ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿರುವ ಯು.ಟಿ.ಖಾದರ್ ಅವರಿಗೆ ‘ಇಂಡಿಯನ್ ಕಾನ್ಫರೆನ್ಸ್ ಆಫ್ ಇಂಟೆಲೆಕ್ಚುವಲ್ಸ್’ ಸಂಸ್ಥೆಯ ವತಿಯಿಂದ ನೀಡಲಾಗುವ’ಗ್ರೇಟ್ ಸನ್ ಆಫ್ ಇಂಡಿಯಾ’ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ಭಾನುವಾರ ಹೊಸದಿಲ್ಲಿಯ ಇಂಡಿಯಾ ಇಂಟರ್ ನ್ಯಾಷನಲ್ ಸೆಂಟರ್ ನಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಖಾದರ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಇಂಡಿಯನ್ ಕಾನ್ಫರೆನ್ಸ್ ಆಫ್ ಇಂಟೆಲೆಕ್ಚುವಲ್ಸ್ ಸಂಸ್ಥೆಯ ಅಧ್ಯಕ್ಷ, ಒಡಿಶಾ ಹೈಕೋರ್ಟ್ ನಿವೃತ್ತ ಮುಖ್ಯ ನ್ಯಾಯಾಧೀಶ ಹಾಗೂ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾ. ಗೋಪಾಲ್ ಗೌಡ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಛತ್ತೀಸ್ಘಡ ರಾಜ್ಯಪಾಲ ಬಿಸ್ವ ಭೂಷಣ ಹರಿಚರಣ್ ಹಾಗೂ ಇತರ ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
‘ಇಂಡಿಯನ್ ಕಾನ್ಫರೆನ್ಸ್ ಆಫ್ ಇಂಟೆಲೆಕ್ಚುವಲ್ಸ್’ ಸಂಸ್ಥೆಯಿಂದ ನೀಡಲಾಗುವ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಈ ಹಿಂದೆ ಹಲವು ಖ್ಯಾತ ನ್ಯಾಯಾಧೀಶರು, ಕಲಾವಿದರು, ಉದ್ಯಮಿಗಳು, ವಿಜ್ಞಾನಿಗಳು ಮತ್ತಿತರ ಹಿರಿಯ ಸಾಧಕರಿಗೆ ಹಾಗೂ ಬುದ್ಧಿಜೀವಿಗಳಿಗೆ ನೀಡಲಾಗಿದೆ.