ಇಂಜಿನಿಯರ್ ನಿವಾಸದ ಮೇಲೆ ಅಧಿಕಾರಿಗಳ ದಾಳಿ; ಫ್ಲ್ಯಾಟ್‌ನಿಂದ 500 ರೂ. ನೋಟುಗಳ ಸುರಿಮಳೆ

Date:

Advertisements

ವಿಚಕ್ಷಣಾ ಇಲಾಖೆಯ ಅಧಿಕಾರಿಗಳು ದಾಳಿಗೆ ಹದರಿ ಇಂಜಿನಿಯೊಬ್ಬರು ತಾವು ವಾಸಿಸುತ್ತಿರುವ ಫ್ಲ್ಯಾಟ್‌ನಿಂದ 500 ರೂ. ನೋಟುಗಳ ಕಂತೆಗಳನ್ನು ಸುರಿದಿರುವ ಘಟನೆ ಒಡಿಶಾದಲ್ಲಿ ನಡೆದಿದೆ.

ಒಡಿಶಾದ ಗ್ರಾಮೀಣಾಭಿವೃದ್ಧಿ ಇಲಾಖೆಯ ಮುಖ್ಯ ಇಂಜಿನಿಯರ್‌ ಬೈಕುಂಠ ನಾಥ್ ಸಾರಂಗಿ ಎಂಬವರ ಫ್ಲ್ಯಾಟ್‌ ಮೇಲೆ ಒಡಿಶಾ ವಿಚಕ್ಷಣಾ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಧಿಕಾರಿಗಳು ತಮ್ಮ ಫ್ಲ್ಯಾಟ್‌ಗೆ ಬರುತ್ತಿರುವುದನ್ನು ಕಂಡ ಇಂಜಿನಿಯರ್ ನೋಟುಗಳ ಕಂತೆಯನ್ನು ತಮ್ಮ ಫ್ಲ್ಯಾಟ್‌ನಿಂದ ಹೊರಗೆ ಸುರಿದಿದ್ದಾರೆ.

ಸಾರಂಗಿ ಅವರು ತಮ್ಮ ಆದಾಯಕ್ಕೂ ಮೀರಿದ ಸಂಪತ್ತನ್ನು ಹೊಂದಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಸಾರಂಗಿ ಅವರಿಗೆ ಸಂಬಂಧಿಸಿದ ನಿವಾಸಿಗಳು ಮತ್ತು ಇತರ ಏಳು ಸ್ಥಳಗಳ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಸುಮಾರು 2.1 ಕೋಟಿ ರೂ. ನಗದನ್ನು ವಶಕ್ಕೆ ಪಡೆದಿದ್ದಾರೆ.

Advertisements

ವಿಚಕ್ಷಣಾ ಅಧಿಕಾರಿಗಳು ತನ್ನ ಫ್ಲ್ಯಾಟ್‌ಗೆ ಧಾವಿಸುತ್ತಿರುವುದನ್ನು ಗಮನಿಸಿದ ಸಾರಂಗಿ, 500 ರೂ. ಮುಖಬೆಲೆಯ ನೋಟುಗಳ ಕಂತೆಗಳನ್ನು ಕಿಟಕಿಯಿಂದ ಹೊರಹಾಕಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಶಕ್ಕೆ ಪಡೆದ 2.1 ಕೋಟಿ ರೂ. ಹಣದಲ್ಲಿ 1 ಕೋಟಿ ರೂ. ನಗದು ಸಾರಂಗಿ ಅವರ ಭುವನೇಶ್ವರ ಫ್ಲ್ಯಾಟ್‌ನಲ್ಲಿ ಪತ್ತೆಯಾಗಿದೆ. ಉಳಿದ 1.1 ಕೋಟಿ ರೂ. ಹಣವನ್ನು ಅಂಗುಲ್‌ನಲ್ಲಿರುವ ಸಾರಂಗಿ ಅವರ ಮತ್ತೊಂದು ನಿವಾಸದಿಂದ ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X