ಮುಂಗಾರಿನ ಆರ್ಭಟ; ಲಕ್ಷಾಂತರ ಮೌಲ್ಯದ ಬೆಳೆ ನಾಶ, ರೈತರು ಕಂಗಾಲು

Date:

Advertisements

ಕಳೆದ ಕೆಲ ದಿನಗಳಿಂದ ಮುಂದುವರೆದ ಮುಂಗಾರಿನ ಅಬ್ಬರಕ್ಕೆ ರಾಜ್ಯದ ರೈತರು ತತ್ತರಿಸಿದ್ದಾರೆ. ಬೆಳೆದ ಭತ್ತ, ಜೋಳ, ರಾಗಿ, ಹತ್ತಿ, ಬಾಳೆ, ತಂಬಾಕು ಸೇರಿದಂತೆ ಹಲವು ಪ್ರಮುಖ ಬೆಳೆಗಳು ನೀರು ಪಾಲಾಗಿವೆ. ಸಾಲ ಮಾಡಿಕೊಂಡು ಈಗಾಗಲೇ ಸಂಕಷ್ಟದಲ್ಲಿರುವ ಕೃಷಿ ವಲಯ ಈಗ ಮಳೆಯಿಂದ ಮತ್ತೆ ಕಂಗೆಟ್ಟಿದೆ.

ಬಳ್ಳಾರಿ ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಕಮಲನಗರ ತಾಲೂಕಿನ ಬಾಲೂರು ಗ್ರಾಮದಲ್ಲಿ ಕೃಷಿ ಜಮೀನುಗಳು ಜಲಾವೃತಗೊಂಡಿವೆ. ಲಕ್ಷಾಂತರ ಮೌಲ್ಯದ ಬೆಳೆ ನಾಶವಾಗಿದೆ.

ಶೇಂಗಾ, ಬೆಂಡೆಕಾಯಿ, ಬದನೆಕಾಯ, ಕಬ್ಬು ಸೇರಿದಂತೆ ಹಲವು ಬೆಳೆಗಳು ನಾಶವಾಗಿದೆ. ಜಮೀನಿನಲ್ಲಿ 2 ರಿಂದ 3 ಅಡಿ ನೀರು ನಿಂತಿದ್ದು, ಶೇಂಗಾ ಬಹುತೇಕ ಕೊಳೆತು ಹೋಗಿದೆ. ಲಕ್ಷಾಂತರ ರೂ. ಖರ್ಚು ಮಾಡಿ ಬೆಳೆದ ಬೆಳೆಗಳಿಗೆ ಮಳೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ.

Advertisements
image 4 3

ಅದೇ ಪಟ್ಟಣದ ಇಂದ್ರಾನಗರ ಕಾಲೋನಿಯ ಹಲವು ಮನೆಗಳಿಗೆ ನೀರು ನುಗ್ಗಿರುವ ಪರಿಣಾಮ ಮನೆಯಲ್ಲಿದ್ದ ಅಕ್ಕಿ, ಈರುಳ್ಳಿ ಸೇರಿದಂತೆ ಧವಸ ದಾನ್ಯಗಳು ನೀರು ಪಾಲಾಗಿದೆ. ಮನೆಯಂಗಳಗಳು ಕೆರೆಯಾಗಿ ಮಾರ್ಪಟ್ಟಿವೆ.

ಚಿಕ್ಕಬಳ್ಳಾಪುರದಲ್ಲೂ ಮಳೆ ತನ್ನ ಅವಾಂತರ ಮುಂದುವರೆಸಿದೆ. ಸಾಲ ಮಾಡಿ ಒಂದುವರೆ ಎಕರೆಯಲ್ಲಿ ದಾಳಿಂಬೆ ಬೆಳೆದು, ಉತ್ತಮ ಇಳುವರಿ ನಿರೀಕ್ಷೆಯಲ್ಲಿದ್ದ ರೈತ ಕ್ಯಾತಪ್ಪ ಆತಂಕ ಎದುರಿಸುತ್ತಿದ್ದಾರೆ. ಕಳೆದ ವಾರ ಸುರಿದ ಗಾಳಿ ಮಳೆಗೆ ದಾಳಿಂಬೆ ಗಿಡಗಳಲ್ಲಿದ್ದ ಹೂಗಳೆಲ್ಲವೂ ನೆಲಕ್ಕೆ ಉದುರಿ ಮಣ್ಣು ಪಾಲಾಗಿವೆ. ಕಳೆದ ವರ್ಷ 12 ಟನ್ ಇಳುವರಿ ಬಂದಿತ್ತು. ಈ ಬಾರಿಯೂ 12 ರಿಂದ 13 ಟನ್ ಇಳುವರಿ ಬರಲಿದೆ. ಒಳ್ಳೆಯ ರೇಟ್ ಸಿಕ್ರೆ ಲಕ್ಷಾಂತರ ರೂಪಾಯಿ ಆದಾಯವೂ ಬರಲಿದೆ ಎಂದು ಸಂತಸದಲ್ಲಿದ್ದರು ರೈತ ಕ್ಯಾತಪ್ಪ. ಆದರೆ ಒಂದು ಗಾಳಿ ಸಹಿತ ಮಳೆ ಅವರ ಆಸೆಗಳನ್ನೆಲ್ಲಾ ಕಮರಿಸಿದೆ. ದಾಳಿಂಬೆ ಗಿಡಗಳಲ್ಲಿದ್ದ ಹೂಗಳೆಲ್ಲವೂ ಮಣ್ಣು ಪಾಲಾಗಿ ಈಗ ಕೇವಲ 3-4 ಟನ್ ಮಾತ್ರ ಇಳುವರಿ ಬಂದರೆ ಹೆಚ್ಚು ಎಂದು ರೈತ ನೋವು ವ್ಯಕ್ತಪಡಿಸಿದ್ದಾರೆ.

WhatsApp Image 2025 05 31 at 12.49.15 PM

ಮೈಸೂರಿನ ಹುಣಸೂರು ತಾಲೂಕಿನಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಕೊಳವಿಗೆಯ ರೈತ ನಾಗೇಶ್‌ ಅವರ ತಂಬಾಕು ಬೆಳೆ ನಾಶವಾಗಿದೆ. ತಗ್ಗು ಪ್ರದೇಶದ ಹೊಲದಲ್ಲಿ ನೀರು ನಿಂತು ಬೆಳೆ ಕೊಳೆಯುತ್ತಿದೆ. ಕಟಾವಿಗೆ ಬಂದ ತಂಬಾಕು ಹಳದಿ ಬಣ್ಣಕ್ಕೆ ತಿರುಗಿದೆ. ಇದರಿಂದ ಬೆಳೆ ನಷ್ಟದ ಭೀತಿಯಲ್ಲಿದ್ದಾರೆ ರೈತ ನಾಗೇಶ್.‌

ಎಕರೆಕೆ 1 ಲಕ್ಷ ಖರ್ಚು ಮಾಡಿ 5 ಎಕರೆಯಲ್ಲಿ ತಂಬಾಕು ಬೆಳೆದಿದ್ದೆ. ಈ ಬಾರಿ ಅವಧಿಗಿಂತ ಮೊದಲೇ ಮುಂಗಾರು ಆರಂಭವಾಗಿ ಬೆಳೆಯೆಲ್ಲಾ ನೀರುಪಾಲಾಗಿದೆ. ವಾಣಿಜ್ಯ ಬೆಳೆಯಾಗಿರುವುದರಿಂದ ವಿಮೆಯೂ ಇಲ್ಲ.  ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ ಎಂದು ಕಂಗಾಲಾಗಿದ್ದಾರೆ ನಾಗೇಶ್.‌

WhatsApp Image 2025 05 31 at 1.47.12 PM
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X