ಚಿತ್ರದುರ್ಗ | ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಸಹಾಯಧನ, ಕೃಷಿ ಘಟಕಗಳಿಗೆ ರೈತರ ಅರ್ಜಿ ಆಹ್ವಾನ.‌

Date:

Advertisements

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ತೋಟಗಾರಿಕೆ ಬೆಳೆ ವಿಸ್ತರಣೆ, ಕೃಷಿ ಪರಿಕರ, ಕೃಷಿ ಘಟಕಗಳಿಗೆ ಸಹಾಯಧನ ಪಡೆಯಲು ಆಸಕ್ತ ರೈತ ಫಲಾನುಭವಿಗಳಿಂದ 2025-26ನೇ ಸಾಲಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ರೈತರು 2025 ಜೂನ್ 20ರೊಳಗೆ ಅರ್ಜಿ ಸಲ್ಲಿಸಬೇಕು ಎಂದು ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

1002057458
ರೈತರಿಗೆ ಸಹಾಯಧನ, ಕೃಷಿ ಘಟಕಗಳಿಗೆ ಚಿತ್ರದುರ್ಗ ತೋಟಗಾರಿಕೆ ಇಲಾಖೆಯಿಂದ ಅರ್ಜಿ ಆಹ್ವಾನ

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ ಕಾರ್ಯಕ್ರಮದಡಿಯಲ್ಲಿ ದಾಳಿಂಬೆ, ಕಂದು ಬಾಳೆ/ಅಂಗಾಂಶ ಬಾಳೆ, ಪಪ್ಪಾಯ, ಡ್ರಾಗನ್ ಪ್ರೂಟ್ ಹಣ್ಣಿನ ಬೆಳೆಗಳು, ಹೈಬ್ರೆಡ್ ತರಕಾರಿ, ಕಟ್ ಪ್ಲವರ್ಸ್ (ಗುಲಾಬಿ, ಜೆರ್ಬೆರಾ, ಕಾರ್ನೇಷನ್) ಸುಗಂಧರಾಜ, ಇತರೆ ಹೂವುಗಳು ಮತ್ತು ಕರಿಮೆಣಸು ಸೇರಿದಂತೆ ಹಲವು ತೋಟಗಾರಿಕೆ ಬೆಳೆಗಳಿಗೆ ಸಹಾಯಧನ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ಅಣಬೆ ಉತ್ಪಾದನಾ ಘಟಕ, ಬಹುವಾರ್ಷಿಕ ಸಾಂಬಾರು ಬೆಳೆಗಳ ಪ್ರದೇಶ ವಿಸ್ತರಣೆ ಕಾರ್ಯಕ್ರಮಕ್ಕೆ ಮತ್ತು  ಪುನಶ್ಚೇತನ ಕಾರ್ಯಕ್ರಮ, ಪಾಲಿಥೀನ್ ನರ್ಸರಿ ಘಟಕ, ಪಕ್ಷಿ ನಿರೋದಕ ಬಲೆ, ವೈಯಕ್ತಿಕ ನೀರು ಸಂಗ್ರಹಣಾ ಘಟಕ, ಪಾಲಿಹೌಸ್, ಪ್ಲಾಸ್ಟಿಕ್ ಮಲ್ಚಿಂಗ್, ಕಳೆ ನಿಯಂತ್ರಕ ಮ್ಯಾಟ್ (ವೀಡ್ ಮ್ಯಾಟ್), ತರಕಾರಿ ಬೆಳೆಗಳಿಗೆ ಆಧಾರ ನೀಡುವ ವ್ಯವಸ್ಥೆ, ಎರೆಹುಳು ಗೊಬ್ಬರ ಘಟಕ, ಜೇನು ಪೆಟ್ಟಿಗೆಗೆ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

Advertisements

ಅಲ್ಲದೇ ಕೃಷಿ ಉಪಕರಣಗಳಾದ 20 ಹೆಚ್.ಪಿ ವರೆಗಿನ ಟ್ರ್ಯಾಕ್ಟರ್, ಪವರ್ ಟ್ರಿಲ್ಲರ್, ಭೂಮರ್ ಸ್ಪ್ರೆಯರ್, ಶೀಥಲಗೃಹ ಘಟಕ, ಪ್ರಾಥಮಿಕ ಸಂಸ್ಕರಣಾ ಘಟಕ, ಸೋಲಾರ್ ಕ್ರಾಪ್ ಡ್ರೈಯರ್, ಪ್ಯಾಕ್‍ಹೌಸ್ ಹಾಗೂ ಈರುಳ್ಳಿ ಶೇಖರಣ ಘಟಕಗಳಿಗೆ ಸಹಾಯಧನ ಪಡೆಯಲು ಆಸಕ್ತ ರೈತ ಫಲಾನುಭವಿಗಳಿಂದ ಅರ್ಜಿ ಅಹ್ವಾನಿಸಲಾಗಿರುತ್ತದೆ.

ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಆಯಾ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿಗೆ 2025ರ ಜೂನ್ 20 ರೊಳಗೆ ನಿಯಮಾನುಸಾರ ಸಲ್ಲಿಸಲು ಕೋರಿದೆ.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಫಲಿತಾಂಶ ಕುಂಠಿತ ಸರ್ಕಾರಿ ಶಾಲೆ, ಖಾಸಗಿ ಶಿಕ್ಷಣ ಸಂಸ್ಥೆಗಳ ದುಬಾರಿ ಶುಲ್ಕದ ಮೇಲೆ ಕ್ರಮಕ್ಕೆ ರೈತ ಸಂಘ ಆಗ್ರಹ.

ಹೆಚ್ಚಿನ ಮಾಹಿತಿಗಾಗಿ ರೈತರು ಆಯಾ ತಾಲ್ಲೂಕಿನ ಸಂಬಂಧಪಟ್ಟ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿ, ಹೋಬಳಿಯ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ತೋಟಗಾರಿಕೆ ಜಂಟಿನಿರ್ದೇಶಕರು ತಿಳಿಸಿದ್ದಾರೆ.

IMG 20250205 WA0034
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | 261 ದೇಸಿ ಸಾಂಪ್ರದಾಯಿಕ ಬೆಳೆ, ತಳಿಗಳ ಸಂರಕ್ಷಣೆ

ನಮ್ಮ ಪೂರ್ವಜರ ದೀರ್ಘಾಯುಷ್ಯ ಮತ್ತು ಆರೋಗ್ಯಯುತ ಜೀವನ ಶೈಲಿಗೆ ಪ್ರಮುಖ ಕಾರಣವಾಗಿದ್ದು...

ಚಿತ್ರದುರ್ಗ | ಪಂಚ ಗ್ಯಾರಂಟಿ ಯೋಜನೆಗಳ ಜಾರಿಯಿಂದ ಆರ್ಥಿಕ ಸಬಲೀಕರಣ; ಸಚಿವ ಡಿ.ಸುಧಾಕರ್ ಅಭಿಮತ

"ದೇಶದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ರಾಜ್ಯದಲ್ಲಿ ಜಾರಿಗೆ ತಂದ ಪಂಚ ಗ್ಯಾರಂಟಿ...

ಚಿತ್ರದುರ್ಗ | ನರೇಗಾ ಕೆಲಸ, ಕೂಲಿ ವಿಳಂಬ ವಿರೋಧಿಸಿ ಗ್ರಾಕೂಸ್ ಕಾರ್ಯಕರ್ತರ ಪತ್ರ ಚಳವಳಿ

ಚಿತ್ರದುರ್ಗ ಜಿಲ್ಲೆ, ಚಳ್ಳಕೆರೆ ತಾಲ್ಲೂಕು ಸಿದ್ಧೇಶ್ವರನ ದುರ್ಗಾ ಗ್ರಾಮ ಪಂಚಾಯಿತಿಯಲ್ಲಿ ನರೇಗಾ-ಉದ್ಯೋಗ...

Download Eedina App Android / iOS

X