ಭ್ರಷ್ಟಾಚಾರ ಸಾಬೀತು ಮಾಡಿದರೆ ನನ್ನ ಆಸ್ತಿಯನ್ನೇ ಅವರಿಗೆ ಕೊಡುತ್ತೇನೆ: ಸಚಿವರಿಗೆ ಸಂಸದ ಸಿದ್ದೇಶ್ವರ ಸವಾಲು

Date:

Advertisements

ನಮ್ಮ ಕುಟುಂಬದಲ್ಲಿ ಯಾರೂ ಭ್ರಷ್ಟಾಚಾರ ಮಾಡಿಲ್ಲ, ಲಂಚ ಪಡೆದಿಲ್ಲ. ನಾನೂ ಯಾರಿಂದಲೂ ಲಂಚ ತೆಗೆದುಕೊಂಡಿಲ್ಲ. ನಾನು ಭ್ರಷ್ಟಾಚಾರ ಮಾಡಿದ್ದೇನೆಂದು ಸಚಿವ ಎಸ್‌.ಎಸ್‌ ಮಲ್ಲಿಕಾರ್ಜುನ ಸಾಬೀತು ಮಾಡಿದರೆ, ನನ್ನ ಇಡೀ ಆಸ್ತಿಯನ್ನು ಅವರಿಗೆ ಬರೆದು ಕೊಡುತ್ತೇನೆ ಎಂದು ದಾವಣಗೆರೆಯ ಬಿಜೆಪಿ ಸಂಸದ ಜಿ.ಎಂ ಸಿದ್ದೇಶ್ವರ ಹೇಳಿದ್ದಾರೆ.

ದಾವಣಗೆರೆಯಲ್ಲಿ ಮಾತನಾಡಿದ ಅವರು, “ನಮ್ಮ ಆಸ್ತಿ ಬಗ್ಗೆ ಸಚಿವ ಮಲ್ಲಿಕಾರ್ಜುನ ಮಾತನಾಡಿದ್ದಾರೆ. ನಾವೇನು ಕಳ್ಳತನ ಮಾಡಿ, ಭ್ರಷ್ಟಾಚಾರ ಮಾಡಿ ಆಸ್ತಿ ಸಂಪಾದಿಸಿಲ್ಲ. ನಮ್ಮ ಮನೆಯಲ್ಲಿ ಆರು ಮಂದಿ ದುಡಿಯುತ್ತೇವೆ. 1993ಕ್ಕೂ ಇಂದಿಗೂ ನಮ್ಮ ಆಸ್ತಿ ಹೆಚ್ಚಳವಾಗಿದೆ. ನಮ್ಮ ಅಪ್ಪನ ಕಾಲದಿಂದಲೂ ನಾವು ಶ್ರೀಮಂತರು. ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರ ಕುಟುಂಬಕ್ಕೂ ನಾವು ಸಾಲ ಕೊಟ್ಟಿದ್ದೆವು” ಎಂದು ಹೇಳಿದ್ದಾರೆ.

“1997ರಲ್ಲಿಯೇ ನಮ್ಮ ಆದಾಯ 6 ಕೋಟಿ ರೂ. ಇದೆಯೆಂದು ಘೋಷಿಸಿದ್ದೆ. ಆ ವರ್ಷ 1.85 ಕೋಟಿ ರೂ. ತೆರಿಗೆ ಕಟ್ಟಿದ್ದೆ. ನಾನು ಅಕ್ರಮ ನಡೆಸಿದ್ದೇನೆ ಎನ್ನುವವರು ತನಿಖೆ ನಡೆಸಲು, ನನ್ನದೇನೂ ಅಭ್ಯಂತರವಿಲ್ಲ. ಬಿಜೆಪಿ ಸರ್ಕಾರದಲ್ಲಿ ಮಾತ್ರವಲ್ಲ, ಮಲ್ಲಿಕಾರ್ಜುನ ಅವರು ಸಚಿವರಾಗಿದ್ದ ಅವಧಿಯಿಂದ ಈಚೆಗೆ ನಡೆದಿರುವ ಕಾಮಗಾರಿಗಳ ಬಗ್ಗೆಯೂ ತನಿಖೆಯಾಗಲಿ. ನಾನು ಭ್ರಷ್ಟಾಚಾರ ಮಾಡಿದ್ದೇನೆಂದು ಸಾಬೀತು ಮಾಡಿದರೆ, ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ” ಎಂದು ಹೇಳಿದ್ದಾರೆ.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ದಾವಣಗೆರೆ | ಶಾಲೆಗೆ ರಸ್ತೆ ಅಭಿವೃದ್ಧಿಪಡಿಸಲು ಆರನೇ ತರಗತಿ ವಿದ್ಯಾರ್ಥಿನಿ ಗ್ರಾ.ಪಂ. ಮುಂದೆ ಧರಣಿ

ಶಾಲೆಗೆ ಹೋಗುವ ರಸ್ತೆ ಸರಿಪಡಿಸಿ ಅಭಿವೃದ್ಧಿಪಡಿಸಲು ಒತ್ತಾಯಿಸಿ ಆರನೇ ತರಗತಿ ವಿದ್ಯಾರ್ಥಿನಿಯೊಬ್ಬಳು...

Download Eedina App Android / iOS

X