ಶಿವಮೊಗ್ಗ | ಗೋವ ಪೊಲೀಸರಿಂದ ಸೈಬರ್ ವಂಚನೆ ಪ್ರಕರಣದಲ್ಲಿ ಶಿವಮೊಗ್ಗ ವ್ಯಕ್ತಿ ಬಂಧನ

Date:

Advertisements

ಗೋವಾದ ಸೈಬರ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು ₹1.02 ಕೋಟಿ ಮೊತ್ತದ ಸೈಬರ್ ವಂಚನೆ ಪ್ರಕರಣದಲ್ಲಿ ಶಿವಮೊಗ್ಗ ಮೂಲದ 63 ವರ್ಷದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಕೃಷ್ಣಮೂರ್ತಿ ಎನ್ನುವವನಾಗಿದ್ದಾನೆ. ‘ASK Smart Prospect Y5’ ಎಂಬ ನಕಲಿ ಆನ್ಲೈನ್ ಟ್ರೇಡಿಂಗ್ ಪ್ಲಾಟ್ಫಾರ್ಮ್ ಮೂಲಕ ಗೋವಾ ಮೂಲದ ವ್ಯಕ್ತಿಗೆ ವಂಚಿಸಿದ್ದಾರೆ ಎನ್ನಲಾಗಿದೆ.

ಈ ಪ್ಲಾಟ್ಫಾರ್ಮ್ ಮೂಲಕ ಹೆಚ್ಚಿನ ಲಾಭದ ಭರವಸೆ ನೀಡಿ, ಒಲ್ಡ್ ಗೋವಾದ ಒಬ್ಬರಿಂದ ₹1,02,42,325 ರೂಪಾಯಿಗಳನ್ನು ವಿವಿಧ ಬ್ಯಾಂಕ್ ಖಾತೆಗಳಿಗೆ ಹಣವನ್ನು ವರ್ಗಾಯಿಸಿಕೊಂಡು ಮೋಸ ಮಾಡಲಾಗಿದೆ ಎಂಬ ದೂರಿನನ್ವಯ ಗೋವಾ ಪೊಲೀಸರು ಶಿವಮೊಗ್ಗಕ್ಕೆ ಬಂದು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.ಗೋವಾದಲ್ಲಿ ದೊಡ್ಡ ಸೈಬರ್ ವಂಚನೆ 20 ಮೇ 2025ರಂದು ದಾಖಲಾದ ದೂರಿನ ಆಧಾರದ ಮೇಲೆ, ಸೈಬರ್ ಕ್ರೈಂ ಪೊಲೀಸರು BNS ಮತ್ತು IT Actನ ಅಡಿಯಲ್ಲಿ ಪ್ರಕರಣ ದಾಖಲಿಸಿದರು.

ಹಣದ ಟ್ಯಾಂಜಾಕ್ಷನ್​ ಮತ್ತು ಇತರ ಸಾಕ್ಷ್ಯಗಳನ್ನು ಪರಿಶೀಲಿಸಿದ ಪೊಲೀಸರು, ಕೃಷ್ಣಮೂರ್ತಿಯನ್ನು ಶಿವಮೊಗ್ಗದಲ್ಲಿ ಗುರುತಿಸಿ ಅವರನ್ನು ಬಂಧಿಸಿದರು. ತನಿಖೆ ತಂಡದ ನೇತೃತ್ವವನ್ನು LPSI ಯಶಿಕಾ ಸಾಂಕೋವಾಲ್ಕರ್ ವಹಿಸಿದ್ದರು, ಮತ್ತು PI ದೀಪಕ್ ಪೆಡ್ನೇಕರ್ ಹಾಗೂ SP ರಾಹುಲ್ ಗುಪ್ತಾ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಯಿತು.

Advertisements

ತನಿಖೆಯಲ್ಲಿ ಆರೋಪಿಯು ತಮ್ಮ ವೈಯಕ್ತಿಕ ಖಾತೆಗೆ ₹5 ಲಕ್ಷ ಸ್ವೀಕರಿಸಿದ್ದು, ಅದನ್ನು ಇತರ ಸಹಯೋಗಿಗಳಿಗೆ ವರ್ಗಾಯಿಸಿದ್ದು ಬೆಳಕಿಗೆ ಬಂದಿದೆ. ಇದಲ್ಲದೆ, ಅವರು “ಬಪ್ಪಾ ಮೆಷಿನ್ ಪ್ರೈವೇಟ್ ಲಿಮಿಟೆಡ್” ಎಂಬ ಹೆಸರಿನಲ್ಲಿ ಕರೆಂಟ್ ಅಕೌಂಟ್​ ತೆರೆದಿದ್ದರು. ಈ ಕಂಪನಿಯು ಮೂರು ರಾಜ್ಯಗಳಲ್ಲಿ ₹6.5 ಕೋಟಿ ಮೊತ್ತದ 5 ಸೈಬರ್ ವಂಚನೆ ಪ್ರಕರಣಗಳಿಗೆ ಸಂಬಂಧಿಸಿದೆ ಎಂದು ಪತ್ತೆಯಾಗಿದೆ.

SP ರಾಹುಲ್ ಗುಪ್ತಾ ಅವರು ಪ್ರಕರಣದ ತನಿಖೆ ಮುಂದುವರೆದಿದೆ ಎಂದು ಹೇಳಿದ್ದಾರೆ. ಸಾರ್ವಜನಿಕರಿಗೆ ಎಚ್ಚರಿಕೆ ನೀಡಿ, ಅತಿಯಾದ ಲಾಭದ ಭರವಸೆ ನೀಡುವ ಆನ್ಲೈನ್ ಸ್ಕೀಮ್ಗಳ ಬಗ್ಗೆ ಜಾಗರೂಕರಾಗಿರುವಂತೆ ಸೂಚಿಸಲಾಗಿದೆ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

ಮಂಗಳೂರು | ಆ. 23: ಅಲ್ ವಫಾ ಚಾರಿಟೇಬಲ್ ಟ್ರಸ್ಟ್‌ನಿಂದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ

ಮಂಗಳೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅಲ್ ವಫಾ ಚಾರಿಟೆಬಲ್ ಟ್ರಸ್ಟ್...

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

Download Eedina App Android / iOS

X