ಅಣ್ಣಾ ವಿಶ್ವವಿದ್ಯಾಲಯ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿ ಜ್ಞಾನಶೇಖರನ್ ದೋ‍ಷಿ

Date:

Advertisements

ಅಣ್ಣಾ ವಿಶ್ವವಿದ್ಯಾಲಯದ ಆವರಣದಲ್ಲಿ ವಿದ್ಯಾರ್ಥಿನಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿ ಜ್ಞಾನಶೇಖರನ್ ದೋಷಿ ಎಂದು ಚೆನ್ನೈ ಮಹಿಳಾ ನ್ಯಾಯಾಲಯ ತೀರ್ಪು ನೀಡಿದೆ. ಈ ಘಟನೆ ನಡೆದ ಕೇವಲ ಐದು ತಿಂಗಳಲ್ಲಿ ತೀರ್ಪು ಹೊರಬಿದ್ದಿದೆ.

ಚೆನ್ನೈ ಮಹಿಳಾ ನ್ಯಾಯಾಲಯದ ನ್ಯಾಯಾಧೀಶೆ ರಾಜಲಕ್ಷ್ಮಿ ಬುಧವಾರ(ಮೇ 28) ಈ ತೀರ್ಪು ನೀಡಿದ್ದಾರೆ. ಜ್ಞಾನಶೇಖರನ್ ವಿರುದ್ಧ ದಾಖಲಾಗಿರುವ ಎಲ್ಲಾ 11 ಆರೋಪಗಳಲ್ಲಿ ಅವರನ್ನು ದೋಷಿ ಎಂದು ಘೋಷಿಸಿದ್ದಾರೆ. ಜೂನ್ 2ರಂದು ಶಿಕ್ಷೆ ಪ್ರಕಟಿಸಲಾಗುತ್ತದೆ.

ಇದನ್ನು ಓದಿದ್ದೀರಾ? ಅಣ್ಣಾ ವಿಶ್ವವಿದ್ಯಾಲಯದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ರಾಜಕೀಯಗೊಳಿಸಲಾಗುತ್ತಿದೆ: ಮದ್ರಾಸ್ ಹೈಕೋರ್ಟ್

Advertisements

2024ರ ಡಿಸೆಂಬರ್ 23ರ ರಾತ್ರಿ ಅಣ್ಣಾ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ತನ್ನ ಗೆಳೆಯನೊಂದಿಗೆ ಇದ್ದಾಗ ಜ್ಞಾನಶೇಖರನ್ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಜ್ಞಾನಶೇಖರನ್ ವಿದ್ಯಾರ್ಥಿನಿಯನ್ನು 40 ನಿಮಿಷಗಳ ಕಾಲ ತನ್ನ ವಶದಲ್ಲಿಟ್ಟುಕೊಂಡು ಆಕೆ ಮತ್ತು ಆಕೆಯ ಗೆಳೆಯನ ವಿಡಿಯೋ ಮಾಡಿ ಆ ದೃಶ್ಯಗಳನ್ನು ಬಳಸಿಕೊಂಡು ಆಕೆಯನ್ನು ಬ್ಲ್ಯಾಕ್‌ಮೇಲ್ ಮಾಡಿದ್ದಾನೆ.

ಲೈಂಗಿಕ ಕಿರುಕುಳ ತಡೆ(PoSH) ಸಮಿತಿಯ ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಅದೇ ದಿನ ಪೊಲೀಸರಿಗೆ ದೂರು ನೀಡಿದ್ದಾರೆ. ಡಿಸೆಂಬರ್ 25ರಂದು ಗ್ರೇಟರ್ ಚೆನ್ನೈ ಪೊಲೀಸರು ಜ್ಞಾನಶೇಖರನ್ ಬಂಧನ ಮಾಡಿದ್ದಾರೆ.

ಚೆನ್ನೈನ ಕೊಟ್ಟೂರುಪುರಂನ ಜ್ಞಾನಶೇಖರನ್ ವಿರುದ್ಧ ಈಗಾಗಲೇ ಭಾರತೀಯ ದಂಡ ಸಂಹಿತೆಯ(ಐಪಿಸಿ) ಅಡಿಯಲ್ಲಿ ಏಳು ಪ್ರಕರಣಗಳು ಬಾಕಿ ಉಳಿದಿವೆ. ಈ ಪ್ರಕರಣಕ್ಕೆ ಸಂಬಂಧಿಸಿ ಹೊಸ ಭಾರತೀಯ ನ್ಯಾಯ ಸಂಹಿತೆ(ಬಿಎನ್ಎಸ್) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ತಮಿಳುನಾಡು ಸರ್ಕಾರವು ಕಠಿಣ ಗೂಂಡಾ ಕಾಯ್ದೆಯನ್ನು ಸಹ ಹಾಕಿದೆ. ಈ ಗೂಂಡಾ ಕಾಯ್ದೆಯು ಒಂದು ವರ್ಷದವರೆಗೆ ಜಾಮೀನು ಪಡೆಯಲು ಅವಕಾಶ ನೀಡುವುದಿಲ್ಲ.

ಜ್ಞಾನಶೇಖರನ್ ಬಂಧನದ ನಂತರ ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ(ಡಿಎಂಕೆ) ಕಾರ್ಯಕರ್ತರೊಂದಿಗಿನ ಚಿತ್ರಗಳು ಹರಿದಾಡಿ ರಾಜಕೀಯ ವಿವಾದ ಎದ್ದಿತ್ತು. ಆರಂಭದಲ್ಲಿ ಆರೋಪಿ ಡಿಎಂಕೆಗೆ ಸೇರಿದವನು ಎಂಬುದನ್ನು ನಿರಾಕರಿಸಿತ್ತು. ಆದರೆ ವಿಪಕ್ಷ ಹಲವು ಚಿತ್ರಗಳನ್ನು ವೈರಲ್‌ಗೊಳಿಸಿತ್ತು. ಇದರಿಂದಾಗಿ ತೀವ್ರ ರಾಜಕೀಯ ಸಂಚಲನ ಉಂಟಾಗಿತ್ತು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X