ನೇಪಾಳದಿಂದ ಭಾರತದೆಡೆ ಹಾರಿದ 15-20 ಡ್ರೋನ್‌ಗಳು: ಬಿಹಾರದಲ್ಲಿ ಹೈ ಅಲರ್ಟ್

Date:

Advertisements

ಸೋಮವಾರ ರಾತ್ರಿ ನೇಪಾಳದಿಂದ ಸುಮಾರು 15ರಿಂದ 20 ಡ್ರೋನ್‌ಗಳು ಭಾರತೀಯ ವಾಯುಪ್ರದೇಶಕ್ಕೆ ಪ್ರವೇಶಿಸಿದ್ದು ಕಂಡುಬಂದಿದೆ. ಈ ಬೆನ್ನಲ್ಲೇ ಮಂಗಳವಾರ ಭಾರತ-ನೇಪಾಳ ಗಡಿ ಜಿಲ್ಲೆಗಳಲ್ಲಿ ಬಿಹಾರ ಪೊಲೀಸರು ಹೈ ಅಲರ್ಟ್ ಘೋಷಿಸಿದ್ದಾರೆ. ಮಧುಬನಿ ಜಿಲ್ಲೆಯ ಕಮಲಾ ಗಡಿ ಹೊರಠಾಣೆ(ಬಿಒಪಿ) ಅಡಿಯಲ್ಲಿ ಡ್ರೋನ್‌ಗಳು ಸುಮಾರು 40 ನಿಮಿಷಗಳ ಕಾಲ ಹಾರಾಡಿ ಬಳಿಕ ನೇಪಾಳಕ್ಕೆ ಹಿಂತಿರುಗಿದೆ ಎಂದು ವರದಿಯಾಗಿದೆ.

ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿರುವ ಸಶಸ್ತ್ರ ಸೀಮಾ ಬಲ್(ಎಸ್‌ಎಸ್‌ಬಿ) ಉಪ ಕಮಾಂಡೆಂಟ್ ವಿವೇಕ್ ಓಜಾ, “ಸೋಮವಾರ ಸಂಜೆ 7.30ರ ಸುಮಾರಿಗೆ ಕಮಲಾ ಗಡಿ ಪೊಲೀಸ್ ಹೊರಠಾಣೆ ಅಡಿಯಲ್ಲಿ ಬರುವ ಪ್ರದೇಶಗಳಲ್ಲಿ 15–20 ಡ್ರೋನ್‌ನಂತಹ ಉಪಕರಣಗಳು ಹಾರಾಡುತ್ತಿರುವುದು ಕಂಡುಬಂದಿದೆ. ಆ ಉಪಕರಣಗಳು ಭಾರತೀಯ ವಾಯುಪ್ರದೇಶವನ್ನು ಪ್ರವೇಶಿಸಿ ಉತ್ತರ ನೇಪಾಳದ ಕಡೆಗೆ ಮರಳಿದೆ” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಅದಾನಿ ವ್ಯಾಪಾರೋದ್ಯಮ ಸಾಮ್ರಾಜ್ಯ ವಿಸ್ತರಣೆಗೆ ಮೋದಿ ಸಕ್ರಿಯ ಸಹಕಾರ; ಇಲ್ಲಿದೆ ಸಂಪೂರ್ಣ ವಿವರ

Advertisements

“ಎಸ್‌ಎಸ್‌ಬಿ ಸಿಬ್ಬಂದಿ ಈ ಡ್ರೋನ್‌ನಂತಹ ಉಪಕರಣ ನೇಪಾಳಕ್ಕೆ ಹಿಂದಿರುಗುತ್ತಿದ್ದಾಗ ಗಮನಿಸಿ ತಕ್ಷಣ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಅಧಿಕಾರಿಗಳು ದರ್ಭಾಂಗಾ ವಾಯುಪಡೆ ಮತ್ತು ದೆಹಲಿ ವಾಯುಪಡೆ ಕೇಂದ್ರಗಳ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಇದಾದ ಬಳಿಕ ಅಧಿಕಾರಿಗಳು ಅಂತಾರಾಷ್ಟ್ರೀಯ ಗಡಿಯ ಹೈ ಅಲರ್ಟ್ ಘೋಷಿಸಿದ್ದಾರೆ” ಎಂದು ಮಾಹಿತಿ ನೀಡಿದ್ದಾರೆ.

ಎಸ್‌ಎಸ್‌ಬಿ ಅಧಿಕಾರಿಗಳು ಸಂಪರ್ಕಿಸಿದಾ ನೇಪಾಳದ ಭದ್ರತಾ ಅಧಿಕಾರಿಗಳನ್ನು ಡ್ರೋನ್ ಬಳಕೆಯನ್ನು ನಿರಾಕರಿಸಿದ್ದಾರೆ. ಆದ್ದರಿಂದ ಸದ್ಯ ಈ ಬಗ್ಗೆ ತನಿಖೆ ನಡೆಯುತ್ತಿದೆ. ಗಡಿ ಪ್ರದೇಶದಲ್ಲಿ ತಪಾಸಣೆ ನಡೆಸಲಾಗುತ್ತಿದೆ ಎಂದು ಡೆಪ್ಯೂಟಿ ಕಮಾಂಡೆಂಟ್ ಓಜಾ ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X