ಕಳ್ಳತನ ಮಾಡಿ ಶೋಕಿ ಜೀವನ ನಡೆಸುತ್ತಿದ್ದ ನಾಲ್ವರ ಬಂಧನ

Date:

Advertisements
  • ರೌಡಿಶೀಟರ್ ಸುನೀಲ್, ಅರವಿಂದ್, ನಂದಿನಿ, ಮೇರಿ ಬಂಧಿತರು
  • ಆರೋಪಿಗಳಿಂದ ಅರ್ಧ ಕೆಜಿ ಚಿನ್ನಾಭರಣ, 3ಕೆಜಿ ಬೆಳ್ಳಿ ಸೇರಿ 1.5 ಲಕ್ಷ ಹಣ ಜಪ್ತಿ

ಶೋಕಿ ಜೀವನ ನಡೆಸಲು ಕಳ್ಳತನ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಹೊಸಕೋಟೆ ಉಪವಿಭಾಗದ ಆವಲಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ರೌಡಿಶೀಟರ್ ಸುನೀಲ್, ಅರವಿಂದ್, ನಂದಿನಿ, ಮೇರಿ ಬಂಧಿತರು. ಇವರಿಂದ ಅರ್ಧ ಕೆಜಿಗೂ ಅಧಿಕ ಚಿನ್ನಾಭರಣ, 3 ಕೆಜಿ ಬೆಳ್ಳಿ ಸೇರಿ 1.5 ಲಕ್ಷ ಹಣ ಜಪ್ತಿ ಮಾಡಲಾಗಿದೆ.  

ಬಂಧಿತರು ಬೀಗ ಹಾಕಿರುವ ಮನೆಗಳನ್ನು ಟಾರ್ಗೆಟ್‌ ಮಾಡಿ, ಮಧ್ಯರಾತ್ರಿ ಮನೆಯಲ್ಲಿ ಲೈಟ್‌ ಹಾಕದೆ ಮನೆಯಲ್ಲಿರುವ ಚಿನ್ನಾಭರಣ ಮತ್ತು ಹಣವನ್ನು ದೋಚಿ ಪರಾರಿಯಾಗುತ್ತಿದ್ದರು.

Advertisements

ಬಂಧಿತರು ಆವಲಹಳ್ಳಿ ಸೇರಿದಂತೆ ಬೆಂಗಳೂರಿನ ಹಲವೆಡೆ ಕಳ್ಳತನ ಮಾಡುತ್ತಿದ್ದರು. ಆರೋಪಿಗಳಾದ ಸುನೀಲ್ ಮತ್ತು ಅರವಿಂದ್ ಇಬ್ಬರು ಸೇರಿ ಮನೆ ಕಳ್ಳತನ ಮಾಡಿದರೆ, ಇನ್ನುಳಿದ ಇಬ್ಬರು ಆರೋಪಿಗಳಾದ ನಂದಿನಿ ಮತ್ತು ಮೇರಿ ಎಂಬುವವರು ಚಿನ್ನಾಭರಣವನ್ನು ಅಂಗಡಿಯಲ್ಲಿ ಮಾರಾಟ ಮಾಡಿ ಹಣ ಪಡೆಯುತ್ತಿದ್ದರು. ಈ ನಾಲ್ವರು ಆರೋಪಿಗಳು 15ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾದವರು. ಚಿನ್ನವನ್ನು ಕದ್ದು ಬಂದ ಹಣದಲ್ಲಿ ಶೋಕಿ ಜೀವನ ನಡೆಸುತ್ತಿದ್ದರು. ಆವಲಹಳ್ಳಿ ಪೊಲೀಸರು ಇದೀಗ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X