ಬಳ್ಳಾರಿ | ಸ್ವತಂತ್ರ ಭಾರತಕ್ಕೆ ನೆಹರೂ ಕೊಡುಗೆ ಅಪಾರವಾದದ್ದು: ಕೆ ಇ ಚಿದಾನಂದಪ್ಪ

Date:

Advertisements

ಸ್ವತಂತ್ರ ಭಾರತದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರು ಪ್ರಧಾನಿಯಾದಾಗ ದೇಶದಲ್ಲಿ ಬಹಳ ಬಡತನವಿತ್ತು ಹಾಗೂ ಸಂಪನ್ಮೂಲಗಳ ಕೊರತೆ ಇತ್ತು. ಲಭ್ಯವಿದ್ದ ಸಂಪನ್ಮೂಲಗಳನ್ನೇ ಬಳಸಿಕೊಂಡು ದೇಶವನ್ನು ಮುನ್ನಡೆಸಿಕೊಂಡು ಬಂದು ಭಾರತವನ್ನು ಒಂದು ಬಲಿಷ್ಠ ದೇಶವನ್ನಾಗಿ ನಿರ್ಮಿಸುವಲ್ಲಿ ಪಂಡಿತ್ ಜವಾಹರಲಾಲ್ ನೆಹರೂ ಅವರ ಕೊಡುಗೆ ಅಪಾರವಾದದ್ದು ಎಂದು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ಕೆ ಇ ಚಿದಾನಂದಪ್ಪ ಅಭಿಪ್ರಾಯಪಟ್ಟರು.

ಬಳ್ಳಾರಿ ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಆಚರಿಸಿದ ಸ್ವತಂತ್ರ ಭಾರತದ ಮೊದಲ ಪ್ರಧಾನಿ, ನವಭಾರತ ನಿರ್ಮಾತೃ, ಭಾರತ ರತ್ನ ಪಂಡಿತ್ ಜವಾಹರಲಾಲ್ ನೆಹರೂರವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಪ್ರಸ್ತುತ ರಾಜಕಾರಣಿಗಳು, ನೆಹರೂ ಅವರು ದೇಶಕ್ಕೆ ನೀಡಿದ ಕೊಡುಗೆ ಮತ್ತು ರಾಷ್ಟ್ರಕ್ಕೆ ಕಾಂಗ್ರೆಸ್ ನೀಡಿದ ಕೊಡುಗೆಯನ್ನು ತಿಳಿಯದೆ ಪೂರ್ವಗ್ರಹ ಪೀಡಿತರಾಗಿ ಮಾತನಾಡುತ್ತಿದ್ದಾರೆ. ಇದು ವಿರೋಧ ಪಕ್ಷಗಳ ಅಲ್ಪಜ್ಞಾನವನ್ನು ಪ್ರದರ್ಶಿಸುತ್ತದೆ” ಎಂದು ನೆಹರೂ ಅವರು ದೇಶಕ್ಕೆ ನೀಡಿದ ಕೊಡುಗೆಗಳನ್ನು ಸ್ಮರಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಬಿ.ಕೆ. ಹರಿಪ್ರಸಾದ್ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ: ಕರಾವಳಿಯ ಪರಿಸ್ಥಿತಿಗಳ ಬಗ್ಗೆ ಗಂಭೀರ ಚರ್ಚೆ

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಕಲ್ಲುಕಂಬ ಪಂಪಾಪತಿ, ಎಲ್ ಮಾರೆಣ್ಣ, ಮುಂಡರಗಿ ನಾಗರಾಜ್, ಭೋಯಪಾಟಿ ವಿಷ್ಣುವರ್ಧನ, ಶ್ರೀನಿವಾಸುಲು, ಈರನ ಗೌಡ, ವೈ ಶ್ರೀನಿವಾಸುಲು, ವೆಂಕಟಲಕ್ಷ್ಮಿ ನಾರಾಯಣ, ಎರಕುಲ ಸ್ವಾಮಿ, ಕನೇಕಲ್ ಮಾಬೂಸಾಬ್, ಶೇಕ್ ಅಫಾಕ್ ಹುಸ್ಸೇನ್, ಜೋಗಿನ ಚಂದ್ರಪ್ಪ, ಚಂಪ ಚೌಹಾಣ್, ಡಿ ವೆಂಕಟರಮಣ, ಸಂಗನಕಲ್ ವಿಜಯ್ ಕುಮಾರ್, ಸಿ ಅತ್ತವುಲ್ಲಾ, ಲಿಂಗರಾಜ್, ಮೋಹನ್, ಬಿ ಎ ಮಲ್ಲೇಶ್ವರಿ, ಫರ್ವಿನ್ ಭಾನು, ನಸೀಮ, ಚಂದ್ರಕಲಾ, ಸುನೀತ, ಗೀತಾ, ಗೌಸಿಯ, ವಿಜಯ ಕುಮಾರಿ, ಮಮತಾ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X