ವಿಜಯಪುರ | ʼನವ ಭಾರತ ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಿದ ಮಹಾನ್ ನೇತಾರ ನೆಹರುʼ

Date:

Advertisements

ನವ ಭಾರತ ನಿರ್ಮಾಣಕ್ಕೆ ಅಡಿಗಲ್ಲು ಹಾಕಿ, ಭದ್ರ ಬುನಾದಿ ಹಾಕಿದ ಮಹಾನ್‌ ಚೇತನ, ಶಿಕ್ಷಣ ವ್ಯವಸ್ಥೆಗೆ ಬಲ ಕೊಟ್ಟ ನೇತಾರ ಮಾಜಿ ಪ್ರಧಾನಿ ಪಂಡಿತ್ ಜವಾಹರ್ಲಾಲ್ ನೆಹರು ಎಂದು ವಿಜಯಪುರ ಕಾಂಗ್ರೆಸ್ ಉಪಾಧ್ಯಕ್ಷ ವೈಜನಾಥ ಕರ್ಪೂರಮಠ ಹೇಳಿದರು.

ನಗರದ ಕಾಂಗ್ರೆಸ್ ಪಕ್ಷದ ಕಾರ್ಯಾಲಯದಲ್ಲಿ ಆಯೋಜಿಸಿದ್ದ ನೆಹರು ಅವರ ಪುಣ್ಯ ತಿಥಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಸಾವಿರಾರು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಲು ಮುನ್ನುಡಿ ಬರೆದು, ಸಾಕ್ಷರತೆಯಲ್ಲಿ ಮೈಲಿಗಲ್ಲು ನಿರ್ಮಾಣ ಮಾಡಿದ ಧೀಮಂತ ನಾಯಕ, ಭಾರತದಾದ್ಯಂತ ಹಲವಾರು ಆಸ್ಪತ್ರೆಗಳನ್ನು ಕಟ್ಟಲು ಆಜ್ಞೆ ಮಾಡಿದ ವೈದ್ಯಲೋಕದ ರಾಯಭಾರಿ, ನದಿ, ಸೇತುವೆಗಳನ್ನು ಕಟ್ಟಿ ಕುಡಿಯುವ ನೀರಿನ ವ್ಯವಸ್ಥೆ ಮಾಡಿದ ನೀರಾವರಿಯ ತಜ್ಞ, ವಿಜ್ಞಾನಿಗಳ ಸಾಧನೆಯನ್ನು ಮನಗಂಡು ಇಸ್ರೋ ಬಾಹ್ಯಾಕಾಶ ಸಂಸ್ಥೆಯನ್ನು ಸ್ಥಾಪಿಸಲು ಇಚ್ಛಾಶಕ್ತಿ ತೋರಿದ ವಿಜ್ಞಾನಿಗಳ ಅಚ್ಚು ಮೆಚ್ಚಿನ ನಾಯಕ ಸರ್ವಜನಾಂಗದ ಶಾಂತಿಯ ತೋಟದ ಪರಿಪಾಲಕ, ಸಾವಿರಾರು ಕಿಲೋಮೀಟರ್ ರಸ್ತೆಗಳನ್ನು ನಿರ್ಮಿಸಲು ಶಂಕು ಸ್ಥಾಪನೆ ಮಾಡಿದ ಪ್ರಜಾಸೇವಕ ಭಾರತದ ಮೊಟ್ಟ ಮೊದಲ ಪ್ರಧಾನಿಯಾಗಿ ಜಗತ್ಪ್ರಸಿದ್ಧರಾದವರು” ಎಂದು ನೆಹರು ಅವರ ಗುಣಗಾನ ಮಾಡಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಕೆಪಿಸಿಸಿ ಉಪಾಧ್ಯಕ್ಷ ಕೆ ಎಫ್ ಅಂಕಲಗಿ, ಡಿ ಎಲ್ ಚವ್ಹಾಣ, ಗಂಗಾಧರ ಸಂಬಣ್ಣಿ, ಪ್ರಧಾನ ಕಾರ್ಯದರ್ಶಿ ಎಂ ಎಂ ಮುಲ್ಲಾ (ದ್ಯಾಬೇರಿ), ವಸಂತ ಹೊನಮೋಡೆ, ದೇಸು ಚವ್ಹಾಣ, ಬ್ಲಾಕ್ ಅಧ್ಯಕ್ಷ ಜಮೀರ್‌ ಅಹಮದ್ ಬಕ್ಷಿ, ಆರತಿ ಶಾಹಪೂರ, ವಿಜಯಪುರ ಜಿಲ್ಲಾ ಕಾಂಗ್ರೆಸ್ ಮಾಜಿ ಸೈನಿಕರ ವಿಭಾಗದ ಅಧ್ಯಕ್ಷ ವಿದ್ಯಾಧರ ಪಾಟೀಲ, ಅಶ್ಪಾಕ ಮನಗೂಳಿ, ಮಹ್ಮದ ಮುಲ್ಲಾ, ಸಂತೋಷ ಬಾಲಗಾವಿ, ತಾಜುದ್ದೀನ ಖಲೀಫಾ, ಎಂ. ಬಿ. ನಾಯಕ್, ಸರಫರಾಜ ಮಿರ್ಜಿ, ಶಬೀಹಾ ಮಂಟೂರ, ಮಹಿಬೂಬ ಕರ್ಜಗಿ, ದಿಲಿಪ ಪ್ರಭಾಕರ ಹಾಗೂ ಇತರ ಕಾರ್ಯಕರ್ತರು ಉಪಸ್ಥಿತರಿದ್ದರು.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X