ಹಠಾತ್ ಪ್ರವಾಹ ಭೀತಿ: ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ ರೆಡ್‌ ಅಲರ್ಟ್‌

Date:

Advertisements

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಭಾರೀ ಮಳೆಯಾಗುವ ಸಾಧ್ಯತೆ ಇದೆ. ಪರಿಣಾಮವಾಗಿ ವಿವಿಧ ರಾಜ್ಯಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ಕರ್ನಾಟಕ ಸೇರಿದಂತೆ ದಕ್ಷಿಣ ಭಾರತ ಮತ್ತು ಈಶಾನ್ಯ ಭಾರತದ ರಾಜ್ಯಗಳಿಗೆ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಿಸಿದೆ.

ಪಶ್ಚಿಮ ಬಂಗಾಳ ಮತ್ತು ಬಾಂಗ್ಲಾದೇಶ ನಡುವಿನ ಸಾಗರ್ ದ್ವೀಪ ಮತ್ತು ಖೇಪುಪಾರ ಪ್ರದೇಶಗಳ ಬಳಿಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿದಿದೆ. ಇದರಿಂದ, ಈಶಾನ್ಯ ಮತ್ತು ದಕ್ಷಿಣ ಭಾರತದಲ್ಲಿ ಹಠಾತ್ ಭಾರೀ ಮಳೆಯಾಗಲಿದ್ದು, ಪ್ರವಾಹ ಮತ್ತು ಭೂಕುಸಿತ ಸಂಭವಿಸಬಹುದು ಎಂದು ಇಲಾಖೆ ಮುನ್ಸೂಚನೆ ನೀಡಿದೆ

ಈಶಾನ್ಯ ರಾಜ್ಯಗಳಾದ ಮೇಘಾಲಯ, ಅರುಣಾಚಲ ಪ್ರದೇಶ, ತ್ರಿಪುರ, ಸಿಕ್ಕಿಂ, ಅಸ್ಸಾಂ ಮತ್ತು ಪೂರ್ವ ಕರಾವಳಿ ರಾಜ್ಯಗಳಾದ ಪಶ್ಚಿಮ ಬಂಗಾಳ, ಒಡಿಶಾ ಹಾಗೂ ದಕ್ಷಿಣ ರಾಜ್ಯಗಳಾದ ಕರ್ನಾಟಕ, ಗೋವಾ ಹಾಗೂ ಕೇರಳದಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಈ ರಾಜ್ಯಗಳ ಪೈಕಿ ಬಹುತೇಕ ರಾಜ್ಯಗಳಲ್ಲಿ 300 ಮಿ.ಮೀ.ಗೂ ಅಧಿಕ ಮಳೆಯಾಗುವ ಸಾಧ್ಯತೆ ಇದೆ.

Advertisements

ಹೆಚ್ಚು ಮಳೆಯಾಗುವ ಕಾರಣ ಮಣ್ಣಿನ ಸವಕಳಿ ಹಾಗೂ ತಗ್ಗು ಪ್ರದೇಶಗಳಲ್ಲಿ ಪ್ರವಾಹ ಉಂಟಾಗಬಹುದು. ಭೂಕುಸಿತವೂ ಸಂಭವಿಸಬಹುದು ಎಂದು ಇಲಾಖೆ ಎಚ್ಚರಿಕೆ ನೀಡಿದೆ.

ಕರ್ನಾಟಕದಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಡಿಢೀರ್ ಪ್ರವಾಹ ಉಂಟಾಗುವ ಸಾಧ್ಯತೆಗಳಿವೆ. ಮೀನುಗಾರರು ಜೂನ್ 1ರವರೆಗೆ ಬಂಗಾಳ ಕೊಲ್ಲಿ ಮತ್ತು ಅರಬ್ಬೀ ಸಮುದ್ರಗಳಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

Download Eedina App Android / iOS

X