ಪ್ರಧಾನಿ ಮೋದಿ ಪ್ರಭಾವ ಮಂಕಾಗಿದೆ ಅನ್ನೋದಕ್ಕೆ ಬಿಜೆಪಿ ಹೀನಾಯವಾಗಿ ಸೋತಿರೋದೆ ಸಾಕ್ಷಿ : ಸಿಎಂ ಸಿದ್ದರಾಮಯ್ಯ

Date:

Advertisements
  • ಹಿಟ್ಲರ್‍‌ಗೆ ಬೈದರೆ ನಿಮಗೇಕೆ ಸಿಟ್ಟು: ಬಿಜೆಪಿ ಸದಸ್ಯರನ್ನು ಪ್ರಶ್ನಿಸಿದ ಸಿಎಂ
  • ಜನರ ಜೇಬಿನಲ್ಲಿದ್ದ ಹಣ ಕಿತ್ತುಕೊಂಡಿದ್ದೇ ಬಿಜೆಪಿ ಸೋಲಿಗೆ ಕಾರಣ: ಸಿಎಂ

ದೇಶದಲ್ಲಿ ಬಿಜೆಪಿಯ ಅವನತಿ ಕರ್ನಾಟಕದಿಂದ ಶುರುವಾಗಿದೆ. ಪ್ರಧಾನಿ ಮೋದಿ ಪ್ರಭಾವ ಮಂಕಾಗಿದೆ ಅನ್ನೋದಕ್ಕೆ ರಾಜ್ಯದಲ್ಲಿ ಅವರು ಪ್ರಚಾರ ಮಾಡಿದ ಎಲ್ಲ ಕಡೆ ಬಿಜೆಪಿ ಹೀನಾಯವಾಗಿ ಸೋತಿರುವುದೇ ಇದಕ್ಕೆ ಸಾಕ್ಷಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಿಧಾನ ಪರಿಷತ್ ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರಿಸುತ್ತಾ ಮಾತನಾಡಿದ ಅವರು, ಬಿಜೆಪಿ ಮತ್ತು ನರೇಂದ್ರ ಮೋದಿಯವರು ಹೇಗೆ ಜನರಿಂದ ದೂರವಾಗುತ್ತಿದೆ, ಜನ ವಿರೋಧಿ ಆಗುತ್ತಿದೆ ಎನ್ನುವುದನ್ನು ಬಿಡಿ ಬಿಡಿಯಾಗಿ ಬಿಚ್ಚಿಟ್ಟರು.

ವಿಧಾನಸಭಾ ಚುನಾವಣೆಯ ವೇಳೆ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿಯವರು 28 ಬಾರಿ ಬಂದರು. ಹಿಂದಿನ ಯಾವ ಪ್ರಧಾನಿಗಳೂ ರಾಜ್ಯಗಳ ಚುನಾವಣೆ ವೇಳೆ ಹೀಗೆ ವರ್ತಿಸಿರಲಿಲ್ಲ. ಉಳಿದ ಪ್ರಧಾನಿಗಳಿಗೆ ದೇಶವನ್ನು ಮುನ್ನಡೆಸುವುದು ಪ್ರಥಮ ಆದ್ಯತೆ ಆಗಿರುತ್ತಿತ್ತು. ಬರೀ ಚುನಾವಣೆಗಳನ್ನು ಮಾಡುತ್ತಾ ಓಡಾಡುತ್ತಿರಲಿಲ್ಲ ಎಂದು ಹೇಳಿದರು.

Advertisements

ವಿಧಾನಸಭೆ ಚುನಾವಣೆಯಲ್ಲಿ ಮೋದಿ ಅವರು ರೋಡ್ ಶೋ ನಡೆಸಿದ, ಪ್ರಚಾರ ನಡೆಸಿದ ಕ್ಷೇತ್ರಗಳಲ್ಲಿ ಮತ್ತು ಸುತ್ತಮುತ್ತಲ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಸ್ಪಷ್ಟವಾದ ಬಹುಮತದಿಂದ ಗೆದ್ದಿದೆ. ಹೀಗಾಗಿ ಮೋದಿ ಅವರ ಪ್ರಭಾವ ಮಂಕಾಗುತ್ತಿರುವುದನ್ನು ನೀವು ಒಪ್ಪಿಕೊಳ್ಳಿ. ಇನ್ಮೇಲೆ ಮೋದಿ ಅವರ ಮೇಲೆ ಅವಲಂಬಿತರಾಗಬೇಡಿ ಎಂದು ಪರಿಷತ್‌ನ ಬಿಜೆಪಿ ಸದಸ್ಯರಿಗೆ ತಿಳಿಸಿದರು.

ಜನರ ಜೇಬಿನಲ್ಲಿರುವುದನ್ನು ಕಿತ್ತುಕೊಂಡಿರಿ
ಕಾಂಗ್ರೆಸ್ ಗೆಲುವಿಗೆ ಕಾರಣವಾದ ಸಂಗತಿಗಳನ್ನು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ ಮುಖ್ಯಮಂತ್ರಿಗಳು, “ಕಾಂಗ್ರೆಸ್ ಜನರ ಜೇಬಿನಲ್ಲಿ ಹಣ ಇರಬೇಕು ಎನ್ನುವ ಉದ್ದೇಶದಿಂದ ಐದು ಗ್ಯಾರಂಟಿಗಳನ್ಮು ಘೋಷಿಸಿ, ಜಾರಿ ಮಾಡಿತು. ಬಡವರು-ಮಧ್ಯಮ ವರ್ಗದವರ ಜೇಬಿನಲ್ಲಿ ಹಣ ಇದ್ದರೆ ನಾಡಿನ ಆರ್ಥಿಕತೆ ಬೆಳೆಯುತ್ತದೆ ಎನ್ನುವುದು ಕಾಂಗ್ರೆಸ್‌ನ ಬದ್ಧತೆ ಮತ್ತು ಸಿದ್ಧಾಂತ. ಆದರೆ ಬಿಜೆಪಿ ಜನರ ಜೇಬಿನಲ್ಲಿರುವ ಹಣ ಕಿತ್ತುಕೊಳ್ಳುವ ಮನಸ್ಥಿತಿ ಹೊಂದಿರುವ ಕಾರಣದಿಂದ ಹೀನಾಯವಾಗಿ ಸೋಲು ಕಾಣಬೇಕಾಯಿತು ಎಂದರು.

ಕನ್ನಡ ಮಣ್ಣಿನ ಸೌಹಾರ್ದ ಪರಂಪರೆಯ 2000 ವರ್ಷಗಳ ಮೌಲ್ಯವನ್ಮು ವಿವರಿಸಿದ ಮುಖ್ಯಮಂತ್ರಿಗಳು, ಪಂಪ “ಮನುಷ್ಯ ಜಾತಿ ತಾನೊಂದೇ ವಲಂ” ಎನ್ನುವ ಮೌಲ್ಯದಿಂದ ಕನ್ನಡ ಸಂಸ್ಕೃತಿಯನ್ನು ಅರಳಿಸಿದರು. ಹೀಗೆ ಪಂಪನಿಂದ ಹಿಡಿದು ಬಸವಣ್ಣನವರನ್ನು ಪ್ರಸ್ತಾಪಿಸಿ ಇವರೆಲ್ಲರ ಆಶಯಗಳೇ ನಮ್ಮ ಸಂವಿಧಾನದಲ್ಲಿದೆ. ಆದರೆ ತಾನು ಮಾತ್ರ ಶ್ರೇಷ್ಠ ಎನ್ನುವ ಹಿಟ್ಲರ್ ಒಬ್ಬ ಮತಾಂಧ. ಆತ ಮನುಷ್ಯ ವಿರೋಧಿ ಎಂದರು.

ಹಿಟ್ಲರ್ ಗೆ ಬೈದರೆ ನಿಮಗೇಕೆ ಸಿಟ್ಟು?
ಹಿಟ್ಲರ್ ತನ್ನ ತಿಕ್ಕಲುತನದಿಂದ ಹೇಗೆ ಮನುಷ್ಯರ ಮಾರಣಹೋಮಕ್ಕೆ ಕಾರಣನಾದ ಎಂದು ವಿವರಿಸುತ್ತಿದ್ದಾಗ ಬಿಜೆಪಿ ಸದಸ್ಯರು ಮುಖ್ಯಮಂತ್ರಿಗಳ ಮಾತಿಗೆ ಅಡ್ಡಿಪಡಿಸಿದರು. ಈ ವೇಳೆ ಮುಖ್ಯಮಂತ್ರಿಗಳು, ‘ಹಿಟ್ಲರ್ ಗೆ ಬೈದರೆ ನಿಮಗೇಕೆ ಸಿಟ್ಟು?” ಎಂದು ಅಡ್ಡಿಪಡಿಸಿದ್ದನ್ನು ಪ್ರಶ್ನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

ಬಿಹಾರದಲ್ಲಿ ಒಂದು ಮತವನ್ನೂ ಕದಿಯಲು ನಾವು ಬಿಡಲ್ಲ: ರಾಹುಲ್ ಗಾಂಧಿ

ಮತಗಳನ್ನು ಕದಿಯಲು ಚುನಾವಣಾ ಆಯೋಗ ಮತ್ತು ಬಿಜೆಪಿ ಪಾಲುದಾರಿಕೆ ಹೊಂದಿದೆ ಎಂದು...

Download Eedina App Android / iOS

X