ಗುಬ್ಬಿ | ಶವವಾಗಿ ಪತ್ತೆಯಾದ ನೇಪಾಳದ ವ್ಯಕ್ತಿ : ತನಿಖೆ ಆರಂಭಿಸಿದ ಪೊಲೀಸರು

Date:

Advertisements

ಗುಬ್ಬಿ ಪಟ್ಟಣದ ಹೊರವಲಯ ಹೇರೂರು ಬಳಿಯ ಭೂಮಿ ಪಬ್ಲಿಕ್ ಸ್ಕೂಲ್ ಹಿಂಬದಿಯ ರಸ್ತೆಯಲ್ಲಿ ಬರುವ ಗಂಗಾಧರಯ್ಯ ಎಂಬುವರಿಗೆ ಸೇರಿದ ಮಾವಿನ ತೋಟದಲ್ಲಿ ಅನುಮಾನಾಸ್ಪದ ರೀತಿ ಕೊಳೆತ ಸ್ಥಿತಿಯ ಸುಮಾರು 33 ವರ್ಷದ ವ್ಯಕ್ತಿಯ ಶವ ಪತ್ತೆಯಾಗಿ ನಂತರ ಮೃತದೇಹದ ಕೈ ಮೇಲಿದ್ದ ಅಚ್ಚೆ ಮೂಲಕ ನೇಪಾಳ ಮೂಲದ ವ್ಯಕ್ತಿ ನಿರ್ಮಲ್ ಜವಾನ್ ಸಿಂಗ್ ಎಂದು ಗುರುತಿಸಲಾಗಿದೆ.

ಬೆಳಿಗ್ಗೆ ಕೊಳೆತ ಶವದ ವಾಸನೆ ಎಲ್ಲಡೆ ಪಸರಿಸಿ ಪೊಲೀಸರಿಗೆ ಮಾಹಿತಿ ರವಾನೆಯಾಗಿದೆ. ನಂತರ ಸ್ಥಳಕ್ಕೆ ಬಂದ ಪೊಲೀಸರು ಶವ ಪತ್ತೆಗೆ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಈಗಾಗಲೇ ದಾಖಲಾಗಿದ್ದ ವ್ಯಕ್ತಿ ಕಾಣೆ ಪ್ರಕರಣಗಳ ಬಗ್ಗೆ ಮಾಹಿತಿ ಪಡೆದು ಅದರಲ್ಲಿ ಈತ ಯಾರಾದರೂ ಇರಬಹುದಾ ಎಂಬ ಬಗ್ಗೆ ಮಾಹಿತಿ ಸಂಗ್ರಹಣೆಗೆ ಮುಂದಾದರು.

ಮೃತ ವ್ಯಕ್ತಿ ನೇಪಾಳ ಮೂಲದ ನಿರ್ಮಲ್ ಜವಾನ್ ಸಿಂಗ್ ಎಂದು ಮೃತನ ಸಹೋದರ ಸಂಬಂಧಿ ಕೈಯಲ್ಲಿದ್ದ ಅಚ್ಚೆ ನೋಡಿ ಗುರುತು ಪತ್ತೆ ಮಾಡಲಾಯಿತು. ಈತ ಒಂದು ವಾರದಿಂದ ನಾಪತ್ತೆಯಾಗಿದ್ದ ವ್ಯಕ್ತಿ. ಹೋಟೆಲ್ ಗಳಲ್ಲಿ ಕೆಲಸ ಮಾಡುತ್ತಿದ್ದ. ಬೆಳಿಗ್ಗೆ ಮತ್ತು ರಾತ್ರಿ ವೇಳೆ ಎರೆಡೆರಡು ಕಡೆ ಕೆಲಸ ಮಾಡುತ್ತಿದ್ದ ನೇಪಾಳಿ ವ್ಯಕ್ತಿ ಹೇರೂರು ಗ್ರಾಮದ ಮಾವಿನ ತೋಪು ಬಳಿ ಶವವಾಗಿ ಪತ್ತೆಯಾಗಿದ್ದು, ಪೊಲೀಸರಿಗೆ ಹಲವು ಅನುಮಾನಗಳಿಗೆ ಕಾರಣವಾದ ಹಿನ್ನಲೆ ತನಿಖೆಯನ್ನು ತೀವ್ರಗೊಳಿಸಿದ್ದಾರೆ.

Advertisements

ಸ್ಥಳಕ್ಕೆ ಜಿಲ್ಲಾ ಅಪರ ಪೊಲೀಸ್ ವರಿಷ್ಠಾಧಿಕಾರಿ ಪುರುಷೋತ್ತಮ್ ಹಾಗೂ ಡಿವೈಎಸ್ಪಿ ಶೇಖರ್ ಆಗಮಿಸಿ ಪರಿಶೀಲಿಸಿದರು. ಪ್ರಕರಣ ದಾಖಲಿಸಿಕೊಂಡ ಗುಬ್ಬಿ ಪೊಲೀಸರು ಮೃತ ದೇಹವನ್ನು ಪರೀಕ್ಷೆಗೆ ಒಳಪಡಿಸಿ ಸಂಬಂಧಿಕರಿಗೆ ಹಸ್ತಾಂತರಿಸಿ ಸಾವಿನ ಹಿನ್ನೆಲೆಗೆ ತನಿಖೆಯನ್ನು ಚುರುಕುಗೊಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಚಿವ ಕೆ ಎನ್ ರಾಜಣ್ಣ ರಾಜೀನಾಮೆ ನೀಡಿಲ್ಲ, ಬದಲಿಗೆ ಸಂಪುಟದಿಂದ ಉಚ್ಚಾಟನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರಿಗೆ...

ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಎಂಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ...

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

ಬೆಳಗಾವಿ : ಮೂರು ವರ್ಷದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ತಂದೆ ತಾಯಿ

ತಾಯಿಯ ಮಡಿಲಿಗೆ ತವಕಿಸುತ್ತಿರುವ ಮೂರು ವರ್ಷದ ಹೆಣ್ಣುಮಗುವನ್ನು ಆಸ್ಪತ್ರೆಯಲ್ಲಿ ತಂದೆ ತಾಯಿಗಳು...

Download Eedina App Android / iOS

X