ಪ್ರಿಯಾಂಕ್ ಖರ್ಗೆ, ಡಿಸಿಗೆ ಅವಮಾನ; FIR ದಾಖಲಾದ ಬೆನ್ನಲ್ಲೇ ಕ್ಷಮೆ ಕೇಳಿದ ಬಿಜೆಪಿ ಶಾಸಕ

Date:

Advertisements

ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಹಾಗೂ ದಲಿತ ಸಮುದಾಯಕ್ಕೆ ಅಪಮಾನ ಮಾಡಿದ ಆರೋಪದ ಮೇಲೆ ಬಿಜೆಪಿ ಶಾಸಕ ಎನ್ ರವಿಕುಮಾರ್‌ ವಿರುದ್ಧ ಪ್ರಕರಣ ದಾಖಲಾಗಿದೆ. ಎಫ್‌ಐಆರ್ ದಾಖಲಾದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ರವಿಕುಮಾರ್, ತಮ್ಮ ಹೇಳಿಕೆಗೆ ವಿಷಾಧ ವ್ಯಕ್ತಪಡಿಸುತ್ತೇನೆ. ಹೇಳಿಕೆ ಹಿಂಪಡೆಯುತ್ತೇನೆ ಎಂದಿದ್ದಾರೆ.

“ನನ್ನ ಅಜಾಗರೂಕ ಹೇಳಿಕೆಗೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ. ಜಿಲ್ಲಾಧಿಕಾರಿ ಅತ್ಯಂತ ಗೌರವಪಾತ್ರರು. ಆ ಹೇಳಿಕೆಯನ್ನು ಉದ್ದೇಶಪೂರ್ವಕವಾಗಿ ಹೇಳಿಲ್ಲ. ಬಾಯಿ ತಪ್ಪಿನಿಂದ ಬಂದ ಹೇಳಿಕೆಯಷ್ಟೇ. ನನ್ನ ಹೇಳಿಕೆಯನ್ನು ಕೂಡಲೇ ಹಿಂಪಡೆಯುತ್ತಿದ್ದೇನೆ” ಎಂದಿದ್ದಾರೆ.

ಇತ್ತೀಚೆಗೆ ಕಲಬುರಗಿಯಲ್ಲಿ ಬಿಜೆಪಿ ಪ್ರತಿಭಟನೆ ಆಯೋಜಿಸಿತ್ತು. ಆ ಪ್ರತಿಭಟನೆಯಲ್ಲಿ ವಿಧಾನ ಪರಿಷತ್‌ನ ವಿರೋಧ ಪಕ್ಷದ (ಬಿಜೆಪಿ) ಮುಖ್ಯ ಸಚೇತಕರಾಗಿರುವ ಎನ್‌ ರವಿಕುಮಾರ್ ಭಾವಹಿಸಿ ಮಾತನಾಡಿದ್ದರು. ತಮ್ಮ ಭಾಷಣದಲ್ಲಿ, “”ಕಲಬುರಗಿ ಕರ್ನಾಟಕದಲ್ಲಿದೆಯೇ ಅಥವಾ ಪಾಕಿಸ್ತಾನದಲ್ಲಿದೆಯೇ. ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರು ಪಾಕಿಸ್ತಾನದವರೋ ಅಥವಾ ಭಾರತದವರೋ ಖಚಿತವಾಗಿ ಗೊತ್ತಿಲ್ಲ” ಎಂದಿದ್ದರು.

Advertisements

ಅಲ್ಲದೆ, “ಶಹಾಬಾದ್ ಡಿವೈಎಸ್ ಪಿ ಶಂಕರಗೌಡ ಪಾಟೀಲ, ಸಿಪಿಐ ಚಂದ್ರಶೇಖರ ತಿಗಡಿ ಮತ್ತು ನಟರಾಜ ಲಾಡೆ ತಮ್ಮ ಕರ್ತವ್ಯ ನಿರ್ವಹಣೆಲ್ಲಿ ಅಸಮರ್ಥರಾಗಿದ್ದಾರೆ. ಅವರು ಸರ್ಕಾರದ ಗುಲಾಮರಾಗಿದ್ದಾರೆ” ಎಂದು ಆರೋಪಿಸಿದ್ದರು. ಮಾತ್ರವಲ್ಲ, ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧವೂ ಜಾತಿ ನಿಂದನೆ ಮಾಡಿದ್ದರು.

ಈ ಲೇಖನ ಓದಿದ್ದೀರಾ?: ಅರಣ್ಯಗಳು ಅಕ್ಷಯ ಪಾತ್ರೆಗಳಲ್ಲ: ಎಲ್ಲರೂ ಅರಿಯಬೇಕಾದ ಸತ್ಯ

ಅವರ ಭಾಷಣ ವರದಿಯಾದ ಬಳಿಕ, ಕಾಂಗ್ರೆಸ್‌ ಕಾರ್ಯಕರ್ತ ದತ್ತಾತ್ರೇಯ ಇಕ್ಕಳಕಿ ಅವರು ಕಲಬುರಗಿಯ ಸ್ಟೇಷನ್ ಬಜಾರ್ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. “ರವಿಕುಮಾರ್ ಅವರು ಮುಸ್ಲಿಮರ ವಿರುದ್ಧ ಕೋಮುದ್ವೇಷ ಪ್ರಚೋದನೆ ಮಾಡಿದ್ದಾರೆ. ಪೊಲೀಸರು ಮತ್ತು ಅಧಿಕಾರಿಗಳನ್ನು ಗುಲಾಮರೆಂದು ಅವಮಾನಿಸಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಜಾತಿ ನಿಂದನೆ ಮಾಡಿದ್ದಾರೆ. ದಲಿತ ಸಮುದಾಯಕ್ಕೆ ಅಪಮಾನ ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದರು.

ಖರ್ಗೆ ಮತ್ತು ದಲಿತ ಸಮುದಾಯಕ್ಕೆ ಜಾತಿ ನಿಂದನೆ ಹಾಗೂ ಜಿಲ್ಲಾಧಿಕಾರಿ ವಿರುದ್ಧ ಕೋಮುದ್ವೇಷದ ಹೇಳಿಕೆ ನೀಡಿದ ಆರೋಪದ ಮೇಲೆ ರವಿಕುಮಾರ್ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X