ಚಿಕ್ಕಮಗಳೂರು | ವಿವಾಹೇತರ ಸಂಬಂಧಕ್ಕಾಗಿ ಪತಿಯ ಹತ್ಯೆ; ಪತ್ನಿ ಸೇರಿ ನಾಲ್ವರ ಬಂಧನ

Date:

Advertisements

ವಿವಾಹೇತರ ಸಂಬಂಧಕ್ಕಾಗಿ ಹತ್ತು ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಗಂಡನನ್ನು ಹತ್ಯೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಕರಗುಂದ ಬಸ್ ನಿಲ್ದಾಣದ ಬಳಿ ನಡೆದಿದೆ.

ಮೃತ ವ್ಯಕ್ತಿ ಸುದರ್ಶನ್(35), ಕಳೆದ ಶುಕ್ರವಾರ ಅನುಮಾನಾಸ್ಪದವಾಗಿ ಕರಗುಂದ ಬಸ್ ನಿಲ್ದಾಣದಲ್ಲಿ ಸಾವನ್ನಪ್ಪಿದ್ದರು. ಈ  ಕುರಿತು ಮೃತನ ಹೆಂಡತಿ ಕಮಲ ತಾನೇ ಹೋಗಿ ಪೊಲೀಸ್‌ ಠಾಣೆಗೆ ದೂರು ದಾಖಲಿಸಿದ್ದಳು. ನಂತರ ಪೊಲೀಸರಿಗೆ ಮೃತನ ಹೆಂಡತಿಯ ಮೇಲೆ ಅನುಮಾನ ಬಂದು ತನಿಖೆ ನಡೆಸಿದ ಬಳಿಕ, ಮದುವೆಯಾಗಿದ್ದರು. ಸಂಸಾರದಲ್ಲಿ ಹೊಂದಾಣಿಕೆ ಬಾರದೇ ಬೇರೊಬ್ಬ ಗಂಡಸಿನೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದು, ಅವನ ಜೊತೆ ಹೋಗಲು ತನ್ನ ಗಂಡನನ್ನು ಕೊಲ್ಲಲು ಸಂಚು ನಡೆಸಿರುವುದು ತಿಳಿದುಬಂದಿದೆ. ಸುಮಾರು ವರ್ಷಗಳಿಂದ ಪರಿಚಯವಿದ್ದ ಸ್ನೇಹಿತ ಶಿವರಾಜ್ ಸೇರಿದಂತೆ ನಾಲ್ವರು ಸೇರಿ ಮದ್ಯದಲ್ಲಿ ನಿದ್ದೆ ಮಾತ್ರೆ ಬೆರಸಿ ಕುಡಿಸಿ ಪ್ರಜ್ಞೆ ತಪ್ಪುವಂತೆ ಮಾಡಿ, ಕುತ್ತಿಗೆ ಹಿಸುಕಿ ಕೊಲೆ ಮಾಡಿರುವುದು ತನಿಖೆ ವೇಳೆ ಬಯಲಾಗಿದೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಕಾಡಾನೆ ದಾಳಿ: ಬೈಕ್ ಸವಾರ ಗಂಭೀರ 

Advertisements

ಈ ಪ್ರಕರಣದಲ್ಲಿ ಶಿವರಾಜ್ ಎಸ್, ಬಿ ಆರ್ ಹರೀಶ, ಬಿ ಎಸ್ ಚನ್ನಕೇಶವ ಹಾಗೂ ಮೃತನ ಹೆಂಡತಿ ಕಮಲ ಎಂಬ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಘಟನೆ ಕುರಿತು ಕಾರ್ಯಾಚಾರಣೆಯಲ್ಲಿ ಎನ್ ಆರ್ ಪುರ ಪೊಲೀಸ್ ಠಾಣೆಯ ಪಿಎಸ್ಐ ಬಿ.ಎಸ್ ನಿರಂಜನ್ ಗೌಡ, ಜ್ಯೋತಿ ಪಿಎಸ್‌ಐ(ತನಿಖೆ) ಮತ್ತು ಸಿಬ್ಬಂದಿಗಳಾದ ನಾಗರಾಜ್, ಬಿನು ಪಿ ಎ ಅಮಿತ್ ಚೌಗುಲೆ, ಸೋಮೇಶ ಕೆ, ಮಧು ಎಸ್ ಜಿ, ಈಶ್ವರಪ್ಪ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X