ಬಳ್ಳಾರಿ | ಪಾಲಿಕೆ ಅವ್ಯವಸ್ಥೆ ವಿರುದ್ಧ ನಾಗರಿಕ ಸಮಿತಿ ಪ್ರತಿಭಟನೆ

Date:

Advertisements

ನಗರದ ಜನತೆ ಈಗಾಗಲೇ ಮೂಲಸೌಕರ್ಯಗಳ ಕೊರತೆಯಿಂದ ರೋಸಿ ಹೋಗಿದ್ದಾರೆ, ಅಲಂಕಾರಿಕ ಮತ್ತು ವೃತ್ತ ನಿರ್ಮಾಣದಂತ ಅನವಶ್ಯಕ ಖರ್ಚುಗಳ ಕಾಮಗಾರಿಗಳನ್ನು ನಿಲ್ಲಿಸಿ ಸಾರ್ವಜನಿಕರ ಹಣ ಪೋಲು ಮಾಡುವುದನ್ನು ತಡೆಯಬೇಕು ಎಂದು ಬಳ್ಳಾರಿ ನಾಗರಿಕ ಹೋರಾಟ ಸಮಿತಿ ಅಧ್ಯಕ್ಷ ಸೋಮಶೇಖರ್ ನಗರಪಾಲಿಕೆ ಹಾಗೂ ಜಿಲ್ಲಾಧಿಕಾರಿಗಳನ್ನು ಆಗ್ರಹಿಸಿದರು.

ಬಳ್ಳಾರಿ ನಾಗರಿಕ ಹೋರಾಟ ಸಮಿತಿಯಿಂದ ಮಹಾನಗರಪಾಲಿಕೆಯ ನಿರ್ಲಕ್ಷ್ಯವನ್ನು ಖಂಡಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಪಾಲಿಕೆಯ ಅವ್ಯವಸ್ಥೆಯ ಪಟ್ಟಿಯ ಪ್ರತಿಕೃತಿಯನ್ನು ದಹಿಸಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

“ನಗರದಲ್ಲಿ, ವಿದ್ಯುತ್, ಚರಂಡಿ, ಕುಡಿಯುವ ನೀರು, ರಸ್ತೆ ಸೇರಿದಂತೆ ಎಲ್ಲಾ ಮೂಲಸೌಕರ್ಯಗಳು ಹದಗೆಟ್ಟು ಹೋಗಿವೆ. ನಗರದ ಅತ್ಯಂತ ಮುಖ್ಯ ಪ್ರದೇಶಗಳಲ್ಲಿ ರಸ್ತೆಗಳನ್ನು ಅಗೆದು ವೃತ್ತಗಳನ್ನು ನಿರ್ಮಿಸುವುದು ಅಲಂಕಾರ ಮಾಡುವುದು ಸೇರಿದಂತೆ ಇತರೆ ಕಾಮಗಾರಿಗಳನ್ನು ಹಮ್ಮಿಕೊಂಡಿದ್ದು, ಇಂಥ ಸೌಂದರೀಕರಣ ಕೆಲಸವನ್ನು ಬಿಟ್ಟು ನಾಗರಿಕರಿಗೆ ಉತ್ತಮವಾದ ಮೂಲಭೂತ ಸೌಕರ್ಯಗಳನ್ನು ಅಚ್ಚುಕಟ್ಟಾಗಿ ಒದಗಿಸಬೇಕು” ಎಂದು ಒತ್ತಾಯಿಸಿದರು.

Advertisements
WhatsApp Image 2025 05 27 at 11.13.45 AM 1

ಡಾ. ಪ್ರಮೋದ್ ಎನ್ ಮಾತನಾಡಿ, “ನಗರದಲ್ಲಿ ಭಾರೀ ವಾಹನಗಳ ಸಂಚಾರದಿಂದ ಸುರಕ್ಷತೆ ಇಲ್ಲದಂತಾಗಿದೆ. ಇದನ್ನು ತಡೆಯಲು ನಗರಕ್ಕೆ ಅವಶ್ಯಕವಾದ ವರ್ತುಲ ರಸ್ತೆಯನ್ನು ತುರ್ತಾಗಿ ನಿರ್ಮಿಸಬೇಕು. ನಗರದಲ್ಲಿ ಬೀದಿನಾಯಿಗಳ ಹಾವಳಿಯನ್ನು ತಡೆಯಲು ತುರ್ತುಕ್ರಮ ಕೈಗೊಳ್ಳಬೇಕು” ಎಂದರು.

ಇದನ್ನೂ ಓದಿ: ಬಳ್ಳಾರಿ | ಚೀಲದಲ್ಲೇ ಮೊಳಕೆಯೊಡೆದ ಜೋಳ; ಅಧಿಕಾರಿಗಳ ನಿರ್ಲಕ್ಷ್ಯ ಆರೋಪ

ಪಾಲಿಕೆಯ ಆಯುಕ್ತ ಜಿ. ಖಲೀಲ್ ಸಾಬ್ ಮನವಿ ಪತ್ರ ಸ್ವೀಕರಿಸಿ ಮಾತನಾಡಿ, “ರಸ್ತೆಗಳ ಗುಂಡಿಗಳನ್ನು ಮುಚ್ಚಲು ಹಾಗೂ ಬೀದಿನಾಯಿಗಳ ಹಾವಳಿಯನ್ನು ತಪ್ಪಿಸಲು ಕ್ರಮಕೈಗೊಳ್ಳುವುದಾಗಿ ಹಾಗೂ ಇತರೆ ಬೇಡಿಕೆಗಳಿಗೆ ಸಂಬಂಧಿಸಿದಂತೆ 10 ದಿನಗಳ ಒಳಗಾಗಿ ಪಾಲಿಕೆ ಅಧಿಕಾರಿಗಳು ಹಾಗೂ ಬಳ್ಳಾರಿ ನಾಗರಿಕ ಹೋರಾಟ ಸಮಿತಿಯ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಜನತೆಯ ಕುಂದುಕೊರತೆ ಸಭೆ ಕರೆಯುತ್ತೇವೆ” ಎಂದು ತಿಳಿಸಿದರು.

ಪ್ರತಿಭಟನೆಯಲ್ಲಿ ಶಾಂತಾ, ನಾಗರತ್ನ, ಶರ್ಮಾಸ್, ಸುರೇಶ್ ಜಿ, ವಿದ್ಯಾ, ಶಾಂತಿ, ಜಾಫರ್, ಬಾಬು, ಚಂದ್ರಶೇಖರ್, ಅಬ್ಬಾಸ್, ರಮೇಶ್, ಉಮಾಮಹೇಶ್, ಶಚೀರ್, ಆಂಥೋನಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X