿದ್ದಾರೆ.

ವರದಿಸಂಚಲನ, ಚಿಕ್ಕನಾಯಕನ ಸೀಮೆಯಿಂದ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಚಿವ ಕೆ ಎನ್ ರಾಜಣ್ಣ ರಾಜೀನಾಮೆ ನೀಡಿಲ್ಲ, ಬದಲಿಗೆ ಸಂಪುಟದಿಂದ ಉಚ್ಚಾಟನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರಿಗೆ...

ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಎಂಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ...

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

ಬೆಳಗಾವಿ : ಮೂರು ವರ್ಷದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ತಂದೆ ತಾಯಿ

ತಾಯಿಯ ಮಡಿಲಿಗೆ ತವಕಿಸುತ್ತಿರುವ ಮೂರು ವರ್ಷದ ಹೆಣ್ಣುಮಗುವನ್ನು ಆಸ್ಪತ್ರೆಯಲ್ಲಿ ತಂದೆ ತಾಯಿಗಳು...

Download Eedina App Android / iOS

X