ಕೆ ಆರ್‌ ಪೇಟೆ | ಜಯಕುಮಾರನ ಸಜೀವ ದಹನ; ಪೊಲೀಸರ ಕರ್ತವ್ಯಲೋಪದ ವಿರುದ್ಧ ಪ್ರತಿಭಟನೆ

Date:

Advertisements

ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ಕತ್ರಘಟ್ಟ ಗ್ರಾಮದ ಪರಿಶಿಷ್ಟ ಜನಾಂಗದ ಜಯಕುಮಾರನ ಸಜೀವ ದಹನ ಹಾಗೂ ಪೊಲೀಸರ ಕರ್ತವ್ಯಲೋಪ ಖಂಡಿಸಿ ದಲಿತ ಸಂಘಟನೆಗಳ ಸಮನ್ವಯ ಸಮಿತಿಯಿಂದ ಶನಿವಾರ ಬೆಳಿಗ್ಗೆ ಪ್ರತಿಭಟನೆ ನಡೆಸಲಾಗಿದೆ.

ಪ್ರತಿಭಟನೆ ಬಳಿಕ ಪ್ರತಿಭಟನಾಕಾರರು, ತಪ್ಪಿತಸ್ಥನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮದ್ದೂರು ತಾಲೂಕಿನ ತಹಶೀಲ್ದಾರ್ ಮೂಲಕ ಗೃಹಮಂತ್ರಿ ಜಿ ಪರಮೇಶ್ವರ್‌ ಅವರಿಗೆ ಮನವಿ ಸಲ್ಲಿಸಿ, “ದಲಿತ ಜಯಕುಮಾರನನ್ನು ಅದೇ ಗ್ರಾಮದ ರೌಡಿಶೀಟರ್ ಅನಿಲ್‌ಕುಮಾರನು ಸಜೀವ ದಹನ ಮಾಡಿ ಅಮಾನುಷವಾಗಿ ಕೊಲೆಗೈದಿರುವುದು ಖಂಡನೀಯ. ಮೃತ ಜಯಕುಮಾರನು ಮೇ 15ರಂದು, ʼಅನಿಲ್‌ ಕುಮಾರನಿಂದ ನನಗೆ ಪ್ರಾಣ ಭಯವಿದೆ, ನನಗೆ ರಕ್ಷಣೆ ನೀಡಿʼ ಎಂದು ಕೆ ಆರ್ ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರೂ ಪೊಲೀಸರು ಯಾವುದೇ ಕ್ರಮವಹಿಸದ ಕಾರಣ ಅಮಾಯಕ ಜಯಕುಮಾರನ ಕೊಲೆಗೆ ಪೊಲೀಸರೂ ಕೂಡ ನೇರ ಹೊಣೆಗಾರರಾಗಿದ್ದಾರೆ” ಎಂದು ಆರೋಪಿಸಿದರು.

“ಮೇ 17 ಘಟನೆ ನಡೆದಿದ್ದು, ಕೊಲೆ ಮಾಡಿರುವುದು ಕಂಡ ಬಂದರೂ, ಡಿವೈಎಸ್‌ಪಿ ಚಲುವರಾಜು, ಪಿಐ ಆನಂದೇಗೌಡ, ಪಿಎಸ್‌ಐ ಸುಬ್ಬಯ್ಯ, ಮುಖ್ಯಪೇದೆ ವೈರಮುಡಿಗೌಡ ಇವರುಗಳು ಕೊಲೆಗಾರರನ್ನು ರಕ್ಷಿಸಲು ಸದರಿ ಪ್ರಕರಣವನ್ನು ಕೊಲೆ ಪ್ರಕರಣವೆಂದು ದಾಖಲಿಸುವ ಬದಲು ಆತ್ಮಹತ್ಯೆ ಪ್ರಕರಣವೆಂದು ದಾಖಲು ಮಾಡಿ, ಕರ್ತವ್ಯಲೋಪವೆಸಗಿದ್ದಾರೆ. ಈ ಮೂಲಕ ಪೊಲೀಸ್ ಅಧಿಕಾರಿಗಳು ದಲಿತ ವಿರೋಧಿ ನೀತಿಗಳನ್ನು ಸಾಬೀತುಪಡಿಸಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisements
ಕೆ ಆರ್‌ ಪೇಟೆ ಪ್ರತಿಭಟನೆ 1

“ಜಯಕುಮಾರನ ಹೆಂಡತಿ ಓದು-ಬರಹ ತಿಳಿಯದವರಾಗಿದ್ದು, ಸಾಕ್ಷರತೆಯಿಂದ ಸಹಿ ಮಾತ್ರ ಕಲಿತಿದ್ದಾರೆ. ಇದನ್ನು ಅರಿತ ಪೊಲೀಸರು ಆ ಹೆಣ್ಣುಮಗಳಿಗೆ ಒತ್ತಡ ಹಾಕಿ ಸಹಿ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೇ 20 ರಂದು ಪೊಲೀಸರು ಸುಳ್ಳು ಪ್ರಕರಣ ದಾಖಲಿಸಿರುವ ವಿಷಯ ಗೊತ್ತಾಗಿ ನಾಗಮಂಗಲ ಡಿವೈಎಸ್‌ಪಿ ಅವರಿಗೆ ಕೊಲೆ ಪ್ರಕರಣ ದಾಖಲಿಸಲು ದೂರು ಸಲ್ಲಿಸಲಾಗಿದ್ದರೂ ಕೂಡ ಈವರೆಗೆ ಯಾವುದೇ ಕ್ರಮ ಜರುಗಿಸಿಲ್ಲ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಕಾರ್ಖಾನೆ ವಿಸ್ತರಣೆ ವಿರೋಧಿಸಿ ನಡೆಯುತ್ತಿರುವ ಗೋಡೆ ಬರಹ ಕ್ಯಾಂಪೇನ್‌ಗೆ ಪೊಲೀಸರ ವಿರೋಧ

“ಕೊಲೆಯಾದ ಜಯಕುಮಾರನ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ₹50 ಲಕ್ಷ ಪರಿಹಾರ ನೀಡಬೇಕು. ಮೃತನ ಪತ್ನಿಗೆ ಸರ್ಕಾರಿ ನೌಕರಿ ನೀಡಬೇಕು. ಕೊಲೆಮಾಡಿರುವ ರೌಡಿಶೀಟರ್ ಆನಿಲ್‌ಕುಮಾರ್ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡು ಆತನಿಗೆ ಕಠಿಣ ಗಲ್ಲುಶಿಕ್ಷೆ ನೀಡಬೇಕು. ಕೊಲೆ ಮಾಡಿ ರೌಡಿಶೀಟರ್ ಅನಿಲ್‌ ಕುಮಾರ್‌ನನ್ನ ರಕ್ಷಿಸಲು ಆತ್ಮಹತ್ಯೆ ಪ್ರಕರಣ ದಾಖಲಿಸಿ ಕರ್ತವ್ಯಲೋಪ ಎಸಗಿರುವ ಡಿವೈಎಸ್‌ಪಿ ಚಲುವರಾಜು, ಪಿ.ಐ.ಆನಂದೇಗೌಡ, ಪಿ.ಎಸ್.ಐ ಸುಬ್ಬಯ್ಯ, ಮುಖ್ಯ ಪೇದೆ ವೈರಮುಡಿಗೌಡ ಇವರುಗಳನ್ನು ಕೂಡಲೇ ಅಮಾನತುಗೊಳಿಸಬೇಕು. ಆತ್ಮಹತ್ಯೆಯ ಪ್ರಕರಣವನ್ನು ಕೈಬಿಟ್ಟು ಕೊಲೆ ಪ್ರಕರಣ ದಾಖಲಿಸಿ ಜಯಕುಮಾರನ ಸಾವಿಗೆ ನ್ಯಾಯ ದೊರಕಿಸಿಕೊಡಬೇಕು” ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

Download Eedina App Android / iOS

X