ಪ್ರಜ್ವಲ್ ರೇವಣ್ಣ ಮೊಬೈಲ್‌ನಲ್ಲಿ ಎರಡು ಸಾವಿರ ಅಶ್ಲೀಲ ಚಿತ್ರ, 40ಕ್ಕೂ ಅಧಿಕ ವಿಡಿಯೋಗಳಿತ್ತು: ಸಾಕ್ಷಿ ನುಡಿದ ಕಾರು ಚಾಲಕ

Date:

Advertisements

ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಮೊಬೈಲ್‌ನಲ್ಲಿ ಎರಡು ಸಾವಿರ ಅಶ್ಲೀಲ ಚಿತ್ರಗಳು ಮತ್ತು 40ಕ್ಕೂ ಅಧಿಕ ವಿಡಿಯೋಗಳಿತ್ತು ಎಂದು ಈ ಹಿಂದೆ ಪ್ರಜ್ವಲ್ ಕಾರು ಚಾಲಕನಾಗಿದ್ದ ಕಾರ್ತಿಕ್ ಸಾಕ್ಷಿ ನುಡಿದಿದ್ದಾರೆ.

ಪ್ರಜ್ವಲ್ ಅನ್ನು ಕಳೆದ ವರ್ಷ ಮೇ 31ರಂದು ಬಂಧಿಸಲಾಗಿದ್ದು ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಮೇ 26ರಂದು ನಡೆದ ವಿಚಾರಣೆ ವೇಳೆ ಪ್ರಜ್ವಲ್ ಕಾರು ಚಾಲಕನಾಗಿದ್ದ ಕಾರ್ತಿಕ್ ಸಾಕ್ಷಿ ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಪ್ರಜ್ವಲ್ ಪ್ರಕರಣ | ಅತ್ಯಾಚಾರದ ದೂರು ಕೊಟ್ಟರೂ ಆರೋಪಿಗಳ ರಕ್ಷಣೆಗೆ ಹಾಸನ ಪೊಲೀಸರ ಯತ್ನ ಆರೋಪ: ಡಿಜಿಪಿಗೆ ದೂರು

Advertisements

2018ರಿಂದ ಕಾರ್ತಿಕ್ ಪ್ರಜ್ವಲ್ ರೇವಣ್ಣ ಅವರ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದು ಕಾರಿನಲ್ಲಿ ಪ್ರಜ್ವಲ್ ಮೊಬೈಲ್ ಬಿಟ್ಟು ಹೋಗಿದ್ದಾಗ ಅದನ್ನು ಪರಿಶೀಲಿಸಿರುವುದಾಗಿ ಕಾರ್ತಿಕ್ ತಿಳಿಸಿದ್ದಾರೆ. ಕಾರಿನಲ್ಲಿ ತನಗೆ ತಿಳಿಯದಂತೆ ಪ್ರಜ್ವಲ್ ಅಶ್ಲೀಲ ದೃಶ್ಯಗಳನ್ನು ನೋಡುತ್ತಿದ್ದರು. ಜಯನಗರದ ಗೆಳತಿ ಮನೆಗೆ ಹೋದಾಗ ಮೊಬೈಲ್ ಕಾರಿನಲ್ಲಿ ಬಿಟ್ಟು ಹೋಗಿದ್ದರು. ಈ ವೇಳೆ ಮೊಬೈಲ್‌ನಲ್ಲಿದ್ದ ಅಶ್ಲೀಲ ಚಿತ್ರ, ವಿಡಿಯೋಗಳನ್ನು ನೋಡಿ ತನ್ನ ಮೊಬೈಲ್‌ಗೆ ವರ್ಗಾಯಿಸಿದ್ದೆ. ಬಳಿಕ ಮಗನಿಗೆ ಬುದ್ಧಿ ಹೇಳಲಿ ಎಂಬ ಉದ್ದೇಶದಿಂದ ಪ್ರಜ್ವಲ್ ತಾಯಿ ಭವಾನಿಗೆ ಈ ಚಿತ್ರ, ವಿಡಿಯೋಗಳನ್ನು ತೋರಿಸಿದ್ದೆ ಎಂದು ಕಾರ್ತಿಕ್ ತಿಳಿಸಿದ್ದಾರೆ ಎನ್ನಲಾಗಿದೆ.

“ಈ ಬಗ್ಗೆ ಭವಾನಿ ಅವರು ಮಗನ ಜೊತೆ ಮಾತನಾಡಿದಾಗ ವಿಡಿಯೋ ಬಗ್ಗೆ ತಿಳಿಸಿದ್ದು ನಾನು ಎಂದು ಹೇಳಿದ್ದರು. ಹಾಗಾಗಿ ಪ್ರಜ್ವಲ್​​ ನನಗೆ ಫೋನ್ ಮಾಡಿ ಬೈದಿದ್ದರು. ಅಂದಿನಿಂದ ನಾನು ಕೆಲಸ ಬಿಟ್ಟೆ. ಬಳಿಕ ಪ್ರಜ್ವಲ್​ ಕುಟುಂಬ ವಿಡಿಯೋ ಬಹಿರಂಗವಾಗದಂತೆ ಕೋರ್ಟ್‌ನಿಂದ ತಡೆಯಾಜ್ಞೆ ತಂದರು” ಎಂದು ಕಾರ್ತಿಕ್ ಸಾಕ್ಷಿ ಹೇಳಿದ್ದಾರೆ.

ನೂರಾರು ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿದ ಆರೋಪ ಪ್ರಜ್ವಲ್ ರೇವಣ್ಣ ಮೇಲಿದೆ. ಈ ವಿಡಿಯೋಗಳು ವೈರಲ್ ಆದಾಗ ಕರ್ನಾಟಕ ಮಾತ್ರವಲ್ಲ ದೇಶದಲ್ಲೇ ಭಾರೀ ಸಂಚಲನ ಉಂಟಾಗಿತ್ತು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X