ನೂರಾರು ಗೂಂಡಾಗಳಿಂದ ರಾತ್ರೋರಾತ್ರಿ ದಲಿತರ ಮನೆ-ದೇವಸ್ಥಾನ ಧ್ವಂಸ, ಪ್ರೆಸ್ಟೀಜ್ ಕಂಪನಿ ಮೇಲೆ ಕೃತ್ಯದ ಆರೋಪ

Date:

Advertisements

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯಲ್ಲಿನ ಬೇಗೂರಲ್ಲಿ ನೂರಾರು ಗೂಂಡಾಗಳು ಬುಧವಾರ ರಾತ್ರೋರಾತ್ರಿ ಏಕಕಾಲಕ್ಕೆ ನುಗ್ಗಿ, ಪೊಲೀಸರೇ ಎದುರಲ್ಲೇ ದಲಿತರ ಮನೆ ಮತ್ತು ದೇವಸ್ಥಾನವನ್ನು ಧ್ವಂಸ ಮಾಡಿರುವ ಘಟನೆ ನಡೆದಿದೆ.

ಬೇಗೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಬರುವ ಸುಮಾರು ಒಂದು ಎಕರೆ ಜಮೀನಿನಲ್ಲಿ ಮುನಿಸ್ವಾಮಿ ಎಂಬುವರು 1970ರಿಂದಲೂ ಜಮೀನನ್ನು ಉಳಿಮೆ ಮಾಡಿಕೊಂಡು, ಅದೇ ಭೂಮಿಯಲ್ಲಿ ಮನೆ ನಿರ್ಮಿಸಿಕೊಂಡು ವಾಸವಿದ್ದರು ಎನ್ನುವ ಮಾಹಿತಿ ಇದೆ.

ಜಮೀನಿನ ಮುಂಭಾಗದಲ್ಲಿರುವ ಪ್ರೆಸ್ಟೀಜ್ ಕಂಪನಿ ಈ ಭೂಮಿಯನ್ನು ತನ್ನ ವಶಕ್ಕೆ ಪಡೆಯಲು ಸಾಕಷ್ಟು ಸಲ ಪ್ರಯತ್ನಿಸಿದ್ದು ಎನ್ನುವ ಆರೋಪವವನ್ನು ಮುನಿಸ್ವಾಮಿ ಕುಟುಂಬ ಸದಸ್ಯರು ಮಾಡುತ್ತಿದ್ದು, ಬುಧವಾರ ರಾತ್ರೋರಾತ್ರಿ ನೂರಾರು ಗೂಂಡಾಗಳು ಧಾವಿಸಿ, ತಾವು ವಾಸವಿದ್ದ ಮನೆ ಮತ್ತು ಪಕ್ಕದ ದೇವಸ್ಥಾನವನ್ನು ನೆಲಸಮಗೊಳಿಸಿದ್ದಾರೆ ಎಂದು ಸಂತ್ರಸ್ತರು ಅಳಲು ತೋಡಿಕೊಂಡಿದ್ದಾರೆ.

Advertisements

ಇದನ್ನೂ ಓದಿರಿ: Ground Report | ಗೂಂಡಾಗಳಿಂದ ದಲಿತರ ಮನೆ, ದೇವಾಲಯ ಧ್ವಂಸವಾದರೂ ಬೇಗೂರು ಪೊಲೀಸರು ನಿರ್ಲಕ್ಷ್ಯ ತಾಳಿದ್ದೇಕೆ?

ಮುನಿಸ್ವಾಮಿ ಕುಟುಂಬದಲ್ಲಿ 12 ಜನ ಸದಸ್ಯರಿದ್ದು, ರಾತ್ರಿ ಮಲಗಿದ ವೇಳೆ ಆಗಮಿಸಿದ ಗೂಂಡಾಗಳು ಎಲ್ಲರನ್ನು ಎಚ್ಚರಿಸಿ, ಏಕಾಏಕಿ ಮನೆಯನ್ನು ಧ್ವಂಸ ಮಾಡಿದ್ದಾರೆ. ಕೃತ್ಯವನ್ನು ಮೊಬೈಲ್‌ನಲ್ಲಿ ಸೆರೆ ಹಿಡಿದ ಇಬ್ಬರು ಕುಟುಂಬದ ಯುವಕರನ್ನು ಗೂಂಡಾಗಳು ರಾತ್ರಿ ಅಪಹರಿಸಿದ್ದು, ಪೊಲೀಸರಿಗೆ ಮಾಹಿತಿ ಗೊತ್ತಾಗುತ್ತಿದ್ದಂತೆ ಪೊಲೀಸ್ಟ್‌ ಸ್ಟೇಷನ್‌ ಹತ್ರ ಅವರನ್ನು ಬಿಟ್ಟು ಹೋಗಿದ್ದಾರೆ ಎಂದು ಸಂತ್ರಸ್ತರು ಹೇಳಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಒಳಮೀಸಲಾತಿ ಸಮೀಕ್ಷೆ; ಜಾತಿ ಹೇಳಿಕೊಳ್ಳುವ ಸಂಕಟದಲ್ಲಿ ದಲಿತರು

ಮನೆ ಧ್ವಂಸ ಮಾಡುತ್ತಿರುವ ಬಗ್ಗೆ ಬೇಗೂರು ಪೊಲೀಸ್‌ ಠಾಣೆಗೆ ಹೋಗಿ ಮಾಹಿತಿ ನೀಡಿದರೂ ಪೊಲೀಸರು ಸ್ಪಂದಿಸಿಲ್ಲ ಎನ್ನುವ ಆರೋಪ ಕೇಳಿಬಂದಿದೆ. ಸ್ಥಳಕ್ಕೆ ಠಾಣಾ ಅಧಿಕಾರಿಗಳು ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ.

ಈ ದಿನ.ಕಾಮ್‌ ಜೊತೆ ಮಾತನಾಡಿದ ಮನೆ ಕಳೆದುಕೊಂಡ ಸಂತ್ರಸ್ತರು, “ಪೊಲೀಸರ್‌ ಸಮ್ಮುಖದಲ್ಲೇ ಗೂಂಡಾಗಳು ಮನೆ ಮತ್ತು ದೇವಸ್ಥಾನವನ್ನು ಧ್ವಂಸ ಮಾಡಿದ್ದಾರೆ. ಪೊಲೀಸ್‌ ಕೃತ್ಯ ಎಸಗಿದವರ ಜೊತೆ ಶ್ಯಾಮೀಲಾಗಿದ್ದು, ಅವರ ನಿರ್ಲಕ್ಷ್ಯವೇ ಗೂಂಡಾಗಳಿಗೆ ಬಲಕೊಟ್ಟಿದೆ” ಎಂದು ಆರೋಪಿಸಿದ್ದಾರೆ.

    eedina
    ಈ ದಿನ ಡೆಸ್ಕ್‌
    Website |  + posts

    ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

    ಪೋಸ್ಟ್ ಹಂಚಿಕೊಳ್ಳಿ:

    4 COMMENTS

    1. Happy that they did not kill the house owners, and even the shrine was not spared, all destroyed?
      Govt is unaware of these atrocities?
      Land grabbers have a free time in grabbing Dalith’s house!
      Probably, will get away with it in Congress rule of Karnataka?
      Sathymeva jayathe?
      Jai Hind?

    2. The over usage of meaningless extravaganza work DALIT is highly outrageous
      There is a possibility that A GOONDAIC GANG has encroached the property of the owner in the said area. Ridiculously tagging the caste is highly outrageous. Affected persons are all HUMANS. Third rate and good for nothing politicians and immature and visionless journalism has been adding caste colour to this sad incident.

    LEAVE A REPLY

    Please enter your comment!
    Please enter your name here

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

    ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

    ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

    ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

    ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

    ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

    Download Eedina App Android / iOS

    X