ತುಮಕೂರು | ಆರ್ಥಿಕ- ಸಾಮಾಜಿಕ ಅಸಮಾನತೆ ತೊಲಗಿಸಲು ಸಿಐಟಿಯು ಹೋರಾಟ : ಸೈಯದ್ ಮುಜೀಬ್

Date:

Advertisements

ಸೆಂಟರ್ ಆಫ್ ಇಂಡಿಯಾನ್ ಟೇಡ್ ಯೂನಿಯನ್ಸ್ ( ಸಿಐಟಿಯು ) ಕಳೆದ 55 ವರ್ಷಗಳಿಂದ ನಿರಂತರವಾಗಿ ಸಮಾಜದಲ್ಲಿ ಆರ್ಥಿಕ ಮತ್ತು ಸಾಮಾಜಿಕ ಸಮಾನತೆಗಾಗಿ ಸಂಘಟಿತ – ಅಸಂಘಟಿತ ಕಾರ್ಮಿಕರ ಹಕ್ಕು ಭಾದ್ಯತೆಗಳಿಗಾಗಿ ನಿರಂತರವಾಗಿ ಶ್ರಮಿಸುತ್ತಾ ಬಂದಿರುತ್ತದೆ ಮತ್ತು ಮುಂದೆ ಸಹ ಇದಕ್ಕೆ ಕಟಿಬದ್ದವಾಗಿ ದುಡಿಯಲಿದೆ ಎಂದು ಸಿಐಟಿಯು ಜಿಲ್ಲಾ ಅಧ್ಯಕ್ಷ ಸೈಯದ್ ಮುಜೀಬ್ ತಿಳಿಸಿದರು.

ತುಮಕೂರು ನಗರದ ಜನ ಚಳುವಳಿ ಕೇಂದ್ರದಲ್ಲಿ ಸಿಐಟಿಯು ಸಂಸ್ಥಪನೆಯ 55 ನೇ ವರ್ಷಚಾರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಮಾಜದಲ್ಲಿ ಬೇಳೆಯುತ್ತಿರುವ ಅರ್ಥಿಕ – ಸಾಮಾಜಿಕ ಅಸಮಾನತೆಗಳು ಆರೋಗ್ಯಕರ ಸಮಾಜದ ಲಕ್ಷಣವಲ್ಲ ಎಂದು ಅವರು ಕಳವಳ ವ್ಯಕ್ತಪಡಿಸಿದರು. 

ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಉಮೇಶ್   ಮಾತನಾಡಿ ದುಡಿವ ಜನರ ಹಿತರಕ್ಷಣೆಯನ್ನು ಸರ್ಕಾರಗಳು ಮರೆತು ಉಳ್ಳವರ ಪರ ನೀತಿಗಳನ್ನು ಜಾರಿಮಾಡುತ್ತಿರುವುದನ್ನು ಎಲ್ಲಾ ದುಡಿವ ಜನ ಐಕ್ಯತೆಯಿಂದ ಹಿಮ್ಮೆಟ್ಟಿಸಲು ಅಗತ್ಯ ಪ್ರತಿರೋಧ ಕಟ್ಟುವಲ್ಲಿ ಸಿಐಟಿಯು ಮುಂಚೂಣಿಯಲ್ಲಿದೆ ಎಂದರು.

Advertisements

ಮನೆ ಕೆಲಸಗಾರರ ಸಂಘದ ಜಿಲ್ಲಾ ಕಾರ್ಯದರ್ಶಿ ಪಲ್ಲವಿ ಅವರು ಮಾತನಾಡಿ ಸರ್ಕಾರಗಳು ಮನೆ ಕೆಲಸಗಾರರಿಗೆ ಪಿಂಚಣಿ ಯೋಜನೆ, ಅನಾರೋಗ್ಯ ವೆಚ್ಚ ಭರಿಸು ಯೋಜನೆ, ಮಕ್ಕಳ ಶಿಕ್ಷಣಕ್ಕೆ ಸಹಾಯಕವಾಗುವಂತೆ ವಿಧ್ಯಾರ್ಥಿ ವೇತನಕ್ಕೆ ಸಂಘ ನಡೆಸುವ ಹೋರಾಟಕ್ಕೆ ಕೈ ಜೋಡಿಸುವಂತೆ ಕೊರಿದರು. 

ಜನವಾದಿ ಮಹಿಳಾ ಸಂಘಟನೆ ಜಿಲ್ಲಾ ಸಂಚಾಲಕಿ ಟಿ.ಆರ್ ಕಲ್ಪನಾ , ಕಟ್ಟಡ ಕಾರ್ಮಿಕ ಸಂಘದ ಕಲೀಲ್.ಸಿಐಟಿಯು ಜಿಲ್ಲಾ ಖಜಾಂಚಿ ಎ . ಲೊಕೇಶ್, ಡಿಸಾ ಕಾರ್ಮಿಕ ಸಂಘ ಷಣ್ಮಖಪ್ಪ, ಪಿ. ಎಫ್ . ಪಿಂಚಣಿದಾರರ ಸಂಘ ಸಂಚಾಲಕ ಟಿ.ಜಿ. ಶಿವಲಿಂಗಯ್ಯ, ಅವರು ಮಾತನಾಡಿದರು. 

ಅರಂಭದಲ್ಲಿ ಎನ್. ಕೆ ಸುಬ್ರಮಣ್ಯ ಸ್ವಾಗತಿಸಿ. ಮಧುಸೂದನ್ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X