ಗದಗ | ನಟ ಕಮಲ್ ಹಾಸನ್ ಕನ್ನಡಿಗರಿಗೆ ಕ್ಷಮೆಯಾಚಿಸಬೇಕು: ಕರವೇ ಆಗ್ರಹ

Date:

Advertisements

“ಕನ್ನಡಿಗರ ಭಾವನೆಗಳಿಗೆ ಧಕ್ಕೆ ತರುವಂತೆ ‘ತಮಿಳು ಭಾಷೆಯಿಂದ ಕನ್ನಡ ಭಾಷೆಯು ಉಗಮವಾಗಿದೆ’ ಎಂದು ಹೇಳಿಕೆ ನೀಡಿದ ತಮಿಳು ನಟ, ರಾಜಕಾರಣಿ ಕಮಲ್ ಹಾಸನ್ ಈ ಕೂಡಲೇ ಕರ್ನಾಟಕದ ಜನತೆಗೆ ಕ್ಷಮೆಯಾಚಿಸಬೇಕು” ಎಂದು ಕರವೇ ಎಚ್ ಅಬ್ಬಿಗೇರಿ ಆಗ್ರಹಿಸಿದರು.

ಗದಗ ಪಟ್ಟಣದ ಟಿಪ್ಪು ವೃತ್ತದಲ್ಲಿ ಕಮಲ್ ಹಾಸನ್ ಅವರ ಹೇಳಿಕೆಯನ್ನು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಹಣಮಂತಪ್ಪ ಎಚ್ ಅಬ್ಬಿಗೇರಿ ನೇತೃತ್ವದಲ್ಲಿ ಮಾನವ ಸರಪಳಿಯನ್ನು ನಿರ್ಮಿಸಿ ಪ್ರತಿಭಟನೆ ನಡೆಸಿ ಮಾತನಾಡಿದರು.

“ಥಗ್ ಲೈಫ್ ಚಲನಚಿತ್ರವನ್ನು ಕರ್ನಾಟಕ ರಾಜ್ಯಾದಲ್ಲಿ ಬಿಡುಗಡೆ ಮಾಡಬಾರದು. ಕರ್ನಾಟಕ ವಾಣಿಜ್ಯ ಚಿತ್ರಮಂಡಳಿಗೆ ಒತ್ತಾಯಿಸುತ್ತೇವೆ. ಒಂದು ವೇಳೆ ಗದಗ ಜಿಲ್ಲೆಯಲ್ಲಿ ಈ ಚಿತ್ರ ಬಿಡುಗಡೆಯಾದರೆ ಚಿತ್ರಮಂದಿರಕ್ಕೆ ಬೆಂಕಿ ಹಚ್ಚುತ್ತೇವೆ” ಎಂದು ಎಚ್ಚರಿಕೆಯನ್ನು ನೀಡಿದರು.

Advertisements

“ಕನ್ನಡ ಭಾಷೆ ಎರಡು ಸಾವಿರ ವರ್ಷಗಳ ಇತಿಹಾಸವನ್ನು ಹೊಂದಿರುವ ಭಾಷೆಯಾಗಿದೆ. ಕನ್ನಡ ಭಾಷೆಯಲ್ಲಿ ಅನೇಕ ಪ್ರಸಿದ್ಧ ಶರಣರು, ಸಂತರು, ದಾರ್ಶನಿಕರು, ರಾಜ ಮಹಾರಾಜರು, ಕವಿಗಳು, ಲೇಖಕರು, ಇತಿಹಾಸಕರರ ದೇಶದಲ್ಲಿಯೇ ಪ್ರಸಿದ್ಧಿಯನ್ನು ಪಡೆದಿದ್ದಾರೆ. ಕನ್ನಡ ಅನೇಕ ಕಲಾವಿದರು ಸಹ ದೇಶದಲ್ಲಿ ತಮ್ಮದೇ ಆದ ಪ್ರತಿಭೆಯನ್ನು ತೋರಿಸಿದ್ದಾರೆ. ಕನ್ನಡಕ್ಕೆ ಭಾರತ ದೇಶದಲ್ಲಿಯೇ ಅತಿ ಹೆಚ್ಚು ಎಂಟು ಜ್ಞಾನಪೀಠ ಪ್ರಶಸ್ತಿಯನ್ನು ಪಡೆದಿದ್ದಾರೆ. ಇಂತಹ ಶ್ರೀಮಂತ ಭಾಷೆಯನ್ನು ಅವಮಾನಿಸಿರುವ ಕಮಲ್ ಹಾಸನ್ ಅವರ ಹೇಳಿಕೆ ಅತ್ಯಂತ ಕೀಳುಮಟ್ಟದ್ದಾಗಿದೆ. ಈ ಕೂಡಲೇ ಕನ್ನಡಿಗರ ಕ್ಷಮೆ ಯಾಚಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ನಾನು ಸೌಮ್ಯ ವ್ಯಕ್ತಿಯಾಗಿದ್ದರೂ ನನ್ನೊಳಗೆ ಕ್ರಾಂತಿ, ಬಂಡಾಯ ಅಡಗಿತ್ತು: ಕವಿ ಸತೀಶ ಕುಲಕರ್ಣಿ

ಪ್ರತಿಭಟನೆಯಲ್ಲಿ ಕರವೇ ಮುಖಂಡರು ಬಸವರಾಜ ಹೊಗೆಸೊಪ್ಪಿನ, ನಿಂಗನಗೌಡ ಮಾಲಿಪಾಟೀಲ, ವಿನಾಯಕ ಬದಿ, ನಬೀಸಾಬ ಕಿಲ್ಲೇದಾರ, ಆಶಾ ಜೂಲಗುಡ್ಡ, ತೌಸಿಫ ಢಾಲಾಯತ, ಮುತ್ತಣ್ಣ ಚವಡಣ್ಣವರ, ದಾದಾಪೀರ ನದಾಫ, ದಾವಲಸಾಬ ತಹಶೀಲ್ದಾರ, ಯಲ್ಲಪ್ಪ ಭೋವಿ, ಲೋಕೇಶ ಸುತಾರ, ಪ್ರವೀಣ ಗಾಣಗೇರ, ಚನ್ನಬಸಯ್ಯ ಗಡ್ಡದೇವರಮಠ, ಸಿರಾಜ್ ಹೊಸಮನಿ, ರಜಾಕ್ ಢಾಲಾಯತ, ಬಸವರಾಜ ರಗಟಿ, ಗೌಸು ಶಿರಹಟ್ಟಿ, ಮಹಾದೇವಿ ದೊಡ್ಡಗೌಡ್ರ, ಪ್ರಕಾಶ ಹುಡೇದ, ರಾಮನಗೌಡ ಹಳೇಮನಿ, ಹುಸೇನಸಾಬ ಕುಂಡಾಲಿ, ಮಾರುತಿ ಈಳಗೇರ, ಕೊಂಚಿಗೇರಮಠ, ಸೇರಿದಂತೆ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X