ಜುಲೈ 18ರಿಂದ ಪ್ಲಾಟ್‌ಫಾರ್ಮ್ ನಂ 1ರ ಮೂಲಕ ಯಶವಂತಪುರ ರೈಲು ನಿಲ್ದಾಣ ಪ್ರವೇಶಕ್ಕೆ ತಾತ್ಕಾಲಿಕ ನಿರ್ಬಂಧ

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣದ ಮರು ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವ ಹಿನ್ನೆಲೆ, ಜುಲೈ 18 ರಾತ್ರಿ 12 ಗಂಟೆಯಿಂದ ಮುಂದಿನ ಸೂಚನೆಯವರೆಗೆ ಪ್ಲಾಟ್‌ಫಾರ್ಮ್ ನಂ 1ರ (ಯಶವಂತಪುರ ಮಾರುಕಟ್ಟೆ) ಬದಿಯಿಂದ ನಿಲ್ದಾಣದ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ ಎಂದು ನೈರುತ್ಯ ರೈಲ್ವೆ ಇಲಾಖೆ ತಿಳಿಸಿದೆ.

ಸಾರ್ವಜನಿಕರು ಪ್ಲಾಟ್‌ಫಾರ್ಮ್‌ಗಳನ್ನು ಪ್ರವೇಶಿಸಲು ಪ್ಲಾಟ್‌ಫಾರ್ಮ್ ಸಂಖ್ಯೆ 6 (ತುಮಕೂರು ರಸ್ತೆಯ ಯಶವಂತಪುರ ಮೆಟ್ರೋ ನಿಲ್ದಾಣದ) ಕಡೆ ಇರುವ ಪ್ರವೇಶವನ್ನು ಬಳಸಲು ರೈಲ್ವೆ ಇಲಾಖೆ ವಿನಂತಿಸಲಾಗಿದೆ.

“ಎಲ್ಲ ಪ್ಲಾಟ್‌ಫಾರ್ಮ್‌ಗಳು ನಿಲ್ದಾಣದ ಎರಡೂ ಬದಿಗಳಲ್ಲಿ ಪಾದಚಾರಿ ಸೇತುವೆಗಳೊಂದಿಗೆ ಸಂಪರ್ಕ ಹೊಂದಿವೆ. ಶುಲ್ಕ ನೀಡಿ ಬಳಸಬಹುದಾದ ಬ್ಯಾಟರಿ ಚಾಲಿತ ಕಾರ್ ವ್ಯವಸ್ಥೆಯೂ ಲಭ್ಯವಿದೆ. ವಾಹನ ನಿಲುಗಡೆ ಸೌಲಭ್ಯವು ಪ್ಲಾಟ್‌ಫಾರ್ಮ್ ಸಂಖ್ಯೆ 6ರ ಕಡೆ ಪ್ರವೇಶದಲ್ಲಿ ಮಾತ್ರ  ಇರುತ್ತದೆ” ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

Advertisements

ಸುದ್ದಿ ಓದಿದ್ದೀರಾ? ಬ್ರ್ಯಾಂಡ್ ಬೆಂಗಳೂರು | ಮನೆ ಬಾಗಿಲಿಗೆ ಆಸ್ತಿ ದಾಖಲೆ ತಲುಪಿಸುವ ವ್ಯವಸ್ಥೆ ಜಾರಿ: ಡಿ ಕೆ ಶಿವಕುಮಾರ್

“ನಿಲ್ದಾಣದಲ್ಲಿ ಡಿಜಿಟಲ್ ಮಾಹಿತಿ ಫಲಕಗಳ ಸೇವೆಯನ್ನು ಕೆಲವು ದಿನಗಳ ಕಾಲ ಸ್ಥಗಿತಗೊಳಿಸಲಾಗಿದ್ದು, ಈ ಅವಧಿಯಲ್ಲಿ ಹಸ್ತಚಾಲಿತ ಪ್ರಕಟಣೆಗಳ ಮೂಲಕ ಮಾಹಿತಿಯನ್ನು ಪ್ರಸಾರ ಮಾಡಲಾಗುತ್ತದೆ” ಎಂದು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X