ರಾಜಕೀಯ ಭಿನ್ನಮತ ಮರೆತು ಮೋದಿಗೆ ಜೆಡಿಎಸ್ ಬೆಂಬಲಿಸಲಿದೆ: ಶೋಭ ಕರಂದ್ಲಾಜೆ

Date:

Advertisements

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿವೆ ಎಂಬ ವಿಚಾರ ಸುದ್ದಿಯಾಗುತ್ತಿದೆ. ಈ ಕುರಿತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ ನೀಡಿದ್ದಾರೆ.

ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನರೇಂದ್ರ ಮೋದಿ ಅವರು ಮೂರನೇ ಬಾರಿಯೂ ದೇಶದ ಪ್ರಧಾನಿ ಆಗಬೇಕು. ಭಾರತಕ್ಕೆ ಎದ್ದು ನಿಂತು ಗೌರವ ನೀಡುತ್ತಿರುವುದು ಪ್ರಧಾನಿ ಮೋದಿ ಅವರ ಕಾರಣಕ್ಕೆ” ಎಂದು ಹೇಳಿದ್ದಾರೆ.

“ರಾಜಕೀಯ ಭಿನ್ನಮತಗಳನ್ನು ದೂರವಿಟ್ಟು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರಿಗೆ ಬೆಂಬಲ ನೀಡಬೇಕು. ಇಂತಹ ಅಪೇಕ್ಷೆ ಎಲ್ಲ ರಾಜಕೀಯ ಪಾರ್ಟಿಯಲ್ಲೂ ಇದೆ. ಈ ಅಪೇಕ್ಷೆಯನ್ನು ಜೆಡಿಎಸ್​ನಿಂದಲೂ ನಿರೀಕ್ಷೆ ಮಾಡುತ್ತೇವೆ” ಎಂದಿದ್ದಾರೆ.

Advertisements

“ದೇಶದಲ್ಲಿರುವ ರಾಜಕೀಯ ಪಕ್ಷಗಳು ಪ್ರಧಾನಿ ಮೋದಿ ಜೊತೆಗೆ ಜೋಡಣೆ ಆಗುತ್ತಿವೆ. ಭಾರತ ನೂರನೇ ವರ್ಷದ ಸಂಭ್ರಮಾಚರಣೆಯ ದಿನ ವಿಶ್ವದಲ್ಲೇ ನಂಬರ್ ಓನ್ ಆಗಿರಬೇಕು ಎಂಬುದು ಮೋದಿ ಅವರ ಕನಸು” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಗೃಹಲಕ್ಷ್ಮಿ ಯೋಜನೆಗೆ ಜುಲೈ 19ರಿಂದ ನೋಂದಣಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌

ಎರಡೇ ತಿಂಗಳಿಗೆ ಸರ್ಕಾರ ನೈತಿಕತೆ ಕಳೆದುಕೊಂಡಿದೆ’

ಕಾಂಗ್ರೆಸ್ ಸರ್ಕಾರ ಬಂದ ಮೇಲೆ ರಾಜ್ಯಾದ್ಯಂತ ಕೊಲೆಗಳು ಆಗುತ್ತಿದೆ. ಕಾಂಗ್ರೆಸ್ ನೇತೃತ್ವ, ಕೃಪಾಕಟಾಕ್ಷದಲ್ಲಿ ರಾಜ್ಯದಲ್ಲಿ ಕೊಲೆಯಾಗುತ್ತಿದೆ. ದಿಗಂಬರ ಸ್ವಾಮಿ ಕೊಲೆ, ಬೆಂಗಳೂರಿನಲ್ಲಿ ಹಾಡಹಗಲೇ ಟೆಕ್ಕಿ ಸಾಯುತ್ತಾರೆ. ಉಳ್ಳಾಲದಲ್ಲಿ ನಮ್ಮ ಕಾರ್ಯಕರ್ತನ ಶವ ನೀರಲ್ಲಿ ಸಿಗುತ್ತದೆ. ಹನುಮಜಯಂತಿ ಯಶಸ್ವಿಯಾಗಿದ್ದಕ್ಕೆ ವೇಣುಗೋಪಾಲ್ ಕೊಲೆಯಾಗಿದೆ. ಎರಡೇ ತಿಂಗಳಿಗೆ ಸರ್ಕಾರ ನೈತಿಕತೆ ಕಳೆದುಕೊಂಡಿದೆ ಎಂದು ಸಚಿವೆ ಶೋಭಾ ಕರಾಂದ್ಲಾಜೆ ವಾಗ್ದಾಳಿ ನಡೆಸಿದರು.

ಎ4 ಆರೋಪಿಯನ್ನು ಎ1 ಮಾಡುತ್ತಾರೆ, A1 ಆರೋಪಿಯನ್ನು ರಕ್ಷಣೆ ಮಾಡುತ್ತಾರೆ. ಇದು ಇಂದಿನ ಕಾಂಗ್ರೆಸ್ ಸರ್ಕಾರದ ನೀತಿ ರಾಜಕೀಯ. 136 ಸೀಟ್ ಗೆದ್ದಿದ್ದೇವೆಂದು ದರ್ಪದಿಂದಿದ್ದಾರೆ, ಮುಂದೆ ಜನ ಪಾಠ ಕಲಿಸುತ್ತಾರೆ ಎಂದರು.

ಗ್ಯಾರಂಟಿಗಳು ಎಲ್ಲಿ ಹೋದವು? ಮೊದಲ ಕ್ಯಾಬಿನೆಟ್ ನಲ್ಲೇ ಗ್ಯಾರಂಟಿ ಎಂದಿದ್ದರು. ನಿಮ್ಮ ಮೊದಲ ಕ್ಯಾಬಿನೆಟ್ ಯಾವಾಗ? ಮೊದಲು ಅದನ್ನು ಹೇಳಿ ಎಂದು ಪ್ರಶ್ನಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X