ಗದಗ | ಪೌರ ಕಾರ್ಮಿಕರ ಬೇಡಿಕೆಗಳನ್ನು ರಾಜ್ಯ ಸರಕಾರ ಈಡೇರಿಸಬೇಕು: ಶಿವಕುಮಾರ ರಾಮನಕೊಪ್ಪ

Date:

Advertisements

“ರಾಜ್ಯಾದ್ಯಂತ ಸಫಾಯಿ ಪೌರ ಕಾರ್ಮಿಕರು ಶ್ರದ್ಧೆಯಿಂದ ದುಡಿದರೂ ಮೂಲಭೂತ ಸೌಲಭ್ಯಗಳು ಲಭ್ಯವಿಲ್ಲ. ಬಹುಪಾಲು ಪೌರ ಕಾರ್ಮಿಕರು ತಾತ್ಕಾಲಿಕ ಗುತ್ತಿಗೆ ಆಧಾರದ ಮೇಲೆ ಕೆಲಸವನ್ನು ಮಾಡುತ್ತಿದ್ದು, ಕಾಯಂ ಉದ್ಯೋಗ ಸಮರ್ಪಕ ವೇತನ, ಆರೋಗ್ಯ ವಿಮೆ ಕೂಡಲೇ ಕೂಡಬೇಕು. ಪೌರ ಕಾರ್ಮಿಕರ ಬೇಡಿಕೆಗಳನ್ನು ರಾಜ್ಯ ಸರಕಾರ ಈಡೇರಿಸಬೇಕು” ಎಂದು ನವ ಕರ್ನಾಟಕ ಜನಪರ ಅಭಿವೃದ್ಧಿ ವೇದಿಕೆ ಜಿಲ್ಲಾಧ್ಯಕ್ಷ ಶಿವಕುಮಾರ ರಾಮನಕೊಪ್ಪ ಒತ್ತಾಯಿಸಿದರು.

ಗದಗ ಪಟ್ಟಣದಲ್ಲಿ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ ಕುಳಿತ ಗದಗ ಬೆಟಗೇರಿ ನಗರಸಭೆಯ ಪೌರಕಾರ್ಮಿಕರ ಪ್ರತಿಭಟನೆಗೆ ನವ ಕರ್ನಾಟಕ ಜನಪರ ಅಭಿವೃದ್ಧಿ ವೇದಿಕೆ ಬೆಂಬಲಿಸಿ ಮಾತನಾಡಿದರು.

“ನಗರದ ಸ್ವಚ್ಛತೆಯ ಹಿಂದೆ ನಿಂತಿರುವ ಅಜ್ಞಾತ ಶಕ್ತಿಗಳು ಪೌರ ಕಾರ್ಮಿಕರಾಗಿದ್ದು, ಬೆಳಗಿನ ಜಾವದಿಂದಲೇ ಬೀದಿಗಳ ಸ್ವಚ್ಛತೆ, ಕಸದ ಸಂಗ್ರಹಣೆ, ಗಟಾರು ಸ್ವಚ್ಛಗೊಳಿಸುವ ಕಾಯಕ ಮಾಡುತ್ತಾರೆ. ಅಪಾಯಕರ ಹಾಗೂ ಶ್ರಮದ ಕೆಲಸಗಳನ್ನು ನಿರಂತರವಾಗಿ ನಿರ್ವಹಿಸುವ ಈ ಕಾರ್ಮಿಕರು ತಮ್ಮ ಹಕ್ಕುಗಳಿಗಾಗಿ ಬಹಳ ದಿನಗಳಿಂದ ಹಲವು ಬೇಡಿಕೆಗಳನ್ನು ಮುಂದಿಟ್ಟು ಹೋರಾಟ ಮಾಡುತ್ತಿದ್ದಾರೆ” ಎಂದರು.

Advertisements

ರಾಜ್ಯ ಅದ್ಯಕ್ಷರು ಪಿ.ಸುಬ್ರಮಣ್ಯಂ ರೆಡ್ಡಿ ಮಾತನಾಡಿ, “ಎಲ್ಲಾ ಪೌರ ಕಾರ್ಮಿಕರಿಗೆ ಖಾಯಂ ಉದ್ಯೋಗದ ಭರವಸೆ ಈ ಕೂಡಲೇ ಕೊಡಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ನಾನು ಸೌಮ್ಯ ವ್ಯಕ್ತಿಯಾಗಿದ್ದರೂ ನನ್ನೊಳಗೆ ಕ್ರಾಂತಿ, ಬಂಡಾಯ ಅಡಗಿತ್ತು: ಕವಿ ಸತೀಶ ಕುಲಕರ್ಣಿ

ಧರಣಿಯಲ್ಲಿ ಕಾರ್ಮಿಕ ಘಟಕ ರಾಜ್ಯಾದ್ಯಕ್ಷರು ಶಿವಾನಂದಯ್ಯ ಹಿರೇಮಠ, ರಾಜ್ಯ ನಿರ್ದೇಶಕರು ಎಮ್. ಎಸ.ಪರ್ವತಗೌಡ್ರ, ರಾಜ್ಯ ಕಾರ್ಯದರ್ಶಿ ಯು.ಆರ್. ಬೂಸನೂರಮಠ, ರಾಜ್ಯ ವಕ್ತಾರರು ಪ್ರಭಾಕರ್ ಹೆಬಸೂರ, ಪೌರ ಕಾರ್ಮಿಕರ ಮುಷ್ಕರವನ್ನು ಬೆಂಬಲಿಸಿ ಮಾತನಾಡಿದರು. ರಾಮು.ಪಿ.ಬಳ್ಳಾರಿ ಎಲ್ಲರನ್ನೂ ಸ್ವಾಗತಿಸಿದರು ವೇದಿಕೆಯ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

Download Eedina App Android / iOS

X