ಶಾಸಕಿ ಸರೋಜ್ ಅಹಿರೆ ಅಜಿತ್ ಪವಾರ್ ಬಣ ಸೇರ್ಪಡೆ

Date:

Advertisements
  • ಅಹಿರೆ ಮೂಲಕ ನಾಸಿಕ್‌ನ ಆರು ಶಾಸಕರು ಅಜಿತ್ ಪವಾರ್ ಬಣ ಸೇರ್ಪಡೆ
  • ಏಕನಾಥ್ ಶಿಂಧೆ ಸರ್ಕಾರದಲ್ಲಿ ಅಜಿತ್ ಪವಾರ್ ಉಪ ಮುಖ್ಯಮಂತ್ರಿಯಾಗಿ ಅಧಿಕಾರ

ಶರದ್ ಪವಾರ್ ನೇತೃತ್ವದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಶಾಸಕಿ ಸರೋಜ್ ಅಹಿರೆ ಅವರು ಶನಿವಾರ (ಜುಲೈ 15) ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರ ಬಣ ಸೇರ್ಪಡೆಯಾಗಿದ್ದಾರೆ.

ಆ ಮೂಲಕ ನಾಸಿಕ್ ಜಿಲ್ಲೆಯ ಆರು ಶಾಸಕರು ಎನ್‌ಸಿಪಿಯ ಅಜಿತ್ ಪವಾರ್ ಪಾಳಯ ಸೇರಿದಂತಾಗಿದೆ.

ಅಹಿರೆ ಅವರು ನಾಸಿಕ್‌ನ ಡಿಯೋಲಲಿ ಕ್ಷೇತ್ರದ ಶಾಸಕಿಯಾಗಿದ್ದಾರೆ. ಎನ್‌ಸಿಪಿ ಎರಡು ಬಣಗಳಾಗಿ (ಶರದ್ ಪವಾರ್ ಬಣ ಮತ್ತು ಅಜಿತ್ ಪವಾರ್ ಬಣ) ವಿಭಜನೆಯಾದ ದಿನದಿಂದಲೂ ಅವರು ಯಾವುದೇ ಪಕ್ಷಕ್ಕೆ ಬಹಿರಂಗವಾಗಿ ತಮ್ಮ ಬೆಂಬಲ ಘೋಷಿಸಿರಲಿಲ್ಲ. ಇದೀಗ ಅಧಿಕೃತವಾಗಿ ಅಜಿತ್ ಪವಾರ್ ಬಣ ಸೇರಿಕೊಂಡಿದ್ದಾರೆ.

Advertisements

“ಅಭಿವೃದ್ಧಿಗಾಗಿ ಅಧಿಕಾರದಲ್ಲಿ ಉಳಿಯುವುದು ಅವಶ್ಯಕವಾಗಿದೆ. ನಾನು ಅಜಿತ್ ದಾದಾ ಜೊತೆಗಿದ್ದೇನೆ. ಈ ಹಿಂದೆ ನನ್ನ ಕ್ಷೇತ್ರದ ಅಭಿವೃದ್ಧಿಗೆ ಅಜಿತ್ ಪವಾರ್ ಅವರು ಸಹಕಾರ ನೀಡಿದ್ದರು. ಭವಿಷ್ಯದಲ್ಲಿಯೂ ಇದೇ ರೀತಿ ಮುಂದುವರಿಯುವಂತೆ ಅವರಲ್ಲಿ ಕೇಳುತ್ತೇನೆ” ಎಂದು ಅಹಿರೆ ಹೇಳಿದ್ದಾರೆ.

ಶುಕ್ರವಾರ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಅಜಿತ್ ಪವಾರ್ ಅವರು ನಾಸಿಕ್‌ಗೆ ಬಂದಿದ್ದು, ಈ ವೇಳೆ ಅವರನ್ನು ಸರೋಜ್ ಅಹಿರೆ ಸ್ವಾಗತಿಸಿದ್ದರು.

ಸರೋಜ್ ಅಹಿರೆ ಅವರ ಬೆಂಬಲದೊಂದಿಗೆ ನಾಸಿಕ್ ಜಿಲ್ಲೆಯ ಎಲ್ಲ ಆರು ಎನ್ಸಿಪಿ ಶಾಸಕರು (ಛಗನ್ ಭುಜಬಲ್, ನಿತಿನ್ ಪವಾರ್, ಮಾಣಿಕ್ರಾವ್ ಕೊಕಾಟೆ, ನರಹರಿ ಜಿರ್ವಾಲ್, ದಿಲೀಪ್ ಬಣಕಾರ್ ಮತ್ತು ಸರೋಜ್ ಅಹಿರೆ) ಅಜಿತ್ ಪವಾರ್ ಪರ ಬಾವುಟ ಬೀಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮಧ್ಯಪ್ರದೇಶ | ಆಫ್ರಿಕಾದಿಂದ ಕರೆತಂದಿದ್ದ 8ನೇ ಚೀತಾ ಸಾವು

ಜುಲೈ ಆರಂಭದಲ್ಲಿ ಎನ್‌ಸಿಪಿ ಪಕ್ಷದಲ್ಲಿ ರಾಜಕೀಯ ಕೋಲಾಹಲ ಉಂಟಾಗಿ ಶರದ್ ಪವಾರ್ ವಿರುದ್ಧ ಅಜಿತ್ ಪವಾರ್ ಬಂಡಾಯವೆದ್ದಿದ್ದರು. ಏಕನಾಥ್ ಶಿಂದೆ ಸರ್ಕಾರಕ್ಕೆ ತಮ್ಮ ಬೆಂಬಲವನ್ನು ಘೋಷಿಸುವ ಮೂಲಕ ಶಿವಸೇನೆ (ಶಿಂದೆ ಬಣ) ಮತ್ತು ಬಿಜೆಪಿಯೊಂದಿಗೆ ಕೈಜೋಡಿಸಿದ್ದರು.

ಎನ್‌ಸಿಪಿ ಇಬ್ಬಾಗವಾದ ಬೆನ್ನಲ್ಲೇ ಶಾಸಕರ ವಿಶ್ವಾಸ ಪಡೆದುಕೊಳ್ಳಲು ಎನ್ಸಿಪಿಯ ಎರಡು ಬಣಗಳು ಪೈಪೋಟಿಯಲ್ಲಿ ಬಿದ್ದಿದ್ದವು. ಏಕನಾಥ್ ಶಿಂಧೆ ಸರ್ಕಾರದಲ್ಲಿ ಅಜಿತ್ ಪವಾರ್ ಅವರು ಉಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

Download Eedina App Android / iOS

X