ಮುಂಗಾರು ಪೂರ್ವ ಮಳೆ; ರಾಜ್ಯದಲ್ಲಿ 71 ಮಂದಿ ಸಾವು

Date:

Advertisements

ಏಪ್ರಿಲ್‌ನಿಂದ ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಸುರಿದಿದ್ದು, 71 ಮಂದಿ ಮೃತಪಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಚೇರಿ ಶನಿವಾರ ತಿಳಿಸಿದೆ. 2025ರ ಮುಂಗಾರು ಪೂರ್ವ ಮಳೆಯು ಕಳೆದ 125 ವರ್ಷಗಳಲ್ಲಿ ಮುಂಗಾರು ಪೂರ್ವ ಋತುಗಳಲ್ಲಿ ಮತ್ತು ಮೇ ತಿಂಗಳಲ್ಲಿ ದಾಖಲಾದ ಅತಿ ಹೆಚ್ಚು ಮಳೆಯಾಗಿದೆ ಎಂದೂ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

ರಾಜ್ಯದಲ್ಲಿ ಸಾಮಾನ್ಯವಾಗಿ ಮೇ ತಿಂಗಳಲ್ಲಿ 74 ಮಿ.ಮೀ ಮಳೆಯಾಗುತ್ತದೆ. ಆದರೆ 2025ರ ಮೇ ತಿಂಗಳಲ್ಲಿ 219 ಮಿ.ಮೀ ಮಳೆಯಾಗಿದೆ. ಇದು ಸರಾಸರಿ ಸಾಮಾನ್ಯ ಮಳೆಗಿಂತ ಶೇಕಡ 197ರಷ್ಟು ಹೆಚ್ಚಾಗಿದೆ. ಹಾಗೆಯೇ 2025ರ ಮುಂಗಾರು ಪೂರ್ವ ಅವಧಿಯಲ್ಲಿ (ಮಾರ್ಚ್ 1ರಿಂದ ಮೇ 31ರವರೆಗೆ) ರಾಜ್ಯದಲ್ಲಿ ಸಾಮಾನ್ಯವಾಗಿ 115 ಮಿ.ಮೀ ಮಳೆಯಾಗುತ್ತದೆ. ಆದರೆ 286 ಮಿ.ಮೀ ಮಳೆಯಾಗಿದೆ. ಸರಾಸರಿ ಮಳೆಗಿಂತ ಶೇಕಡ 149ರಷ್ಟು ಹೆಚ್ಚು ಮಳೆಯಾಗಿದೆ ಎಂದು ವರದಿ ಹೇಳಿದೆ.

ಇದನ್ನು ಓದಿದ್ದೀರಾ? ಕೇರಳ ಕರಾವಳಿಗೆ ಮುಂಗಾರು ಪ್ರವೇಶ; ಮೂರು ದಿನ ಮುನ್ನವೇ ಮಳೆಗಾಲ ಆರಂಭ

Advertisements

ಎಲ್ಲಾ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮತ್ತು ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗಿದೆ. ಗುಡುಗು, ಬಿರುಗಾಳಿ ಸಹಿತ ಮಳೆಯಾಗಿದೆ. ಏಪ್ರಿಲ್ 1ರಿಂದ ಮೇ 31ರವರೆಗಿನ ಅವಧಿಯಲ್ಲಿ ಸಿಡಿಲಿನಿಂದ 48 ಮಂದಿ ಸಾವನ್ನಪ್ಪಿದ್ದಾರೆ. ಮರಗಳು ಬಿದ್ದು ಒಂಬತ್ತು ಮಂದಿ, ಮನೆ ಕುಸಿದು ಐವರು, ನೀರಿನಲ್ಲಿ ಮುಳುಗಿ ನಾಲ್ವರು, ಭೂಕುಸಿತದಿಂದ ನಾಲ್ವರು ಮತ್ತು ವಿದ್ಯುತ್ ಆಘಾತದಿಂದ ಒಬ್ಬರು ಸಾವನ್ನಪ್ಪಿದ್ದಾರೆ. ಒಟ್ಟು 71 ಮಂದಿ ಸಾವನ್ನಪ್ಪಿದ್ದು ಮೃತರ ಕುಟುಂಬಸ್ಥರಿಗೆ ಐದು ಲಕ್ಷ ರೂಪಾಯಿ ಪರಿಹಾರ ವಿತರಿಸಲಾಗಿದೆ ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

702 ಪ್ರಾಣಿಗಳು ಮೃತಪಟ್ಟಿದ್ದು, ಈ ಪೈಕಿ 698 ಪ್ರಾಣಿಗಳ ಸಾವಿಗೆ ನಷ್ಟ ಪರಿಹಾರ ವಿತರಿಸಲಾಗಿದೆ. 2,068 ಮನೆಗಳಿಗೆ ಹಾನಿಯಾಗಿವೆ. ಈ ಪೈಕಿ 1,926 ಮನೆ ಹಾನಿಗೆ ಈಗಾಗಲೇ ಪರಿಹಾರ ವಿತರಿಸಲಾಗಿದೆ. ಈ ಪೈಕಿ 75 ಮನೆಗಳು ಸಂಪೂರ್ಣವಾಗಿ ಹಾನಿಗೊಂಡಿದ್ದು, 1993 ಮನೆಗಳಿಗೆ ಭಾಗಶಃ ಹಾನಿಯಾಗಿದೆ ಎಂದು ಸಿಎಂ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

ಒಟ್ಟು 15,378.32 ಹೆಕ್ಟೇರ್ ಬೆಳೆಗಳು ಹಾನಿಗೊಳಗಾಗಿವೆ. ಈ ಪೈಕಿ 11915.66 ಹೆಕ್ಟೇರ್ ಕೃಷಿ ಬೆಳೆಗಳು, 3462.66 ಹೆಕ್ಟೇರ್ ತೋಟಗಾರಿಕೆಯಾಗಿದೆ. ಬೆಳೆ ಹಾನಿಯ ವಿವರಗಳನ್ನು ಒದಗಿಸಲು ವ್ಯವಸ್ಥೆ ಮಾಡಲಾಗಿದ್ದು, ಪರಿಹಾರ ಪಾವತಿ ಪ್ರಕ್ರಿಯೆಯು ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ವರ್ಷ ನಿರೀಕ್ಷೆಗೂ ಮುನ್ನವೇ ಮುಂಗಾರು ಕೇರಳ ಕರಾವಳಿಯನ್ನು ಪ್ರವೇಶಿಸಿದೆ. ಈ ಹಿಂದೆ ಮೇ 27ರ ವೇಳೆಗೆ ಕೇರಳದಲ್ಲಿ ಮುಂಗಾರು ಆರಂಭವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಹೇಳಿತ್ತು. ಆದರೆ ಇದೀಗ ನಿರೀಕ್ಷೆಗೂ ಮೂರು ದಿನ ಮುನ್ನವೇ ಮಾನ್ಸೂನ್ ಆರಂಭವಾಗಿದೆ. ಕರ್ನಾಟಕದಲ್ಲೂ ಮುಂಗಾರು ಆರ್ಭಟಿಸುತ್ತಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X