ವಿಜಯಪುರ | ರೈಲ್ವೆ ನಿಲ್ದಾಣಕ್ಕೆ ಅಂಬೇಡ್ಕರ್ ಹೆಸರಿಡಲು ಆಗ್ರಹ

Date:

Advertisements

“ಡಾ ಬಿ .ಆರ್ ಅಂಬೇಡ್ಕರರು ವಿಜಯಪುರ ನಗರಕ್ಕೆ ಭೇಟಿ ನೀಡಿ ತಮ್ಮ ಹೆಜ್ಜೆ ಗುರುತುಗಳನ್ನು ಬಿಟ್ಟುಹೋಗಿದ್ದಾರೆ. ಸಮಗ್ರ ಹರಿಜನರನ್ನು ಒಂದುಗೂಡಿಸಿ ವಿಜಯಪುರದ ರಾಣಿ ಬಗೀಚಿನಲ್ಲಿ ಹರಿಜನರ ಸಮ್ಮೇಳನವನ್ನು ಉದ್ದೇಶಿಸಿ ಈ ಹಿಂದೆ ಅಂಬೇಡ್ಕರ್ ಅವರು ಮಾತಾಡಿದ್ದರು. ಈ ಐತಿಹಾಸಿಕ ಹಾಗೂ ರೋಮಾಂಚನಕಾರಿ ಕ್ಷಣವಾಗಿದ್ದು, ವಿಜಯಪುರ ರೈಲ್ವೆ ನಿಲ್ದಾಣಕ್ಕೆ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ನಾಮಕರಣ ಮಾಡಬೇಕು” ಎಂದು ಡಿ ಎಸ್ ಎಸ್ ಮುಖಂಡ ಚೆನ್ನು ಕಟ್ಟಿಮನಿ ಒತ್ತಾಯಿಸಿದರು. 

ವಿಜಯಪುರ ಪಟ್ಟಣದ ದಲಿತ ಸಂಘರ್ಷ ಸಮಿತಿಯು ರೈಲ್ವೆ ನಿಲ್ದಾಣಕ್ಕೆ ಡಾ. ಬಿ. ಆರ್ ಅಂಬೇಡ್ಕರ್ ನಾಮಕರಣ ಮಾಡುವಂತೆ ಒತ್ತಾಯಿಸಿ ಜಿಲ್ಲಾಧಿಕಾರ ಮೂಲಕ ಕೇಂದ್ರದ ರೈಲ್ವೆ ಸಚಿವರಿಗೆ ಮಾನವಿ ಸಲ್ಲಿಸಿ ಮಾತನಾಡಿದರು.

“ಬೀಳಗಿಯ ಸೋಮನಗೌಡ ಫಕೀರಗೌಡ ಪಾಟೀಲ್ ಇವರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯಪುರ ನ್ಯಾಯಾಲಯದಲ್ಲಿ ಅವರ ಪರವಾಗಿವಾದ ಮಾಡಿ ಅವರಿಗೆ ಆಗಬೇಕಾಗಿದ್ದ ಗಲ್ಲು ಶಿಕ್ಷೆಯನ್ನು ತಪ್ಪಿಸಿದ್ದು, ಅವರ ಕಾನೂನು ಪಾಂಡಿತ್ಯವನ್ನು ಪ್ರತಿಯೊಬ್ಬರು ಕೂಡ ಮೆಚ್ಚಲೇಬೇಕಾದ ವಿಷಯವಂತಹದ್ದು. ಇಂತಹ ಹತ್ತು ಹಲವಾರು ಐತಿಹಾಸಿಕ ಕ್ಷಣಗಳಿಗೆ ವಿಜಯಪುರ ನಗರ ಸಾಕ್ಷಿಯಾಗಿದೆ. ಇಂಥಹ ಐತಿಹಾಸಿಕ ಘಟನೆಗಳಿಂದ ತಳಸಮುದಾಯದ ಯುವಕರು ಪ್ರೇರೇಪಣೆಗೊಳ್ಳುವುದರಲ್ಲಿ ಸಂದೇಹವಿಲ್ಲ” ಎಂದರು.

Advertisements

“ಈ ಎಲ್ಲಾ ಕಾರಣಗಳಿಂದ, ಬಾಬಾ ಸಾಹೇಬರು ಬಂದು ಹೋದ ಹೆಜ್ಜೆಗಳ ನೆನಪಿಗೋಸ್ಕರ ವಿಜಯಪುರ ರೈಲ್ವೆ ನಿಲ್ದಾಣಕ್ಕೆ ಮಹಾಮಾನತಾವಾದಿ, ಸಂವಿಧಾನ ಶಿಲ್ಪಿ ಡಾ. ಬಿ. ಆರ್ ಅಂಬೇಡ್ಕರ್ ಅವರ ಹೆಸರನ್ನು ನಾಮಕರಣ ಮಾಡಬೇಕು. ಇದು ವಿಜಯಪುರ ಜಿಲ್ಲೆಯ ದಲಿತ ಸಮುದಾಯದ ಅಭಿಪ್ರಾಯವಾಗಿದೆ” ಎಂದು ಹೇಳಿದರು.

ಮನವಿ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿ ಮಹಾ ಒಕ್ಕೂಟ ಸಂಸ್ಥಾಪಕ ಅಧ್ಯಕ್ಷ ಪರಶುರಾಮ್ ಲಂಬು, ಮಲ್ಲು ಜಲಗಾರ ಸೇರಿದಂತೆ ದಲಿತ ಸಂಘರ್ಷ ಸಮಿತಿಯ ಮುಖಂಡರು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X