ಪಂದ್ಯ ವೀಕ್ಷಣೆಗೆ ಭಾರತಕ್ಕೆ ಬಂದ ಆರ್‌ಸಿಬಿ ಮಾಜಿ ಸ್ಟಾರ್‌ ಆಟಗಾರ, ಕಪ್‌ ಗೆಲ್ಲುವುದು ಖಚಿತವೇ?

Date:

Advertisements

ಐಪಿಎಲ್‌ 2025ರ ಮೊದಲ ಕ್ವಾಲಿಫೈಯರ್ ಪಂದ್ಯ ಇಂದು (ಮೇ 29) ನಡೆಯುತ್ತಿದ್ದು, ಪಂಜಾಬ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಸೆಣಸಲಿವೆ. ಈ ನಿರ್ಣಾಯಕ ಪಂದ್ಯವನ್ನು ವೀಕ್ಷಿಸಲು ಆರ್​ಸಿಬಿ ತಂಡದ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್ ಆಗಮಿಸಿದ್ದಾರೆ.

ಬುಧವಾರ ಮುಂಬೈಗೆ ಬಂದಿಳಿದಿರುವ ಎಬಿಡಿ, ಅಲ್ಲಿಂದ ಚಂಡೀಗಢ್​ಗೆ ತೆರಳುವುದಾಗಿ ತಿಳಿಸಿದ್ದಾರೆ. ಅದರಂತೆ ಇಂದು ಮುಲ್ಲನ್​ಪುರ್​ನಲ್ಲಿ ಜರುಗಲಿರುವ ಆರ್​ಸಿಬಿ ಮತ್ತು ಪಂಜಾಬ್ ಕಿಂಗ್ಸ್ ನಡುವಣ ಪಂದ್ಯದ ವೇಳೆ ಎಬಿಡಿ ಕಾಣಿಸಿಕೊಳ್ಳಲಿದ್ದಾರೆ. ಇದು ಆರ್‌ಸಿಬಿ ಅಭಿಮಾನಿಗಳ ಸಂತೋಷವನ್ನು ಹೆಚ್ಚು ಮಾಡಿದೆ.

2008 ರಿಂದ ಐಪಿಎಲ್ ಆಡುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈವರೆಗೆ ಕಪ್ ಗೆದ್ದಿಲ್ಲ. ಆರ್‌ಸಿಬಿ ತನ್ನ ಇತಿಹಾಸದಲ್ಲಿ ಕ್ರಮವಾಗಿ 2009, 2011 ಮತ್ತು 2016 ರಲ್ಲಿ ಮೂರು ಬಾರಿ ಐಪಿಎಲ್ ಫೈನಲ್ ತಲುಪುವಲ್ಲಿ ಯಶಸ್ವಿಯಾಗಿದೆ. ಆದಾಗ್ಯೂ, ಮೂರು ಬಾರಿ ಕೂಡ ಫೈನಲ್​ನಲ್ಲಿ ಎಡವಿತ್ತು. ಆದರೆ ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟ್ರೋಫಿ ಎತ್ತಿ ಹಿಡಿಯುವ ನಿರೀಕ್ಷೆಯಲ್ಲಿದೆ.

Advertisements
ಡಿ

ಇದಕ್ಕೂ ಮುನ್ನ ಆರ್​ಸಿಬಿ ತಂಡ ಕಪ್ ಗೆಲ್ಲುವ ಭರವಸೆಯನ್ನು ಎಬಿಡಿ ವ್ಯಕ್ತಪಡಿಸಿದ್ದರು. ಅಲ್ಲದೆ ಈ ಬಾರಿ ರಾಯಲ್ ಪಡೆ ಫೈನಲ್​​ಗೇರಿದರೆ ಟ್ರೋಫಿ ಎತ್ತಿ ಹಿಡಿಯಲು ನಾನು ಸಹ ಹಾಜರಿರಲಿದ್ದೇನೆ ಎಂದಿದ್ದರು. ಆದರೆ, ಇದೀಗ ಪ್ಲೇಆಫ್ ಪಂದ್ಯಕ್ಕೂ ಮುನ್ನವೇ ಎಬಿಡಿ ಭಾರತಕ್ಕೆ ಆಗಮಿಸಿದ್ದು, ಈ ಮೂಲಕ ಈ ಬಾರಿ ಆರ್​ಸಿಬಿ ತಂಡ ಕಪ್ ಗೆಲ್ಲುವುದು ಬಹುತೇಕ ಖಚಿತ ವಿಶ್ವಾಸದಲ್ಲಿ ಡಿವಿಲಿಯರ್ಸ್ ಭಾರತಕ್ಕೆ ಆಗಮಿಸಿದಂತಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

Download Eedina App Android / iOS

X