ಎಸ್‌ಸಿ/ಎಸ್‌ಟಿ ಗುತ್ತಿಗೆ ಮೀಸಲು ಮೊತ್ತ ₹50 ಲಕ್ಷ ದಿಂದ ₹1 ಕೋಟಿಗೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ

Date:

Advertisements
  • 2023ರ ಫೆಬ್ರವರಿ 17ರಂದು ಬಜೆಟ್‌ನಲ್ಲಿ ಘೋಷಣೆ ಮಾಡಿದ್ದ ಸಿಎಂ
  • ₹1 ಕೋಟಿ ಮೊತ್ತದ ಕಾಮಗಾರಿಗಳಲ್ಲಿ ಶೇ 24ರಷ್ಟು ಮೀಸಲಾತಿ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಗುತ್ತಿಗೆದಾರರಿಗೆ ನೀಡಲಾಗುವ ಕಾಮಗಾರಿಗಳ ಗುತ್ತಿಗೆ ಮೊತ್ತವನ್ನು ₹50 ಲಕ್ಷದಿಂದ ₹1 ಕೋಟಿಗೆ ವಿಸ್ತರಿಸಿ ರಾಜ್ಯ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.

ಎಸ್‌ಸಿ/ಎಸ್‌ಟಿ ಗುತ್ತಿಗೆ ಮೀಸಲಾತಿ ಪ್ರಮಾಣವನ್ನು ₹50 ಲಕ್ಷ ದಿಂದ ₹1 ಕೋಟಿಗೆ ಹೆಚ್ಚಿಸಬೇಕು ಎಂದು 2018ರಲ್ಲಿಯೇ ಘೋಷಣೆ ಮಾಡಲಾಗಿತ್ತು. ಅನುಷ್ಠಾನಗೊಳ್ಳುವುದು ಬಾಕಿ ಇತ್ತು. 2023ರ ಫೆಬ್ರವರಿ 17ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ ಬಜೆಟ್‌ನಲ್ಲಿ ಈ ಅಂಶವನ್ನು ಪುನಃ ಘೋಷಿಸಿದ್ದರು.

ಗುತ್ತಿಗೆಯ ಮೀಸಲು ಮೊತ್ತ ಹೆಚ್ಚಳದ ಕುರಿತು ಈದಿನ.ಕಾಮ್‌ ಜೊತೆ ಮಾತನಾಡಿದ ರಾಜ್ಯ ಎಸ್‌ಸಿ/ಎಸ್‌ಟಿ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಎನ್ ಮಹದೇವ ಸ್ವಾಮಿ, “ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಗುತ್ತಿಗೆದಾರರಿಗೆ ₹50 ಲಕ್ಷದವರೆಗಿನ ಸಣ್ಣ ಕಾಮಗಾರಿಗಳಲ್ಲಿ ಶೇ.24ರವರೆಗೆ ಮೀಸಲಾತಿ ನಿಗದಿ ಮತ್ತು ಗುತ್ತಿಗೆ ಮೊತ್ತವನ್ನು ₹1 ಕೋಟಿಗೆ ಹೆಚ್ಚಳ ಮಾಡುವುದಾಗಿ ಘೋಷಿಸಿರುವುದನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಬೇಕು ಎಂದು ಆಗ್ರಹಿಸಿದ್ದೆವು” ಎಂದು ತಿಳಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಹಾಸನ | ಮೂಲ ಸೌಕರ್ಯಗಳಿಗೆ ಆಗ್ರಹ; ಚುನಾವಣೆ ಬಹಿಷ್ಕಾರಕ್ಕೆ…

“ಬಹಳಷ್ಟು ಬಾರಿ ಸರ್ಕಾರಕ್ಕೆ ಮನವಿ ಮಾಡುವ ಜೊತೆಗೆ ಹೋರಾಟಗಳ ಮೂಲಕ ಗಮನ ಸೆಳೆದಿದ್ದೇವು. 2023ರ ಬಜೆಟ್‌ನಲ್ಲಿ ಪುನಃ ಅದೇ ವಿಚಾರವನ್ನು ಘೋಷಣೆ ಮಾಡಿದ್ದರು. ಚುನಾವಣೆ ದಿನಾಂಕ ಪ್ರಕಟವಾಗುವ ಮೊದಲೇ ಸುಗ್ರೀವಾಜ್ಞೆ ಹೊರಡಿಸಬೇಕು ಎಂಬುದು ನಮ್ಮ ಆಗ್ರಹವಾಗಿತ್ತು. ಅದರಂತೆಯೇ ಇಂದು ಆದೇಶ ಮಾಡಲಾಗಿದೆ” ಎಂದು ಸಂತಷ ವ್ಯಕ್ತಪಡಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X